Former MLA Nadahalli outraged by unscientific crop survey

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಮುದ್ದೇಬಿಹಾಳ : ಅತೀವೃಷ್ಟಿಯಿಂದ ಹಾನಿಯಾದ ಬೆಳೆಗೆ ನ್ಯಾಯಯುತವಾಗಿ ದೊರೆಯಬೇಕಾದ ಪರಿಹಾರವನ್ನು ರೈತರಿಗೆ ಕೊಡುವುದನ್ನು ಬಿಟ್ಟು ಬೆಳೆ ಹಾನಿ ಅಂದಾಜು ಜಂಟಿ ಸಮೀಕ್ಷೆ ಹೆಸರಿನಲ್ಲಿ ನಡೆಸಿರುವ ‘ಡ್ರಾಮಾ’ ಕೈಬಿಟ್ಟು ವಾಸ್ತವ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ 30 ಸಾವಿರ ರೂ.ಪರಿಹಾರ ರೈತರಿಗೆ ಒದಗಿಸಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು.

ತಾಲ್ಲೂಕಿನ ಇಂಗಳಗೇರಿ, ಮಡಿಕೇಶ್ವರ, ಢವಳಗಿ, ರೂಢಗಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಬೆಳೆ ಹಾನಿಯಾಗಿರುವ ಕುರಿತು ಸರ್ಕಾರದ ಅಧಿಕಾರಿಗಳು ಜಂಟಿ ಸಮೀಕ್ಷೆಯ ವರದಿಯನ್ನು ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಳೆ ಹಾನಿ ಸಂಭವಿಸಿದ ರೈತರ ಜಮೀನುಗಳಲ್ಲಿ ಹಾನಿ ಉಂಟಾದ ಪ್ರಮಾಣವನ್ನು ಜಂಟಿ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿದೆ. ಪಂಚಾಯಿತಿವಾರು ಸಮೀಕ್ಷೆ ವರದಿಯನ್ನು ಅವಲೋಕಿಸಿದರೆ ಕೆಲವೇ ರೈತರಿಗೆ ಪರಿಹಾರವನ್ನು ಕೊಡುವ ಕಾರ್ಯ ಸರ್ಕಾರದಿಂದ ಮಾಡಲಾಗುತ್ತಿದೆ. ಇಂಗಳಗೇರಿ ಪಂಚಾಯಿತಿಯಲ್ಲಿ 188, ಮಡಿಕೇಶ್ವರ ಗ್ರಾಪಂನಲ್ಲಿ 128, ಢವಳಗಿ ಗ್ರಾಪಂನಲ್ಲಿ 68 ರೈತರ ಹೆಸರು ಬೆಳೆಹಾನಿ ಪಟ್ಟಿಯಲ್ಲಿ ಗುರುತಿಸಲಾಗಿದೆ. ಈ ಭಾಗದಲ್ಲಿ ತೊಗರಿ, ಹತ್ತಿ, ಈರುಳ್ಳಿ, ಬಾಳೆ ಮೊದಲಾದ ಬೆಳೆಗಳು ಶೇ75ರಷ್ಟು ಹಾನಿ ಉಂಟಾಗಿದೆ. ಆದರೆ, ಆಯ್ದ ರೈತರಿಗೆ ಅದರಲ್ಲೂ ಎರಡು ಎಕರೆ ಮೀರದಂತೆ ಹಾನಿ ಸಂಭವಿಸಿರುವುದಾಗಿ ಪಟ್ಟಿಯಲ್ಲಿ ಅಧಿಕಾರಿಗಳು ತೋರಿಸಿದ್ದಾರೆ. ಕೆಲವು ರೈತರ ಜಮೀನುಗಳಲ್ಲಿ ಭಾಗಶಃ ಹಾನಿ ಸಂಭವಿಸಿದ್ದರೂ ಅದಕ್ಕೆ 2 ಎಕರೆ ಒಳಗಡೆ ಮಿತಿ ವಿಧಿಸಿರುವುದು ಅವೈಜ್ಞಾನಿಕವಾಗಿದೆ. ಅಧಿಕಾರಿಗಳು ಎಲ್ಲೋ ಕೂತು ತಮಗೆ ಬೇಕಾದ ರೈತರ ಹೆಸರುಗಳನ್ನು ಆಯ್ಕೆ ಮಾಡಿ ಪಟ್ಟಿ ಲಗತ್ತಿಸಿ ಆಕ್ಷೇಪಣೆ ಆಹ್ವಾನಿಸಿದ್ದಾರೆ. ಕೆಲವು ರೈತರಿಗೆ ಪಂಚಾಯಿತಿಯಲ್ಲಿ ಪಟ್ಟಿ ಅಂಟಿಸಿದ್ದಾರೆ ಎಂಬುದೇ ಗೊತ್ತಿಲ್ಲ ಎಂದು ಹೇಳಿದರು.

ಮಡಿಕೇಶ್ವರ ಗ್ರಾಮದಲ್ಲಿ ರೈತ ತುಂಬಗಿ ಮಾತನಾಡಿ, ನಮ್ಮದು 5 ಎಕರೆ ಜಮೀನಿನಲ್ಲಿ ಹತ್ತಿ ಬಿತ್ತಿದ್ದೇವು. ಅತೀವೃಷ್ಟಿಯಿಂದ ಬೆಳೆಗೆ ತಾಮ್ರ ರೋಗ ಬಂದಿದೆ. ಬೆಳೆ ಸಂಪೂರ್ಣ ಹಾನಿಯಾಗಿದ್ದು ಅದಕ್ಕಾಗಿ ಎಕರೆಗೆ 30-40 ಸಾವಿರ ರೂ.ಖರ್ಚು ಮಾಡಿದ್ದೇವೆ. ಈಗ ಪಂಚಾಯಿತಿಯಲ್ಲಿ ಹಚ್ಚಿರುವ ಲೀಸ್ಟ್ ನಲ್ಲಿ ನಮ್ಮ ಹೆಸರಿಲ್ಲ ಎಂದು ಹೇಳಿದರು.

ಬಳವಾಟ ಭಾಗದ ರೈತ ಕಾರ್ತಿಕ ಯಾಳವಾರ ಮಾತನಾಡಿ, ನಮ್ಮ ಹೊಲದಲ್ಲಿ ತೊಗರಿ ಬೆಳೆ ಗಿಡಗಳು ಹುಲುಸಾಗಿ ಬೆಳೆದಿದ್ದು ಬಿಟ್ಟರೆ ಹೂವು ಬಿಟ್ಟಿಲ್ಲ, ಕಾಯಿಗಟ್ಟಿಲ್ಲ, ಬುಡದಲ್ಲಿ ಹಸಿಯಾಗಿದ್ದು ಯಾವ ಅಧಿಕಾರಿಗಳು ಈವರೆಗೂ ನಮ್ಮ ಹೊಲಗಳಿಗೆ ಭೇಟಿ ನೀಡಿಲ್ಲ ಎಂದು ದೂರಿದರು.

ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಮಲ್ಲಯ್ಯ ಬಿರಾದಾರ,ಮಧುಸ್ವಾಮಿ ಹಿರೇಮಠ, ಅನೀಲ ರಾಠೋಡ, ಲಕ್ಷ್ಮಣ ಬಿಜ್ಜೂರ, ಸಂಗಣ್ಣ ಹತ್ತಿ, ನಾಗೇಶ ಕವಡಿಮಟ್ಟಿ, ಪ್ರವೀಣ ಚಿನಿವಾರ ಮೊದಲಾದವರು ಇದ್ದರು.

ಅಧಿಕಾರಿಯಿಂದ ಸಿಗದ ಸಮರ್ಪಕ ಉತ್ತರ : ಢವಳಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಗೋವಿಂದರೆಡ್ಡಿ ಮೆದಕಿನಾಳ ಅವರನ್ನು ಕರೆಯಿಸಿ ರೈತರ ಸಮಸ್ಯೆಯನ್ನು ಅವರ ಸಮಕ್ಷಮದಲ್ಲಿ ನಡಹಳ್ಳಿ ಅವರು ಬಹಿರಂಗಪಡಿಸಿದರು. ಕೆಲವು ರೈತರು ನಾವು ಬೆಳೆ ವಿಮೆ ತುಂಬಿದ್ದರೂ ನಮ್ಮ ಜಮೀನು ಹಾನಿಯಾದ ರೈತರ ಪಟ್ಟಿಯಲ್ಲಿ ಬಂದಿಲ್ಲ ಎಂದು ದೂರಿದರು. ಇದಕ್ಕೆ ಉತ್ತರಿಸಿದ ಗೋವಿಂದರೆಡ್ಡಿ ಮೆದಿಕಿನಾಳ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯ ಆರಂಭಿಸಿದ್ದೇವೆ. ನಾಲ್ಕು ದಿನ ಬೆಳೆ ಹಾನಿ ಸಮೀಕ್ಷೆಗೆ ಹೋಗಿದ್ದೇವು. ಕೆಲವು ರೈತರ ಜಮೀನುಗಳಿಗೆ ಭೇಟಿ ನೀಡಿ ವರದಿ ತಂದಿದ್ದೇವೆ. ನಮ್ಮಲ್ಲಿ ಸಿಬ್ಬಂದಿ ಕೊರತೆ ಇದೆ. ನಾನು ಹೋದರೆ ಇಲ್ಲಿ ಬೀಜ ವಿತರಣೆಗೆ ಸಿಬ್ಬಂದಿ ಇಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಆದರೆ, ಹಾನಿ ಅಂದಾಜನ್ನು ಹೇಗೆ ಗಣನೆ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಅವರು ಬಹಿರಂಗಪಡಿಸಲಿಲ್ಲ. ಅಲ್ಲದೇ ಎರಡು ಎಕರೆಗಿಂತ ಕಡಿಮೆ ಪ್ರಮಾಣದಲ್ಲಿಯೇ ಹಾನಿ ತೋರಿಸಿರುವುದಕ್ಕೆ ಕಾರಣ ಏನು ಎಂಬ ಪ್ರಶ್ನೆಗೂ ಅವರಿಂದ ಉತ್ತರ ದೊರೆಯಲಿಲ್ಲ.

9 ಹೆಕ್ಟೆರ್ ಬೆಳೆ ಹಾನಿ…! : ತೋಟಗಾರಿಕೆ ಇಲಾಖೆ ಅಧಿಕಾರಿ ರೈತರು ಬೆಳೆ ಹಾನಿ ಆಗಿದೆ ಎಂದು ಅರ್ಜಿ ಕೊಟ್ಟರೆ ಮಾತ್ರ ಸಮೀಕ್ಷೆ ಮಾಡಲು ಬರುತ್ತಾರಂತೆ. ಜಿಲ್ಲಾಧಿಕಾರಿಗಳೇ ರೈತರ ಜಮೀನಿಗೆ ಹೋಗಿ ಸಮೀಕ್ಷೆ ಮಾಡಲು ತಿಳಿಸಿದ್ದರೂ ಅದಕ್ಕೆ ಯಾವುದೇ ಸ್ಪಂದನೆ ಕೆಳ ಹಂತದ ಅಧಿಕಾರಿಗಳಿಂದ ದೊರೆಯುತ್ತಿಲ್ಲ. ಢವಳಗಿ ಭಾಗದಲ್ಲಿ ಕೇವಲ 9 ಹೆಕ್ಟೆರ್ ತೋಟಗಾರಿಕೆ ಬೆಳೆ ಹಾನಿ ಆಗಿದೆ ಎಂದು ವರದಿ ನೀಡಲಾಗಿದೆ. ಇಂತಹ ಅವೈಜ್ಞಾನಿಕ ಸಮೀಕ್ಷೆಯಿಂದ ರೈತರಿಗೆ ಅನ್ಯಾಯವಾಗುತ್ತಿದ್ದು ಗ್ರಾಮಗಳಲ್ಲಿ ಡಂಗೂರ ಸಾರಿಸಿ ಹಾನಿಗೊಳಗಾದ ರೈತರಿಂದ ಅರ್ಜಿಗಳನ್ನು ಪಡೆದುಕೊಳ್ಳಬೇಕು. ರೈತರು ಕಾನೂನು ಕೈಗೆ ತೆಗೆದುಕೊಂಡರೆ ಅದಕ್ಕೆ ಅಧಿಕಾರಿಗಳು ನೇರ ಹೊಣೆಗಾರರಾಗುತ್ತಾರೆ.
ಎ.ಎಸ್.ಪಾಟೀಲ ನಡಹಳ್ಳಿ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ