ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಮುದ್ದೇಬಿಹಾಳ : ಸ್ಥಳೀಯ ಕಲಾವಿದರ ನೇತೃತ್ವದಲ್ಲಿ ಚಿಗುರು ಕಲಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮ ನ.11 ರಂದು ಪಟ್ಟಣದ ಪುರಸಭೆಯ ಎದುರಿಗಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಮದ್ಯಾಹ್ನ 1.30 ಗಂಟೆಯಿAದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುವುದು.ಸಾಯಂಕಾಲ 4 ಗಂಟೆಗೆ ಟ್ರ‍್ಯಾಕ್ಸ್, ಕಾರು ಹಾಗೂ ಆಟೋಗಳಿಂದ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ನಡೆಯಲಿದೆ ಎಂದು ಬಳಗದ ಸದಸ್ಯ ಗೋಪಾಲ ಹೂಗಾರ, ಶ್ರೀಶೈಲ್ ಹೂಗಾರ ತಿಳಿಸಿದರು.

ಸಂಜೆ 7 ಗಂಟೆಗೆ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದಲ್ಲಿ ಕಲಾವಿದರಾದ ಮ್ಯೂಜಿಕ್ ಮೈಲಾರಿ ಹಾಗೂ ಗಾಯಕಿ ತೃಪ್ತಿ ಧಾರವಾಡ ಅವರಿಗೆ ಸನ್ಮಾನಿಸಲಾಗುವುದು.ಪಟ್ಟಣದ ಪ್ರೌಢ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನವನ್ನು ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಹಾಲಿ, ಮಾಜಿ ಶಾಸಕರು, ಜನಪ್ರತಿನಿಧಿಗಳು,ಸಮಾಜ ಸೇವಕರು, ಗಣ್ಯರು ಆಗಮಿಸುವರು ಎಂದು ಅವರು ತಿಳಿಸಿದರು.

ಕಲಾವಿದರಾದ ಮುನೀರ ಅವಟಗೇರಿ,ವಿನಾಯಕ ಭಟ್, ನಿಜಾಮ್ ಬಾಗೇವಾಡಿ , ಹನಮಂತ ಮಹಾಲಿಂಗಪೂರ, ಮಲ್ಲು ತಟ್ಟಿ, ಸುನೀಲ ಬಿಸನಾಳ, ಅಟೋ ಕುಮಾರ ,ಮೌನೇಶ ಬಡಿಗೇರ, ಪ್ರಸನ್ನ ಪಾಟೀಲ ಇದ್ದರು.

Latest News

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೂಲಿ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುದ್ದೇಬಿಹಾಳ : ಕೂಲಿಕಾರ್ಮಿಕನೊಬ್ಬ ಸಾಲದ ಬಾಧೆ ತಾಳದೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಸಿಂಚನಾ ಸಜ್ಜನ ಸೈನಿಕ ಶಾಲೆಗೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹಳ್ಳೂರ ಕ್ರಾಸ್ ನಲ್ಲಿರುವ ಹೊಸನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಫಾಸ್ಟ್ ,ಜಂಕ್ ಫುಡ್ ಆರೋಗ್ಯಕ್ಕೆ ಮಾರಕ-ವಿ.ಜಿ.ರಾಮಚಂದ್ರಯ್ಯ

ಮುದ್ದೇಬಿಹಾಳ : ಫಾಸ್ಟ್ ಫುಡ್,ಜಂಕ್ ಫುಡ್‌ನಿಂದ ದೇಹದ ಮೇಲಿನ ದುಷ್ಪರಿಣಾಮ ಬೀರುತ್ತದೆ.ಅಂತಹ ಆಹಾರ ಪದಾರ್ಥಗಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಜಾಗೃತಿಯೊಂದೇ ಏಡ್ಸ್ ನಿಯಂತ್ರಣಕ್ಕೆ ಮಾರ್ಗ – ಅನಸೂಯಾ ತೇರದಾಳ

ಮುದ್ದೇಬಿಹಾಳ : ಇಂದಿನ ಯುವಕ, ಯುವತಿಯರು ಏಡ್ಸ್ ಹಾಗೂ ಟಿಬಿಯಂತ ಮಾರಕ ರೋಗಗಳ ಬಗ್ಗೆ

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ : ಚಾಲಕ್

ಮುದ್ದೇಬಿಹಾಳ : ಮನುಕುಲಕ್ಕೆ ಮಾರ್ಗದರ್ಶಿಯಾದ ಸರ್ವಜ್ಞರ ತ್ರಿಪದಿಗಳು ಇಂದಿಗೂ ಸಾರ್ವಕಾಲಿಕ ಸತ್ಯಗಳಾಗಿವೆ. ತಮ್ಮ ಸರಳ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ತ್ರಿಪದಿ ಕವಿ, ಸರ್ವಜ್ಞರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಲೋಕಕ್ಕೆ ಸರ್ವಜ್ಞರ ಕೊಡುಗೆ ಅಪಾರ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ಸ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಫೆ.22 ರಂದು ಬೆಳಗ್ಗೆ 10ಕ್ಕೆ ಆಕ್ಸಫರ್ಡ್ ಚಾಂಪಿಯನ್ ಅವಾರ್ಡ ಪರೀಕ್ಷೆ ಹಾಗೂ ನಾಗರಬೆಟ್ಟದಲ್ಲಿ ಅದೇ ದಿನ ಆಕ್ಸಫರ್ಡ್ ಪಾಟೀಲ್ಸ್ ಸೀನಿಯರ್ ಜೀನಿಯಸ್ ಅವಾರ್ಡ್ ಪರೀಕ್ಷೆಗಳನ್ನು ತರಗತಿವಾರು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಎಂ.ಪಾಟೀಲ ತಿಳಿಸಿದರು. ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ