ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಮುದ್ದೇಬಿಹಾಳ : ಸ್ಥಳೀಯ ಕಲಾವಿದರ ನೇತೃತ್ವದಲ್ಲಿ ಚಿಗುರು ಕಲಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮ ನ.11 ರಂದು ಪಟ್ಟಣದ ಪುರಸಭೆಯ ಎದುರಿಗಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಮದ್ಯಾಹ್ನ 1.30 ಗಂಟೆಯಿAದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುವುದು.ಸಾಯಂಕಾಲ 4 ಗಂಟೆಗೆ ಟ್ರ‍್ಯಾಕ್ಸ್, ಕಾರು ಹಾಗೂ ಆಟೋಗಳಿಂದ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ನಡೆಯಲಿದೆ ಎಂದು ಬಳಗದ ಸದಸ್ಯ ಗೋಪಾಲ ಹೂಗಾರ, ಶ್ರೀಶೈಲ್ ಹೂಗಾರ ತಿಳಿಸಿದರು.

ಸಂಜೆ 7 ಗಂಟೆಗೆ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕಲಾವಿದರಾದ ಮ್ಯೂಜಿಕ್ ಮೈಲಾರಿ ಹಾಗೂ ಗಾಯಕಿ ತೃಪ್ತಿ ಧಾರವಾಡ ಅವರಿಗೆ ಸನ್ಮಾನಿಸಲಾಗುವುದು.ಪಟ್ಟಣದ ಪ್ರೌಢ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಹಾಲಿ, ಮಾಜಿ ಶಾಸಕರು, ಜನಪ್ರತಿನಿಧಿಗಳು,ಸಮಾಜ ಸೇವಕರು, ಗಣ್ಯರು ಆಗಮಿಸುವರು ಎಂದು ಅವರು ತಿಳಿಸಿದರು.

ಕಲಾವಿದರಾದ ಮುನೀರ ಅವಟಗೇರಿ,ವಿನಾಯಕ ಭಟ್, ನಿಜಾಮ್ ಬಾಗೇವಾಡಿ , ಹನಮಂತ ಮಹಾಲಿಂಗಪೂರ, ಮಲ್ಲು ತಟ್ಟಿ, ಸುನೀಲ ಬಿಸನಾಳ, ಅಟೋ ಕುಮಾರ ,ಮೌನೇಶ ಬಡಿಗೇರ, ಪ್ರಸನ್ನ ಪಾಟೀಲ ಇದ್ದರು.

Latest News

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು. ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ  ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಎಎಸ್ಐ ಎಂ.ಪಿ.ಹೋಕಳೆ, ಪೊಲೀಸ ಸಿಬ್ಬಂದಿ ಬಸವರಾಜ ಸಜ್ಜನ ಹಾಗೂ ತಂಗಡಗಿ ಗ್ರಾಮದ ವಿಕಾಸ ಕಮಲಾಪೂರ ಹಾಗೂ ಬಂಡಿನಾಥ ಕಮಲಾಪೂರ ,ರವಿ ಹಾಲ್ಯಾಳ ಅವರನ್ನು ಸನ್ಮಾನಿಸಲಾಯಿತು. ಎಎಸ್ಐ ಎಂ.ಪಿ.ಹೋಕಳೆ ಧ್ವಜಾರೋಹಣ ಮಾಡಿದರು.ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡರಾದ ರಾಜುಗೌಡ ಕೊಂಗಿ,ಸ್ನೇಹಸಿರಿ ಸೇವಾ ಸಂಘದ ಸಂಚಾಲಕ ಬಸವರಾಜ ನಿಡಗುಂದಿ ಸೇರಿದಂತೆ