ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಮುದ್ದೇಬಿಹಾಳ : ಸವಿತ ಮಹರ್ಷಿಗಳ ಆದರ್ಶಗಳನ್ನು ಸಮಾಜದ ಬಾಂಧವರು ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಬರಬೇಕು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಿಕ್ಸೂಚಿ ಭಾಷಣ ಮಾಡಿದ ಸಂಶೋಧಕ ಮಹೇಶ ತೇಲಂಗಿ , “ಇಡೀ ಜಗತ್ತಿಗೆ ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದ ದಾರಿ ತೋರಿಸಿದ ಉಪನಯನ ಸಂಸ್ಕಾರದ ಜನಕರು ಶ್ರೀ ಸವಿತ ಮಹರ್ಷಿಗಳು. ಸವಿತ ಸಮಾಜವು ಕೇವಲ ಒಂದು ಸಮುದಾಯವಲ್ಲ, ಅದು ವಿಶ್ವದ ಪ್ರಥಮ ವೈದ್ಯಕೀಯ ಪರಂಪರೆಯ ತಾಯಿಬೇರು.”ಸಾಮವೇದವನ್ನು ಗಾಯನ ರೂಪದಲ್ಲಿ ನೀಡಿದ ಕೀರ್ತಿ ಈ ಮಹರ್ಷಿಗಳಿಗೆ ಸಲ್ಲುತ್ತದೆ. ಋಗ್ವೇದ ಪಠಣ ಪುರೋಹಿತರಿಗೆ ಸೀಮಿತವಾದರೆ, ನಾದಸ್ವರದ ಮೂಲಕ ಸಾಮವೇದ ಮೊಳಗಿಸುವ ಸವಿತ ಸಮಾಜದ ಕಲೆ ಸರ್ವರಿಗೂ ತಲುಪಿದೆ. ನಂದವAಶದ ಸ್ಥಾಪಕ ಮಹಾಪದ್ಮನಂದರು, ಪ್ಲಾಸ್ಟಿಕ್ ಸರ್ಜರಿ ಪರಿಚಯಿಸಿದ ಆದಿ ವೈದ್ಯರು ಇದೇ ಸಮಾಜದವರು ಎಂಬುದು ಹೆಮ್ಮೆಯ ಸಂಗತಿ ಎಂದರು.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA. ಬೆಳಗಲ್ ಮಾತನಾಡಿ, ಶಿವನ ಬಲಗಣ್ಣಿನಿಂದ ಉದ್ಭವಿಸಿದ ಸವಿತ ಮಹರ್ಷಿಗಳು 1875 ಶ್ಲೋಕಗಳ ಮೂಲಕ ಜ್ಞಾನದೀಪ್ತಿ ಬೆಳಗಿದ್ದಾರೆ ಎಂದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಸವಿತಾ ಸಮಾಜವು ನಾಟಿ ವೈದ್ಯಪದ್ಧತಿಯ ಮೂಲಕ ಜನಸಾಮಾನ್ಯರ ಜೊತೆ ಬೆರೆತ ‘ಸ್ನೇಹ ಸಮಾಜ’ ಎಂದು ಶ್ಲಾಘಿಸಿದರು.

ಶಿರಸ್ತೇದಾರ ಎಂ.ಎ.ಬಾಗೇವಾಡಿ, ಮುಖ್ಯ ಪಶುವೈದ್ಯಾಧಿಕಾರಿ ಶಿವಾನಂದ ಮೇಟಿ, ಎಎಸೈ ಅಮರಪ್ಪ ಸಾಲಿ, ಕಂದಾಯ ನಿರೀಕ್ಷಕ ಪವನ ತಳವಾರ, ಸಮಾಜದ ಅಧ್ಯಕ್ಷ ರವಿ ತೇಲಂಗಿ ಹಾಗೂ ಗೌರವ ಅಧ್ಯಕ್ಷ ಮಲ್ಲಣ್ಣ ತೇಲಂಗಿ,ಸಮಾಜದ ಪ್ರಮುಖರಾದ ದೇವೇಂದ್ರ ಶಹಾಪೂರ, ಈರಣ್ಣ ಇಡ್ಲೂರ, ಅಪ್ಪು ಶಹಾಪೂರ, ಶರಣಪ್ಪ ಮಸಾಲಜಿ, ಶ್ರೀನಿವಾಸ ಶಹಾಪೂರ, ಪ್ರವೀಣ ಮಸಾಲಜಿ, ಶ್ರೀಕಾಂತ ತೇಲಂಗಿ, ಕುಮಾರ್ ತೇಲಂಗಿ, ಸುರೇಶ್ ಮಸಾಲಜಿ, ಶಂಕ್ರಪ್ಪ ಹಡಪದ, ಭೀಮಣ್ಣ ಬಳವಾಟ, ಶಂಕರಪ್ಪ ಅಮರಗೋಳ, ತಿಪ್ಪಣ್ಣ ಶಹಾಪೂರ, ರಾಘವ್ ತೇಲಂಗಿ, ಗೌತಮ್ ಚಿಗನೂರ ಮತ್ತು ಕಾರ್ಮಿಕ ಇಲಾಖೆಯ ಸಿದ್ದು ನಾವಿ ಸೇರಿದಂತೆ ಸವಿತ ಹಾಗೂ ಹಡಪದ ಸಮಾಜದ ಬಂಧುಗಳು ಭಾಗವಹಿಸಿದ್ದರು.

ಶಿಕ್ಷಕ ಎಂ.ಬಿ. ಗುಡಗುಂಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಸವಿತ ಮಹರ್ಷಿ ವೃತ್ತದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,