Former MLA Nadahalli outraged by unscientific crop survey

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಮುದ್ದೇಬಿಹಾಳ : ಅತೀವೃಷ್ಟಿಯಿಂದ ಹಾನಿಯಾದ ಬೆಳೆಗೆ ನ್ಯಾಯಯುತವಾಗಿ ದೊರೆಯಬೇಕಾದ ಪರಿಹಾರವನ್ನು ರೈತರಿಗೆ ಕೊಡುವುದನ್ನು ಬಿಟ್ಟು ಬೆಳೆ ಹಾನಿ ಅಂದಾಜು ಜಂಟಿ ಸಮೀಕ್ಷೆ ಹೆಸರಿನಲ್ಲಿ ನಡೆಸಿರುವ ‘ಡ್ರಾಮಾ’ ಕೈಬಿಟ್ಟು ವಾಸ್ತವ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ 30 ಸಾವಿರ ರೂ.ಪರಿಹಾರ ರೈತರಿಗೆ ಒದಗಿಸಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು.

ತಾಲ್ಲೂಕಿನ ಇಂಗಳಗೇರಿ, ಮಡಿಕೇಶ್ವರ, ಢವಳಗಿ, ರೂಢಗಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಬೆಳೆ ಹಾನಿಯಾಗಿರುವ ಕುರಿತು ಸರ್ಕಾರದ ಅಧಿಕಾರಿಗಳು ಜಂಟಿ ಸಮೀಕ್ಷೆಯ ವರದಿಯನ್ನು ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಳೆ ಹಾನಿ ಸಂಭವಿಸಿದ ರೈತರ ಜಮೀನುಗಳಲ್ಲಿ ಹಾನಿ ಉಂಟಾದ ಪ್ರಮಾಣವನ್ನು ಜಂಟಿ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿದೆ. ಪಂಚಾಯಿತಿವಾರು ಸಮೀಕ್ಷೆ ವರದಿಯನ್ನು ಅವಲೋಕಿಸಿದರೆ ಕೆಲವೇ ರೈತರಿಗೆ ಪರಿಹಾರವನ್ನು ಕೊಡುವ ಕಾರ್ಯ ಸರ್ಕಾರದಿಂದ ಮಾಡಲಾಗುತ್ತಿದೆ. ಇಂಗಳಗೇರಿ ಪಂಚಾಯಿತಿಯಲ್ಲಿ 188, ಮಡಿಕೇಶ್ವರ ಗ್ರಾಪಂನಲ್ಲಿ 128, ಢವಳಗಿ ಗ್ರಾಪಂನಲ್ಲಿ 68 ರೈತರ ಹೆಸರು ಬೆಳೆಹಾನಿ ಪಟ್ಟಿಯಲ್ಲಿ ಗುರುತಿಸಲಾಗಿದೆ. ಈ ಭಾಗದಲ್ಲಿ ತೊಗರಿ, ಹತ್ತಿ, ಈರುಳ್ಳಿ, ಬಾಳೆ ಮೊದಲಾದ ಬೆಳೆಗಳು ಶೇ75ರಷ್ಟು ಹಾನಿ ಉಂಟಾಗಿದೆ. ಆದರೆ, ಆಯ್ದ ರೈತರಿಗೆ ಅದರಲ್ಲೂ ಎರಡು ಎಕರೆ ಮೀರದಂತೆ ಹಾನಿ ಸಂಭವಿಸಿರುವುದಾಗಿ ಪಟ್ಟಿಯಲ್ಲಿ ಅಧಿಕಾರಿಗಳು ತೋರಿಸಿದ್ದಾರೆ. ಕೆಲವು ರೈತರ ಜಮೀನುಗಳಲ್ಲಿ ಭಾಗಶಃ ಹಾನಿ ಸಂಭವಿಸಿದ್ದರೂ ಅದಕ್ಕೆ 2 ಎಕರೆ ಒಳಗಡೆ ಮಿತಿ ವಿಧಿಸಿರುವುದು ಅವೈಜ್ಞಾನಿಕವಾಗಿದೆ. ಅಧಿಕಾರಿಗಳು ಎಲ್ಲೋ ಕೂತು ತಮಗೆ ಬೇಕಾದ ರೈತರ ಹೆಸರುಗಳನ್ನು ಆಯ್ಕೆ ಮಾಡಿ ಪಟ್ಟಿ ಲಗತ್ತಿಸಿ ಆಕ್ಷೇಪಣೆ ಆಹ್ವಾನಿಸಿದ್ದಾರೆ. ಕೆಲವು ರೈತರಿಗೆ ಪಂಚಾಯಿತಿಯಲ್ಲಿ ಪಟ್ಟಿ ಅಂಟಿಸಿದ್ದಾರೆ ಎಂಬುದೇ ಗೊತ್ತಿಲ್ಲ ಎಂದು ಹೇಳಿದರು.

ಮಡಿಕೇಶ್ವರ ಗ್ರಾಮದಲ್ಲಿ ರೈತ ತುಂಬಗಿ ಮಾತನಾಡಿ, ನಮ್ಮದು 5 ಎಕರೆ ಜಮೀನಿನಲ್ಲಿ ಹತ್ತಿ ಬಿತ್ತಿದ್ದೇವು. ಅತೀವೃಷ್ಟಿಯಿಂದ ಬೆಳೆಗೆ ತಾಮ್ರ ರೋಗ ಬಂದಿದೆ. ಬೆಳೆ ಸಂಪೂರ್ಣ ಹಾನಿಯಾಗಿದ್ದು ಅದಕ್ಕಾಗಿ ಎಕರೆಗೆ 30-40 ಸಾವಿರ ರೂ.ಖರ್ಚು ಮಾಡಿದ್ದೇವೆ. ಈಗ ಪಂಚಾಯಿತಿಯಲ್ಲಿ ಹಚ್ಚಿರುವ ಲೀಸ್ಟ್ ನಲ್ಲಿ ನಮ್ಮ ಹೆಸರಿಲ್ಲ ಎಂದು ಹೇಳಿದರು.

ಬಳವಾಟ ಭಾಗದ ರೈತ ಕಾರ್ತಿಕ ಯಾಳವಾರ ಮಾತನಾಡಿ, ನಮ್ಮ ಹೊಲದಲ್ಲಿ ತೊಗರಿ ಬೆಳೆ ಗಿಡಗಳು ಹುಲುಸಾಗಿ ಬೆಳೆದಿದ್ದು ಬಿಟ್ಟರೆ ಹೂವು ಬಿಟ್ಟಿಲ್ಲ, ಕಾಯಿಗಟ್ಟಿಲ್ಲ, ಬುಡದಲ್ಲಿ ಹಸಿಯಾಗಿದ್ದು ಯಾವ ಅಧಿಕಾರಿಗಳು ಈವರೆಗೂ ನಮ್ಮ ಹೊಲಗಳಿಗೆ ಭೇಟಿ ನೀಡಿಲ್ಲ ಎಂದು ದೂರಿದರು.

ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಮಲ್ಲಯ್ಯ ಬಿರಾದಾರ,ಮಧುಸ್ವಾಮಿ ಹಿರೇಮಠ, ಅನೀಲ ರಾಠೋಡ, ಲಕ್ಷ್ಮಣ ಬಿಜ್ಜೂರ, ಸಂಗಣ್ಣ ಹತ್ತಿ, ನಾಗೇಶ ಕವಡಿಮಟ್ಟಿ, ಪ್ರವೀಣ ಚಿನಿವಾರ ಮೊದಲಾದವರು ಇದ್ದರು.

ಅಧಿಕಾರಿಯಿಂದ ಸಿಗದ ಸಮರ್ಪಕ ಉತ್ತರ : ಢವಳಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಗೋವಿಂದರೆಡ್ಡಿ ಮೆದಕಿನಾಳ ಅವರನ್ನು ಕರೆಯಿಸಿ ರೈತರ ಸಮಸ್ಯೆಯನ್ನು ಅವರ ಸಮಕ್ಷಮದಲ್ಲಿ ನಡಹಳ್ಳಿ ಅವರು ಬಹಿರಂಗಪಡಿಸಿದರು. ಕೆಲವು ರೈತರು ನಾವು ಬೆಳೆ ವಿಮೆ ತುಂಬಿದ್ದರೂ ನಮ್ಮ ಜಮೀನು ಹಾನಿಯಾದ ರೈತರ ಪಟ್ಟಿಯಲ್ಲಿ ಬಂದಿಲ್ಲ ಎಂದು ದೂರಿದರು. ಇದಕ್ಕೆ ಉತ್ತರಿಸಿದ ಗೋವಿಂದರೆಡ್ಡಿ ಮೆದಿಕಿನಾಳ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯ ಆರಂಭಿಸಿದ್ದೇವೆ. ನಾಲ್ಕು ದಿನ ಬೆಳೆ ಹಾನಿ ಸಮೀಕ್ಷೆಗೆ ಹೋಗಿದ್ದೇವು. ಕೆಲವು ರೈತರ ಜಮೀನುಗಳಿಗೆ ಭೇಟಿ ನೀಡಿ ವರದಿ ತಂದಿದ್ದೇವೆ. ನಮ್ಮಲ್ಲಿ ಸಿಬ್ಬಂದಿ ಕೊರತೆ ಇದೆ. ನಾನು ಹೋದರೆ ಇಲ್ಲಿ ಬೀಜ ವಿತರಣೆಗೆ ಸಿಬ್ಬಂದಿ ಇಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಆದರೆ, ಹಾನಿ ಅಂದಾಜನ್ನು ಹೇಗೆ ಗಣನೆ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಅವರು ಬಹಿರಂಗಪಡಿಸಲಿಲ್ಲ. ಅಲ್ಲದೇ ಎರಡು ಎಕರೆಗಿಂತ ಕಡಿಮೆ ಪ್ರಮಾಣದಲ್ಲಿಯೇ ಹಾನಿ ತೋರಿಸಿರುವುದಕ್ಕೆ ಕಾರಣ ಏನು ಎಂಬ ಪ್ರಶ್ನೆಗೂ ಅವರಿಂದ ಉತ್ತರ ದೊರೆಯಲಿಲ್ಲ.

9 ಹೆಕ್ಟೆರ್ ಬೆಳೆ ಹಾನಿ…! : ತೋಟಗಾರಿಕೆ ಇಲಾಖೆ ಅಧಿಕಾರಿ ರೈತರು ಬೆಳೆ ಹಾನಿ ಆಗಿದೆ ಎಂದು ಅರ್ಜಿ ಕೊಟ್ಟರೆ ಮಾತ್ರ ಸಮೀಕ್ಷೆ ಮಾಡಲು ಬರುತ್ತಾರಂತೆ. ಜಿಲ್ಲಾಧಿಕಾರಿಗಳೇ ರೈತರ ಜಮೀನಿಗೆ ಹೋಗಿ ಸಮೀಕ್ಷೆ ಮಾಡಲು ತಿಳಿಸಿದ್ದರೂ ಅದಕ್ಕೆ ಯಾವುದೇ ಸ್ಪಂದನೆ ಕೆಳ ಹಂತದ ಅಧಿಕಾರಿಗಳಿಂದ ದೊರೆಯುತ್ತಿಲ್ಲ. ಢವಳಗಿ ಭಾಗದಲ್ಲಿ ಕೇವಲ 9 ಹೆಕ್ಟೆರ್ ತೋಟಗಾರಿಕೆ ಬೆಳೆ ಹಾನಿ ಆಗಿದೆ ಎಂದು ವರದಿ ನೀಡಲಾಗಿದೆ. ಇಂತಹ ಅವೈಜ್ಞಾನಿಕ ಸಮೀಕ್ಷೆಯಿಂದ ರೈತರಿಗೆ ಅನ್ಯಾಯವಾಗುತ್ತಿದ್ದು ಗ್ರಾಮಗಳಲ್ಲಿ ಡಂಗೂರ ಸಾರಿಸಿ ಹಾನಿಗೊಳಗಾದ ರೈತರಿಂದ ಅರ್ಜಿಗಳನ್ನು ಪಡೆದುಕೊಳ್ಳಬೇಕು. ರೈತರು ಕಾನೂನು ಕೈಗೆ ತೆಗೆದುಕೊಂಡರೆ ಅದಕ್ಕೆ ಅಧಿಕಾರಿಗಳು ನೇರ ಹೊಣೆಗಾರರಾಗುತ್ತಾರೆ.
ಎ.ಎಸ್.ಪಾಟೀಲ ನಡಹಳ್ಳಿ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ