ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಮುದ್ದೇಬಿಹಾಳ : ಸ್ಥಳೀಯ ಕಲಾವಿದರ ನೇತೃತ್ವದಲ್ಲಿ ಚಿಗುರು ಕಲಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮ ನ.11 ರಂದು ಪಟ್ಟಣದ ಪುರಸಭೆಯ ಎದುರಿಗಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಮದ್ಯಾಹ್ನ 1.30 ಗಂಟೆಯಿAದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುವುದು.ಸಾಯಂಕಾಲ 4 ಗಂಟೆಗೆ ಟ್ರ‍್ಯಾಕ್ಸ್, ಕಾರು ಹಾಗೂ ಆಟೋಗಳಿಂದ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ನಡೆಯಲಿದೆ ಎಂದು ಬಳಗದ ಸದಸ್ಯ ಗೋಪಾಲ ಹೂಗಾರ, ಶ್ರೀಶೈಲ್ ಹೂಗಾರ ತಿಳಿಸಿದರು.

ಸಂಜೆ 7 ಗಂಟೆಗೆ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕಲಾವಿದರಾದ ಮ್ಯೂಜಿಕ್ ಮೈಲಾರಿ ಹಾಗೂ ಗಾಯಕಿ ತೃಪ್ತಿ ಧಾರವಾಡ ಅವರಿಗೆ ಸನ್ಮಾನಿಸಲಾಗುವುದು.ಪಟ್ಟಣದ ಪ್ರೌಢ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಹಾಲಿ, ಮಾಜಿ ಶಾಸಕರು, ಜನಪ್ರತಿನಿಧಿಗಳು,ಸಮಾಜ ಸೇವಕರು, ಗಣ್ಯರು ಆಗಮಿಸುವರು ಎಂದು ಅವರು ತಿಳಿಸಿದರು.

ಕಲಾವಿದರಾದ ಮುನೀರ ಅವಟಗೇರಿ,ವಿನಾಯಕ ಭಟ್, ನಿಜಾಮ್ ಬಾಗೇವಾಡಿ , ಹನಮಂತ ಮಹಾಲಿಂಗಪೂರ, ಮಲ್ಲು ತಟ್ಟಿ, ಸುನೀಲ ಬಿಸನಾಳ, ಅಟೋ ಕುಮಾರ ,ಮೌನೇಶ ಬಡಿಗೇರ, ಪ್ರಸನ್ನ ಪಾಟೀಲ ಇದ್ದರು.

Latest News

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.