ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಮುದ್ದೇಬಿಹಾಳ : ಸ್ಥಳೀಯ ಕಲಾವಿದರ ನೇತೃತ್ವದಲ್ಲಿ ಚಿಗುರು ಕಲಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮ ನ.11 ರಂದು ಪಟ್ಟಣದ ಪುರಸಭೆಯ ಎದುರಿಗಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಮದ್ಯಾಹ್ನ 1.30 ಗಂಟೆಯಿAದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುವುದು.ಸಾಯಂಕಾಲ 4 ಗಂಟೆಗೆ ಟ್ರ‍್ಯಾಕ್ಸ್, ಕಾರು ಹಾಗೂ ಆಟೋಗಳಿಂದ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ನಡೆಯಲಿದೆ ಎಂದು ಬಳಗದ ಸದಸ್ಯ ಗೋಪಾಲ ಹೂಗಾರ, ಶ್ರೀಶೈಲ್ ಹೂಗಾರ ತಿಳಿಸಿದರು.

ಸಂಜೆ 7 ಗಂಟೆಗೆ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕಲಾವಿದರಾದ ಮ್ಯೂಜಿಕ್ ಮೈಲಾರಿ ಹಾಗೂ ಗಾಯಕಿ ತೃಪ್ತಿ ಧಾರವಾಡ ಅವರಿಗೆ ಸನ್ಮಾನಿಸಲಾಗುವುದು.ಪಟ್ಟಣದ ಪ್ರೌಢ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಹಾಲಿ, ಮಾಜಿ ಶಾಸಕರು, ಜನಪ್ರತಿನಿಧಿಗಳು,ಸಮಾಜ ಸೇವಕರು, ಗಣ್ಯರು ಆಗಮಿಸುವರು ಎಂದು ಅವರು ತಿಳಿಸಿದರು.

ಕಲಾವಿದರಾದ ಮುನೀರ ಅವಟಗೇರಿ,ವಿನಾಯಕ ಭಟ್, ನಿಜಾಮ್ ಬಾಗೇವಾಡಿ , ಹನಮಂತ ಮಹಾಲಿಂಗಪೂರ, ಮಲ್ಲು ತಟ್ಟಿ, ಸುನೀಲ ಬಿಸನಾಳ, ಅಟೋ ಕುಮಾರ ,ಮೌನೇಶ ಬಡಿಗೇರ, ಪ್ರಸನ್ನ ಪಾಟೀಲ ಇದ್ದರು.

Latest News

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ ಜೊತೆಗೆ ಅನಿಷ್ಠ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಜಾಗೃತಿ ಮೂಡಿಸಿದ್ದರು ಎಂದು ಹೆಸ್ಕಾಂ ಎಇಇ ಆರ್.ಆರ್.ಹಂಡಿ ಹೇಳಿದರು. ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಾಮಾಜಿಕ ಅಸಮಾನತೆ,ಜಾತೀಯತೆ,ಅಸ್ಪೃಶ್ಯತೆಯ ವಿರುದ್ಧ ಹಿಂದಿನ ಕಾಲದಲ್ಲಿ ಶರಣರು,ಸಮಾಜ ಸುಧಾರಕರು ಹೋರಾಡಿದ್ದಾರೆ.ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು