Former MLA Nadahalli outraged by unscientific crop survey

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಮುದ್ದೇಬಿಹಾಳ : ಅತೀವೃಷ್ಟಿಯಿಂದ ಹಾನಿಯಾದ ಬೆಳೆಗೆ ನ್ಯಾಯಯುತವಾಗಿ ದೊರೆಯಬೇಕಾದ ಪರಿಹಾರವನ್ನು ರೈತರಿಗೆ ಕೊಡುವುದನ್ನು ಬಿಟ್ಟು ಬೆಳೆ ಹಾನಿ ಅಂದಾಜು ಜಂಟಿ ಸಮೀಕ್ಷೆ ಹೆಸರಿನಲ್ಲಿ ನಡೆಸಿರುವ ‘ಡ್ರಾಮಾ’ ಕೈಬಿಟ್ಟು ವಾಸ್ತವ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ 30 ಸಾವಿರ ರೂ.ಪರಿಹಾರ ರೈತರಿಗೆ ಒದಗಿಸಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು.

ತಾಲ್ಲೂಕಿನ ಇಂಗಳಗೇರಿ, ಮಡಿಕೇಶ್ವರ, ಢವಳಗಿ, ರೂಢಗಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಬೆಳೆ ಹಾನಿಯಾಗಿರುವ ಕುರಿತು ಸರ್ಕಾರದ ಅಧಿಕಾರಿಗಳು ಜಂಟಿ ಸಮೀಕ್ಷೆಯ ವರದಿಯನ್ನು ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಳೆ ಹಾನಿ ಸಂಭವಿಸಿದ ರೈತರ ಜಮೀನುಗಳಲ್ಲಿ ಹಾನಿ ಉಂಟಾದ ಪ್ರಮಾಣವನ್ನು ಜಂಟಿ ಸಮೀಕ್ಷೆಯ ಹೆಸರಿನಲ್ಲಿ ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟವಾಡುತ್ತಿದೆ. ಪಂಚಾಯಿತಿವಾರು ಸಮೀಕ್ಷೆ ವರದಿಯನ್ನು ಅವಲೋಕಿಸಿದರೆ ಕೆಲವೇ ರೈತರಿಗೆ ಪರಿಹಾರವನ್ನು ಕೊಡುವ ಕಾರ್ಯ ಸರ್ಕಾರದಿಂದ ಮಾಡಲಾಗುತ್ತಿದೆ. ಇಂಗಳಗೇರಿ ಪಂಚಾಯಿತಿಯಲ್ಲಿ 188, ಮಡಿಕೇಶ್ವರ ಗ್ರಾಪಂನಲ್ಲಿ 128, ಢವಳಗಿ ಗ್ರಾಪಂನಲ್ಲಿ 68 ರೈತರ ಹೆಸರು ಬೆಳೆಹಾನಿ ಪಟ್ಟಿಯಲ್ಲಿ ಗುರುತಿಸಲಾಗಿದೆ. ಈ ಭಾಗದಲ್ಲಿ ತೊಗರಿ, ಹತ್ತಿ, ಈರುಳ್ಳಿ, ಬಾಳೆ ಮೊದಲಾದ ಬೆಳೆಗಳು ಶೇ75ರಷ್ಟು ಹಾನಿ ಉಂಟಾಗಿದೆ. ಆದರೆ, ಆಯ್ದ ರೈತರಿಗೆ ಅದರಲ್ಲೂ ಎರಡು ಎಕರೆ ಮೀರದಂತೆ ಹಾನಿ ಸಂಭವಿಸಿರುವುದಾಗಿ ಪಟ್ಟಿಯಲ್ಲಿ ಅಧಿಕಾರಿಗಳು ತೋರಿಸಿದ್ದಾರೆ. ಕೆಲವು ರೈತರ ಜಮೀನುಗಳಲ್ಲಿ ಭಾಗಶಃ ಹಾನಿ ಸಂಭವಿಸಿದ್ದರೂ ಅದಕ್ಕೆ 2 ಎಕರೆ ಒಳಗಡೆ ಮಿತಿ ವಿಧಿಸಿರುವುದು ಅವೈಜ್ಞಾನಿಕವಾಗಿದೆ. ಅಧಿಕಾರಿಗಳು ಎಲ್ಲೋ ಕೂತು ತಮಗೆ ಬೇಕಾದ ರೈತರ ಹೆಸರುಗಳನ್ನು ಆಯ್ಕೆ ಮಾಡಿ ಪಟ್ಟಿ ಲಗತ್ತಿಸಿ ಆಕ್ಷೇಪಣೆ ಆಹ್ವಾನಿಸಿದ್ದಾರೆ. ಕೆಲವು ರೈತರಿಗೆ ಪಂಚಾಯಿತಿಯಲ್ಲಿ ಪಟ್ಟಿ ಅಂಟಿಸಿದ್ದಾರೆ ಎಂಬುದೇ ಗೊತ್ತಿಲ್ಲ ಎಂದು ಹೇಳಿದರು.

ಮಡಿಕೇಶ್ವರ ಗ್ರಾಮದಲ್ಲಿ ರೈತ ತುಂಬಗಿ ಮಾತನಾಡಿ, ನಮ್ಮದು 5 ಎಕರೆ ಜಮೀನಿನಲ್ಲಿ ಹತ್ತಿ ಬಿತ್ತಿದ್ದೇವು. ಅತೀವೃಷ್ಟಿಯಿಂದ ಬೆಳೆಗೆ ತಾಮ್ರ ರೋಗ ಬಂದಿದೆ. ಬೆಳೆ ಸಂಪೂರ್ಣ ಹಾನಿಯಾಗಿದ್ದು ಅದಕ್ಕಾಗಿ ಎಕರೆಗೆ 30-40 ಸಾವಿರ ರೂ.ಖರ್ಚು ಮಾಡಿದ್ದೇವೆ. ಈಗ ಪಂಚಾಯಿತಿಯಲ್ಲಿ ಹಚ್ಚಿರುವ ಲೀಸ್ಟ್ ನಲ್ಲಿ ನಮ್ಮ ಹೆಸರಿಲ್ಲ ಎಂದು ಹೇಳಿದರು.

ಬಳವಾಟ ಭಾಗದ ರೈತ ಕಾರ್ತಿಕ ಯಾಳವಾರ ಮಾತನಾಡಿ, ನಮ್ಮ ಹೊಲದಲ್ಲಿ ತೊಗರಿ ಬೆಳೆ ಗಿಡಗಳು ಹುಲುಸಾಗಿ ಬೆಳೆದಿದ್ದು ಬಿಟ್ಟರೆ ಹೂವು ಬಿಟ್ಟಿಲ್ಲ, ಕಾಯಿಗಟ್ಟಿಲ್ಲ, ಬುಡದಲ್ಲಿ ಹಸಿಯಾಗಿದ್ದು ಯಾವ ಅಧಿಕಾರಿಗಳು ಈವರೆಗೂ ನಮ್ಮ ಹೊಲಗಳಿಗೆ ಭೇಟಿ ನೀಡಿಲ್ಲ ಎಂದು ದೂರಿದರು.

ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಮಲ್ಲಯ್ಯ ಬಿರಾದಾರ,ಮಧುಸ್ವಾಮಿ ಹಿರೇಮಠ, ಅನೀಲ ರಾಠೋಡ, ಲಕ್ಷ್ಮಣ ಬಿಜ್ಜೂರ, ಸಂಗಣ್ಣ ಹತ್ತಿ, ನಾಗೇಶ ಕವಡಿಮಟ್ಟಿ, ಪ್ರವೀಣ ಚಿನಿವಾರ ಮೊದಲಾದವರು ಇದ್ದರು.

ಅಧಿಕಾರಿಯಿಂದ ಸಿಗದ ಸಮರ್ಪಕ ಉತ್ತರ : ಢವಳಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಗೋವಿಂದರೆಡ್ಡಿ ಮೆದಕಿನಾಳ ಅವರನ್ನು ಕರೆಯಿಸಿ ರೈತರ ಸಮಸ್ಯೆಯನ್ನು ಅವರ ಸಮಕ್ಷಮದಲ್ಲಿ ನಡಹಳ್ಳಿ ಅವರು ಬಹಿರಂಗಪಡಿಸಿದರು. ಕೆಲವು ರೈತರು ನಾವು ಬೆಳೆ ವಿಮೆ ತುಂಬಿದ್ದರೂ ನಮ್ಮ ಜಮೀನು ಹಾನಿಯಾದ ರೈತರ ಪಟ್ಟಿಯಲ್ಲಿ ಬಂದಿಲ್ಲ ಎಂದು ದೂರಿದರು. ಇದಕ್ಕೆ ಉತ್ತರಿಸಿದ ಗೋವಿಂದರೆಡ್ಡಿ ಮೆದಿಕಿನಾಳ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯ ಆರಂಭಿಸಿದ್ದೇವೆ. ನಾಲ್ಕು ದಿನ ಬೆಳೆ ಹಾನಿ ಸಮೀಕ್ಷೆಗೆ ಹೋಗಿದ್ದೇವು. ಕೆಲವು ರೈತರ ಜಮೀನುಗಳಿಗೆ ಭೇಟಿ ನೀಡಿ ವರದಿ ತಂದಿದ್ದೇವೆ. ನಮ್ಮಲ್ಲಿ ಸಿಬ್ಬಂದಿ ಕೊರತೆ ಇದೆ. ನಾನು ಹೋದರೆ ಇಲ್ಲಿ ಬೀಜ ವಿತರಣೆಗೆ ಸಿಬ್ಬಂದಿ ಇಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಆದರೆ, ಹಾನಿ ಅಂದಾಜನ್ನು ಹೇಗೆ ಗಣನೆ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ಅವರು ಬಹಿರಂಗಪಡಿಸಲಿಲ್ಲ. ಅಲ್ಲದೇ ಎರಡು ಎಕರೆಗಿಂತ ಕಡಿಮೆ ಪ್ರಮಾಣದಲ್ಲಿಯೇ ಹಾನಿ ತೋರಿಸಿರುವುದಕ್ಕೆ ಕಾರಣ ಏನು ಎಂಬ ಪ್ರಶ್ನೆಗೂ ಅವರಿಂದ ಉತ್ತರ ದೊರೆಯಲಿಲ್ಲ.

9 ಹೆಕ್ಟೆರ್ ಬೆಳೆ ಹಾನಿ…! : ತೋಟಗಾರಿಕೆ ಇಲಾಖೆ ಅಧಿಕಾರಿ ರೈತರು ಬೆಳೆ ಹಾನಿ ಆಗಿದೆ ಎಂದು ಅರ್ಜಿ ಕೊಟ್ಟರೆ ಮಾತ್ರ ಸಮೀಕ್ಷೆ ಮಾಡಲು ಬರುತ್ತಾರಂತೆ. ಜಿಲ್ಲಾಧಿಕಾರಿಗಳೇ ರೈತರ ಜಮೀನಿಗೆ ಹೋಗಿ ಸಮೀಕ್ಷೆ ಮಾಡಲು ತಿಳಿಸಿದ್ದರೂ ಅದಕ್ಕೆ ಯಾವುದೇ ಸ್ಪಂದನೆ ಕೆಳ ಹಂತದ ಅಧಿಕಾರಿಗಳಿಂದ ದೊರೆಯುತ್ತಿಲ್ಲ. ಢವಳಗಿ ಭಾಗದಲ್ಲಿ ಕೇವಲ 9 ಹೆಕ್ಟೆರ್ ತೋಟಗಾರಿಕೆ ಬೆಳೆ ಹಾನಿ ಆಗಿದೆ ಎಂದು ವರದಿ ನೀಡಲಾಗಿದೆ. ಇಂತಹ ಅವೈಜ್ಞಾನಿಕ ಸಮೀಕ್ಷೆಯಿಂದ ರೈತರಿಗೆ ಅನ್ಯಾಯವಾಗುತ್ತಿದ್ದು ಗ್ರಾಮಗಳಲ್ಲಿ ಡಂಗೂರ ಸಾರಿಸಿ ಹಾನಿಗೊಳಗಾದ ರೈತರಿಂದ ಅರ್ಜಿಗಳನ್ನು ಪಡೆದುಕೊಳ್ಳಬೇಕು. ರೈತರು ಕಾನೂನು ಕೈಗೆ ತೆಗೆದುಕೊಂಡರೆ ಅದಕ್ಕೆ ಅಧಿಕಾರಿಗಳು ನೇರ ಹೊಣೆಗಾರರಾಗುತ್ತಾರೆ.
ಎ.ಎಸ್.ಪಾಟೀಲ ನಡಹಳ್ಳಿ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ