Accident news Accident board on road

ಭೀಕರ ಬೈಕ್ ಅಪಘಾತ: ನಾಲ್ವರ ದುರ್ಮರಣ

ಭೀಕರ ಬೈಕ್ ಅಪಘಾತ: ನಾಲ್ವರ ದುರ್ಮರಣ

ಮುದ್ದೇಬಿಹಾಳ : ರಸ್ತೆಯನ್ನು ದಾಟುತ್ತಿದ್ದವರ ಮೇಲೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10 ಸುಮಾರಿಗೆ ನಡೆದಿದೆ.

ಇನ್ನಷ್ಟು ‌ಸುದ್ದಿಗಳಿಗಾಗಿ‌ ನಮ್ಮ‌ ಟೆಲಿಗ್ರಾಂ ‌ಚಾನೆಲ್ ಗೆ ಸೇರಿ:

ಮೃತಪಟ್ಟವರನ್ನು ದೇವರಹಿಪ್ಪರಗಿ ತಾಲ್ಲೂಕು ಹಂಚಲಿಯ ಅನೀಲ ಎಂ.ಖೈನೂರ(23), ತಾಳಿಕೋಟಿ ತಾಲ್ಲೂಕಿನ ಗೊಟಗುಣಕಿಯ ನಿಂಗರಾಜ ಚೌಡಕಿ(22), ಮುದ್ದೇಬಿಹಾಳ ತಾಲ್ಲೂಕಿನ ಮಲಗಲದಿನ್ನಿಯ ಕುಮಾರ ಪ್ಯಾಟಿ(18) ಹಾಗೂ ಬಾಗಲಕೋಟ ಜಿಲ್ಲಾಸ್ಪತ್ರೆಯಲ್ಲಿ ಮಲಗಲದಿನ್ನಿಯ ರಾಯಪ್ಪ ಮಹಾಂತಪ್ಪ ಬಾಗೇವಾಡಿ(24) ಸಾವನ್ನಪ್ಪಿದವರು.

ಮಲಗಲದಿನ್ನಿಯ ಶಾಹಿದ ಹುನಗುಂದ(19), ಪ್ರಶಾಂತ ಎಚ್ ಕುರುಬಗೌಡರ(16), ಹನಮಂತ ಕುರುಬಗೌಡರ( 1 8) ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಬಾಗಲಕೋಟ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕುಂಟೋಜಿ ಜಾತ್ರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಬಂದಿದ್ದವರು ರಸ್ತೆ ಬದಿ ವಾಹನ ನಿಲ್ಲಿಸಿ ಮೂತ್ರವಿಸರ್ಜನೆಗೆ ರಸ್ತೆ ದಾಟುವ ಸಮಯದಲ್ಲಿ ಅತಿ ವೇಗದಿಂದ ಬಂದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದರಿಂದಲೇ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳಿಗೆ ರಾತ್ರಿಯೇ ತಾಲ್ಲೂಕು ಆಸ್ಪತ್ರೆಯ ವೈದ್ಯ ಡಾ.ಪರಶುರಾಮ ವಡ್ಡರ ನೇತೃತ್ವದಲ್ಲಿ ಶುಶ್ರೂಷಣಾಧಿಕಾರಿಗಳಾದ ಶೇಖಪ್ಪ ಬಿರಾದಾರ,ಅಖೀಲಾ ಬೇಗಂ, ರುಕ್ಸಾನಾ,ದಾನಮ್ಮ ಪ್ರಾಥಮಿಕ ಚಿಕಿತ್ಸೆ ನೀಡಿದರು.

ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸೈ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ