Former MLA Nadahalli outraged by unscientific crop survey

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಮುದ್ದೇಬಿಹಾಳ : ಅತೀವೃಷ್ಟಿಯಿಂದ ಹಾನಿಯಾದ ಬೆಳೆಗೆ ನ್ಯಾಯಯುತವಾಗಿ ದೊರೆಯಬೇಕಾದ ಪರಿಹಾರವನ್ನು ರೈತರಿಗೆ ಕೊಡುವುದನ್ನು ಬಿಟ್ಟು ಬೆಳೆ ಹಾನಿ ಅಂದಾಜು ಜಂಟಿ ಸಮೀಕ್ಷೆ ಹೆಸರಿನಲ್ಲಿ ನಡೆಸಿರುವ ‘ಡ್ರಾಮಾ’ ಕೈಬಿಟ್ಟು ವಾಸ್ತವ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ 30 ಸಾವಿರ ರೂ.ಪರಿಹಾರ ರೈತರಿಗೆ ಒದಗಿಸಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು.

ತಾಲ್ಲೂಕಿನ ಇಂಗಳಗೇರಿ, ಮಡಿಕೇಶ್ವರ, ಢವಳಗಿ, ರೂಢಗಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಬೆಳೆ ಹಾನಿಯಾಗಿರುವ ಕುರಿತು ಸರ್ಕಾರದ ಅಧಿಕಾರಿಗಳು ಜಂಟಿ ಸಮೀಕ್ಷೆಯ ವರದಿಯನ್ನು ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಳೆ ಹಾನಿ ಸಂಭವಿಸಿದ ರೈತರ ಜಮೀನುಗಳಲ್ಲಿ ಹಾನಿ ಉಂಟಾದ ಪ್ರಮಾಣವನ್ನು ಜಂಟಿ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿದೆ. ಪಂಚಾಯಿತಿವಾರು ಸಮೀಕ್ಷೆ ವರದಿಯನ್ನು ಅವಲೋಕಿಸಿದರೆ ಕೆಲವೇ ರೈತರಿಗೆ ಪರಿಹಾರವನ್ನು ಕೊಡುವ ಕಾರ್ಯ ಸರ್ಕಾರದಿಂದ ಮಾಡಲಾಗುತ್ತಿದೆ. ಇಂಗಳಗೇರಿ ಪಂಚಾಯಿತಿಯಲ್ಲಿ 188, ಮಡಿಕೇಶ್ವರ ಗ್ರಾಪಂನಲ್ಲಿ 128, ಢವಳಗಿ ಗ್ರಾಪಂನಲ್ಲಿ 68 ರೈತರ ಹೆಸರು ಬೆಳೆಹಾನಿ ಪಟ್ಟಿಯಲ್ಲಿ ಗುರುತಿಸಲಾಗಿದೆ. ಈ ಭಾಗದಲ್ಲಿ ತೊಗರಿ, ಹತ್ತಿ, ಈರುಳ್ಳಿ, ಬಾಳೆ ಮೊದಲಾದ ಬೆಳೆಗಳು ಶೇ75ರಷ್ಟು ಹಾನಿ ಉಂಟಾಗಿದೆ. ಆದರೆ, ಆಯ್ದ ರೈತರಿಗೆ ಅದರಲ್ಲೂ ಎರಡು ಎಕರೆ ಮೀರದಂತೆ ಹಾನಿ ಸಂಭವಿಸಿರುವುದಾಗಿ ಪಟ್ಟಿಯಲ್ಲಿ ಅಧಿಕಾರಿಗಳು ತೋರಿಸಿದ್ದಾರೆ. ಕೆಲವು ರೈತರ ಜಮೀನುಗಳಲ್ಲಿ ಭಾಗಶಃ ಹಾನಿ ಸಂಭವಿಸಿದ್ದರೂ ಅದಕ್ಕೆ 2 ಎಕರೆ ಒಳಗಡೆ ಮಿತಿ ವಿಧಿಸಿರುವುದು ಅವೈಜ್ಞಾನಿಕವಾಗಿದೆ. ಅಧಿಕಾರಿಗಳು ಎಲ್ಲೋ ಕೂತು ತಮಗೆ ಬೇಕಾದ ರೈತರ ಹೆಸರುಗಳನ್ನು ಆಯ್ಕೆ ಮಾಡಿ ಪಟ್ಟಿ ಲಗತ್ತಿಸಿ ಆಕ್ಷೇಪಣೆ ಆಹ್ವಾನಿಸಿದ್ದಾರೆ. ಕೆಲವು ರೈತರಿಗೆ ಪಂಚಾಯಿತಿಯಲ್ಲಿ ಪಟ್ಟಿ ಅಂಟಿಸಿದ್ದಾರೆ ಎಂಬುದೇ ಗೊತ್ತಿಲ್ಲ ಎಂದು ಹೇಳಿದರು.

ಮಡಿಕೇಶ್ವರ ಗ್ರಾಮದಲ್ಲಿ ರೈತ ತುಂಬಗಿ ಮಾತನಾಡಿ, ನಮ್ಮದು 5 ಎಕರೆ ಜಮೀನಿನಲ್ಲಿ ಹತ್ತಿ ಬಿತ್ತಿದ್ದೇವು. ಅತೀವೃಷ್ಟಿಯಿಂದ ಬೆಳೆಗೆ ತಾಮ್ರ ರೋಗ ಬಂದಿದೆ. ಬೆಳೆ ಸಂಪೂರ್ಣ ಹಾನಿಯಾಗಿದ್ದು ಅದಕ್ಕಾಗಿ ಎಕರೆಗೆ 30-40 ಸಾವಿರ ರೂ.ಖರ್ಚು ಮಾಡಿದ್ದೇವೆ. ಈಗ ಪಂಚಾಯಿತಿಯಲ್ಲಿ ಹಚ್ಚಿರುವ ಲೀಸ್ಟ್ ನಲ್ಲಿ ನಮ್ಮ ಹೆಸರಿಲ್ಲ ಎಂದು ಹೇಳಿದರು.

ಬಳವಾಟ ಭಾಗದ ರೈತ ಕಾರ್ತಿಕ ಯಾಳವಾರ ಮಾತನಾಡಿ, ನಮ್ಮ ಹೊಲದಲ್ಲಿ ತೊಗರಿ ಬೆಳೆ ಗಿಡಗಳು ಹುಲುಸಾಗಿ ಬೆಳೆದಿದ್ದು ಬಿಟ್ಟರೆ ಹೂವು ಬಿಟ್ಟಿಲ್ಲ, ಕಾಯಿಗಟ್ಟಿಲ್ಲ, ಬುಡದಲ್ಲಿ ಹಸಿಯಾಗಿದ್ದು ಯಾವ ಅಧಿಕಾರಿಗಳು ಈವರೆಗೂ ನಮ್ಮ ಹೊಲಗಳಿಗೆ ಭೇಟಿ ನೀಡಿಲ್ಲ ಎಂದು ದೂರಿದರು.

ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಮಲ್ಲಯ್ಯ ಬಿರಾದಾರ,ಮಧುಸ್ವಾಮಿ ಹಿರೇಮಠ, ಅನೀಲ ರಾಠೋಡ, ಲಕ್ಷ್ಮಣ ಬಿಜ್ಜೂರ, ಸಂಗಣ್ಣ ಹತ್ತಿ, ನಾಗೇಶ ಕವಡಿಮಟ್ಟಿ, ಪ್ರವೀಣ ಚಿನಿವಾರ ಮೊದಲಾದವರು ಇದ್ದರು.

ಅಧಿಕಾರಿಯಿಂದ ಸಿಗದ ಸಮರ್ಪಕ ಉತ್ತರ : ಢವಳಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಗೋವಿಂದರೆಡ್ಡಿ ಮೆದಕಿನಾಳ ಅವರನ್ನು ಕರೆಯಿಸಿ ರೈತರ ಸಮಸ್ಯೆಯನ್ನು ಅವರ ಸಮಕ್ಷಮದಲ್ಲಿ ನಡಹಳ್ಳಿ ಅವರು ಬಹಿರಂಗಪಡಿಸಿದರು. ಕೆಲವು ರೈತರು ನಾವು ಬೆಳೆ ವಿಮೆ ತುಂಬಿದ್ದರೂ ನಮ್ಮ ಜಮೀನು ಹಾನಿಯಾದ ರೈತರ ಪಟ್ಟಿಯಲ್ಲಿ ಬಂದಿಲ್ಲ ಎಂದು ದೂರಿದರು. ಇದಕ್ಕೆ ಉತ್ತರಿಸಿದ ಗೋವಿಂದರೆಡ್ಡಿ ಮೆದಿಕಿನಾಳ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯ ಆರಂಭಿಸಿದ್ದೇವೆ. ನಾಲ್ಕು ದಿನ ಬೆಳೆ ಹಾನಿ ಸಮೀಕ್ಷೆಗೆ ಹೋಗಿದ್ದೇವು. ಕೆಲವು ರೈತರ ಜಮೀನುಗಳಿಗೆ ಭೇಟಿ ನೀಡಿ ವರದಿ ತಂದಿದ್ದೇವೆ. ನಮ್ಮಲ್ಲಿ ಸಿಬ್ಬಂದಿ ಕೊರತೆ ಇದೆ. ನಾನು ಹೋದರೆ ಇಲ್ಲಿ ಬೀಜ ವಿತರಣೆಗೆ ಸಿಬ್ಬಂದಿ ಇಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಆದರೆ, ಹಾನಿ ಅಂದಾಜನ್ನು ಹೇಗೆ ಗಣನೆ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಅವರು ಬಹಿರಂಗಪಡಿಸಲಿಲ್ಲ. ಅಲ್ಲದೇ ಎರಡು ಎಕರೆಗಿಂತ ಕಡಿಮೆ ಪ್ರಮಾಣದಲ್ಲಿಯೇ ಹಾನಿ ತೋರಿಸಿರುವುದಕ್ಕೆ ಕಾರಣ ಏನು ಎಂಬ ಪ್ರಶ್ನೆಗೂ ಅವರಿಂದ ಉತ್ತರ ದೊರೆಯಲಿಲ್ಲ.

9 ಹೆಕ್ಟೆರ್ ಬೆಳೆ ಹಾನಿ…! : ತೋಟಗಾರಿಕೆ ಇಲಾಖೆ ಅಧಿಕಾರಿ ರೈತರು ಬೆಳೆ ಹಾನಿ ಆಗಿದೆ ಎಂದು ಅರ್ಜಿ ಕೊಟ್ಟರೆ ಮಾತ್ರ ಸಮೀಕ್ಷೆ ಮಾಡಲು ಬರುತ್ತಾರಂತೆ. ಜಿಲ್ಲಾಧಿಕಾರಿಗಳೇ ರೈತರ ಜಮೀನಿಗೆ ಹೋಗಿ ಸಮೀಕ್ಷೆ ಮಾಡಲು ತಿಳಿಸಿದ್ದರೂ ಅದಕ್ಕೆ ಯಾವುದೇ ಸ್ಪಂದನೆ ಕೆಳ ಹಂತದ ಅಧಿಕಾರಿಗಳಿಂದ ದೊರೆಯುತ್ತಿಲ್ಲ. ಢವಳಗಿ ಭಾಗದಲ್ಲಿ ಕೇವಲ 9 ಹೆಕ್ಟೆರ್ ತೋಟಗಾರಿಕೆ ಬೆಳೆ ಹಾನಿ ಆಗಿದೆ ಎಂದು ವರದಿ ನೀಡಲಾಗಿದೆ. ಇಂತಹ ಅವೈಜ್ಞಾನಿಕ ಸಮೀಕ್ಷೆಯಿಂದ ರೈತರಿಗೆ ಅನ್ಯಾಯವಾಗುತ್ತಿದ್ದು ಗ್ರಾಮಗಳಲ್ಲಿ ಡಂಗೂರ ಸಾರಿಸಿ ಹಾನಿಗೊಳಗಾದ ರೈತರಿಂದ ಅರ್ಜಿಗಳನ್ನು ಪಡೆದುಕೊಳ್ಳಬೇಕು. ರೈತರು ಕಾನೂನು ಕೈಗೆ ತೆಗೆದುಕೊಂಡರೆ ಅದಕ್ಕೆ ಅಧಿಕಾರಿಗಳು ನೇರ ಹೊಣೆಗಾರರಾಗುತ್ತಾರೆ.
ಎ.ಎಸ್.ಪಾಟೀಲ ನಡಹಳ್ಳಿ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು