Accident news Accident board on road

ಭೀಕರ ಬೈಕ್ ಅಪಘಾತ: ನಾಲ್ವರ ದುರ್ಮರಣ

ಭೀಕರ ಬೈಕ್ ಅಪಘಾತ: ನಾಲ್ವರ ದುರ್ಮರಣ

ಮುದ್ದೇಬಿಹಾಳ : ರಸ್ತೆಯನ್ನು ದಾಟುತ್ತಿದ್ದವರ ಮೇಲೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10 ಸುಮಾರಿಗೆ ನಡೆದಿದೆ.

ಇನ್ನಷ್ಟು ‌ಸುದ್ದಿಗಳಿಗಾಗಿ‌ ನಮ್ಮ‌ ಟೆಲಿಗ್ರಾಂ ‌ಚಾನೆಲ್ ಗೆ ಸೇರಿ:

ಮೃತಪಟ್ಟವರನ್ನು ದೇವರಹಿಪ್ಪರಗಿ ತಾಲ್ಲೂಕು ಹಂಚಲಿಯ ಅನೀಲ ಎಂ.ಖೈನೂರ(23), ತಾಳಿಕೋಟಿ ತಾಲ್ಲೂಕಿನ ಗೊಟಗುಣಕಿಯ ನಿಂಗರಾಜ ಚೌಡಕಿ(22), ಮುದ್ದೇಬಿಹಾಳ ತಾಲ್ಲೂಕಿನ ಮಲಗಲದಿನ್ನಿಯ ಕುಮಾರ ಪ್ಯಾಟಿ(18) ಹಾಗೂ ಬಾಗಲಕೋಟ ಜಿಲ್ಲಾಸ್ಪತ್ರೆಯಲ್ಲಿ ಮಲಗಲದಿನ್ನಿಯ ರಾಯಪ್ಪ ಮಹಾಂತಪ್ಪ ಬಾಗೇವಾಡಿ(24) ಸಾವನ್ನಪ್ಪಿದವರು.

ಮಲಗಲದಿನ್ನಿಯ ಶಾಹಿದ ಹುನಗುಂದ(19), ಪ್ರಶಾಂತ ಎಚ್ ಕುರುಬಗೌಡರ(16), ಹನಮಂತ ಕುರುಬಗೌಡರ( 1 8) ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಬಾಗಲಕೋಟ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕುಂಟೋಜಿ ಜಾತ್ರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಬಂದಿದ್ದವರು ರಸ್ತೆ ಬದಿ ವಾಹನ ನಿಲ್ಲಿಸಿ ಮೂತ್ರವಿಸರ್ಜನೆಗೆ ರಸ್ತೆ ದಾಟುವ ಸಮಯದಲ್ಲಿ ಅತಿ ವೇಗದಿಂದ ಬಂದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದರಿಂದಲೇ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳಿಗೆ ರಾತ್ರಿಯೇ ತಾಲ್ಲೂಕು ಆಸ್ಪತ್ರೆಯ ವೈದ್ಯ ಡಾ.ಪರಶುರಾಮ ವಡ್ಡರ ನೇತೃತ್ವದಲ್ಲಿ ಶುಶ್ರೂಷಣಾಧಿಕಾರಿಗಳಾದ ಶೇಖಪ್ಪ ಬಿರಾದಾರ,ಅಖೀಲಾ ಬೇಗಂ, ರುಕ್ಸಾನಾ,ದಾನಮ್ಮ ಪ್ರಾಥಮಿಕ ಚಿಕಿತ್ಸೆ ನೀಡಿದರು.

ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸೈ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ