ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಮುದ್ದೇಬಿಹಾಳ : ಸ್ಥಳೀಯ ಕಲಾವಿದರ ನೇತೃತ್ವದಲ್ಲಿ ಚಿಗುರು ಕಲಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮ ನ.11 ರಂದು ಪಟ್ಟಣದ ಪುರಸಭೆಯ ಎದುರಿಗಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಮದ್ಯಾಹ್ನ 1.30 ಗಂಟೆಯಿAದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುವುದು.ಸಾಯಂಕಾಲ 4 ಗಂಟೆಗೆ ಟ್ರ‍್ಯಾಕ್ಸ್, ಕಾರು ಹಾಗೂ ಆಟೋಗಳಿಂದ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ನಡೆಯಲಿದೆ ಎಂದು ಬಳಗದ ಸದಸ್ಯ ಗೋಪಾಲ ಹೂಗಾರ, ಶ್ರೀಶೈಲ್ ಹೂಗಾರ ತಿಳಿಸಿದರು.

ಸಂಜೆ 7 ಗಂಟೆಗೆ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕಲಾವಿದರಾದ ಮ್ಯೂಜಿಕ್ ಮೈಲಾರಿ ಹಾಗೂ ಗಾಯಕಿ ತೃಪ್ತಿ ಧಾರವಾಡ ಅವರಿಗೆ ಸನ್ಮಾನಿಸಲಾಗುವುದು.ಪಟ್ಟಣದ ಪ್ರೌಢ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಹಾಲಿ, ಮಾಜಿ ಶಾಸಕರು, ಜನಪ್ರತಿನಿಧಿಗಳು,ಸಮಾಜ ಸೇವಕರು, ಗಣ್ಯರು ಆಗಮಿಸುವರು ಎಂದು ಅವರು ತಿಳಿಸಿದರು.

ಕಲಾವಿದರಾದ ಮುನೀರ ಅವಟಗೇರಿ,ವಿನಾಯಕ ಭಟ್, ನಿಜಾಮ್ ಬಾಗೇವಾಡಿ , ಹನಮಂತ ಮಹಾಲಿಂಗಪೂರ, ಮಲ್ಲು ತಟ್ಟಿ, ಸುನೀಲ ಬಿಸನಾಳ, ಅಟೋ ಕುಮಾರ ,ಮೌನೇಶ ಬಡಿಗೇರ, ಪ್ರಸನ್ನ ಪಾಟೀಲ ಇದ್ದರು.

Latest News

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು ಪಾಲ್ಗೊಳ್ಳುವ ಮೂಲಕ ಗೌರವ ಸಲ್ಲಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎ.ಗಣೇಶ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ದೊಡ್ಡ ಶರಣರು,ನಾಯಕರ ಜಯಂತಿ ಕಾರ್ಯಕ್ರಮಗಳಿಗೆ ಅಷ್ಟೇ ಅಧಿಕಾರಿಗಳು ಆದ್ಯತೆ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ