Accident news Accident board on road

ಭೀಕರ ಬೈಕ್ ಅಪಘಾತ: ನಾಲ್ವರ ದುರ್ಮರಣ

ಭೀಕರ ಬೈಕ್ ಅಪಘಾತ: ನಾಲ್ವರ ದುರ್ಮರಣ

ಮುದ್ದೇಬಿಹಾಳ : ರಸ್ತೆಯನ್ನು ದಾಟುತ್ತಿದ್ದವರ ಮೇಲೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10 ಸುಮಾರಿಗೆ ನಡೆದಿದೆ.

ಇನ್ನಷ್ಟು ‌ಸುದ್ದಿಗಳಿಗಾಗಿ‌ ನಮ್ಮ‌ ಟೆಲಿಗ್ರಾಂ ‌ಚಾನೆಲ್ ಗೆ ಸೇರಿ:

ಮೃತಪಟ್ಟವರನ್ನು ದೇವರಹಿಪ್ಪರಗಿ ತಾಲ್ಲೂಕು ಹಂಚಲಿಯ ಅನೀಲ ಎಂ.ಖೈನೂರ(23), ತಾಳಿಕೋಟಿ ತಾಲ್ಲೂಕಿನ ಗೊಟಗುಣಕಿಯ ನಿಂಗರಾಜ ಚೌಡಕಿ(22), ಮುದ್ದೇಬಿಹಾಳ ತಾಲ್ಲೂಕಿನ ಮಲಗಲದಿನ್ನಿಯ ಕುಮಾರ ಪ್ಯಾಟಿ(18) ಹಾಗೂ ಬಾಗಲಕೋಟ ಜಿಲ್ಲಾಸ್ಪತ್ರೆಯಲ್ಲಿ ಮಲಗಲದಿನ್ನಿಯ ರಾಯಪ್ಪ ಮಹಾಂತಪ್ಪ ಬಾಗೇವಾಡಿ(24) ಸಾವನ್ನಪ್ಪಿದವರು.

ಮಲಗಲದಿನ್ನಿಯ ಶಾಹಿದ ಹುನಗುಂದ(19), ಪ್ರಶಾಂತ ಎಚ್ ಕುರುಬಗೌಡರ(16), ಹನಮಂತ ಕುರುಬಗೌಡರ( 1 8) ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಬಾಗಲಕೋಟ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕುಂಟೋಜಿ ಜಾತ್ರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಬಂದಿದ್ದವರು ರಸ್ತೆ ಬದಿ ವಾಹನ ನಿಲ್ಲಿಸಿ ಮೂತ್ರವಿಸರ್ಜನೆಗೆ ರಸ್ತೆ ದಾಟುವ ಸಮಯದಲ್ಲಿ ಅತಿ ವೇಗದಿಂದ ಬಂದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದರಿಂದಲೇ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳಿಗೆ ರಾತ್ರಿಯೇ ತಾಲ್ಲೂಕು ಆಸ್ಪತ್ರೆಯ ವೈದ್ಯ ಡಾ.ಪರಶುರಾಮ ವಡ್ಡರ ನೇತೃತ್ವದಲ್ಲಿ ಶುಶ್ರೂಷಣಾಧಿಕಾರಿಗಳಾದ ಶೇಖಪ್ಪ ಬಿರಾದಾರ,ಅಖೀಲಾ ಬೇಗಂ, ರುಕ್ಸಾನಾ,ದಾನಮ್ಮ ಪ್ರಾಥಮಿಕ ಚಿಕಿತ್ಸೆ ನೀಡಿದರು.

ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸೈ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ 9ಕ್ಕೆ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸಿದ ಪೊಲೀಸರಿಗೆ,ಪೊಲೀಸ್ ಅಧಿಕಾರಿಗಳಿಗೆ ಅಭಿನಂದನಾ ಸಮಾರಂಭ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕಪ್ಪತ್ತಗುಡ್ಡ ನಂದಿವೇರಿಮಠದ ಶಿವಕುಮಾರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಜ್ಯೋತಿ ಬೆಳಗಿಸುವರು.ಸಂಸ್ಥೆ ಅಧ್ಯಕ್ಷ ಕೆ.ವಾಯ್.ಬಿರಾದಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಉಪಾಧ್ಯಕ್ಷ ಎಂ.ಆರ್.ನಾಡಗೌಡ್ರ,ಪ್ರಧಾನ ಕಾರ್ಯದರ್ಶಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು 20.34 ಲಕ್ಷ ರೂ.ಲಾಭ ಮಾಡಿದೆ ಎಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಮನೋಹರ ಎಸ್.ಮೇಟಿ(ಬಸರಕೋಡ) ಹೇಳಿದರು. ಪಟ್ಟಣದ ಏಪಿಎಂಸಿಯಲ್ಲಿರುವ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಕಚೇರಿ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 69ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಸಂಘದ ಆರ್ಥಿಕ ವ್ಯವಹಾರವನ್ನು ಸಭೆಗೆ ತಿಳಿಸಿದರು. ರೈತರು