Accident news Accident board on road

ಭೀಕರ ಬೈಕ್ ಅಪಘಾತ: ನಾಲ್ವರ ದುರ್ಮರಣ

ಭೀಕರ ಬೈಕ್ ಅಪಘಾತ: ನಾಲ್ವರ ದುರ್ಮರಣ

ಮುದ್ದೇಬಿಹಾಳ : ರಸ್ತೆಯನ್ನು ದಾಟುತ್ತಿದ್ದವರ ಮೇಲೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10 ಸುಮಾರಿಗೆ ನಡೆದಿದೆ.

ಇನ್ನಷ್ಟು ‌ಸುದ್ದಿಗಳಿಗಾಗಿ‌ ನಮ್ಮ‌ ಟೆಲಿಗ್ರಾಂ ‌ಚಾನೆಲ್ ಗೆ ಸೇರಿ:

ಮೃತಪಟ್ಟವರನ್ನು ದೇವರಹಿಪ್ಪರಗಿ ತಾಲ್ಲೂಕು ಹಂಚಲಿಯ ಅನೀಲ ಎಂ.ಖೈನೂರ(23), ತಾಳಿಕೋಟಿ ತಾಲ್ಲೂಕಿನ ಗೊಟಗುಣಕಿಯ ನಿಂಗರಾಜ ಚೌಡಕಿ(22), ಮುದ್ದೇಬಿಹಾಳ ತಾಲ್ಲೂಕಿನ ಮಲಗಲದಿನ್ನಿಯ ಕುಮಾರ ಪ್ಯಾಟಿ(18) ಹಾಗೂ ಬಾಗಲಕೋಟ ಜಿಲ್ಲಾಸ್ಪತ್ರೆಯಲ್ಲಿ ಮಲಗಲದಿನ್ನಿಯ ರಾಯಪ್ಪ ಮಹಾಂತಪ್ಪ ಬಾಗೇವಾಡಿ(24) ಸಾವನ್ನಪ್ಪಿದವರು.

ಮಲಗಲದಿನ್ನಿಯ ಶಾಹಿದ ಹುನಗುಂದ(19), ಪ್ರಶಾಂತ ಎಚ್ ಕುರುಬಗೌಡರ(16), ಹನಮಂತ ಕುರುಬಗೌಡರ( 1 8) ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಬಾಗಲಕೋಟ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಕುಂಟೋಜಿ ಜಾತ್ರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಬಂದಿದ್ದವರು ರಸ್ತೆ ಬದಿ ವಾಹನ ನಿಲ್ಲಿಸಿ ಮೂತ್ರವಿಸರ್ಜನೆಗೆ ರಸ್ತೆ ದಾಟುವ ಸಮಯದಲ್ಲಿ ಅತಿ ವೇಗದಿಂದ ಬಂದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದರಿಂದಲೇ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳಿಗೆ ರಾತ್ರಿಯೇ ತಾಲ್ಲೂಕು ಆಸ್ಪತ್ರೆಯ ವೈದ್ಯ ಡಾ.ಪರಶುರಾಮ ವಡ್ಡರ ನೇತೃತ್ವದಲ್ಲಿ ಶುಶ್ರೂಷಣಾಧಿಕಾರಿಗಳಾದ ಶೇಖಪ್ಪ ಬಿರಾದಾರ,ಅಖೀಲಾ ಬೇಗಂ, ರುಕ್ಸಾನಾ,ದಾನಮ್ಮ ಪ್ರಾಥಮಿಕ ಚಿಕಿತ್ಸೆ ನೀಡಿದರು.

ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸೈ ಸಂಜಯ ತಿಪರೆಡ್ಡಿ ಭೇಟಿ ನೀಡಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮಾಜಿ ಶಾಸಕ ನಡಹಳ್ಳಿಗೆ ಶಾಸಕ ನಾಡಗೌಡ ಬುದ್ಧಿಮಾತು: ಕ್ಷೇತ್ರದ ಜನಕ್ಕೆ ಬುದ್ದಿ ಇಲ್ಲ ಎಂದವರಿಗೆ ಸ್ವಾಭಿಮಾನಿ ಮತದಾರರಿಂದ ತಕ್ಕಪಾಠ-ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ 2.50 ಲಕ್ಷ ಜನರು ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.ಪ್ರತಿ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ಗೆ ಕಾರು ಡಿಕ್ಕಿ ; ಹಿಂಬದಿ ಸವಾರ ಸಾವು

ಮುದ್ದೇಬಿಹಾಳ : ಬೈಕ್‌ವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ತಂಗಡಗಿ ರಸ್ತೆಯ ಕೋಳೂರು ಕ್ರಾಸ್‌ನಲ್ಲಿ ಭಾನುವಾರ ನಡೆದಿದೆ. ಕೂಡಲಸಂಗಮ ಮೂಲದ ಶರಣಬಸಯ್ಯ ನಿಜಗುಣಯ್ಯ ಹಿರೇಮಠ(43) ಮೃತಪಟ್ಟಿರುವ ವ್ಯಕ್ತಿ. ಬೈಕ್ ಚಲಾಯಿಸುತ್ತಿದ್ದ ಸವಾರ ಅಮರೇಶ ಸಂಗಪ್ಪ ಗುಗ್ಗರಿಗೂ ಗಂಭೀರವಾದ ಗಾಯಳಾಗಿದ್ದು ಅವರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಿಫ್ಟ್ ಡಿಜೈರ್ ಕಾರ ನಂಬರ್ ಕೆ.ಎ-37, ಎನ್-3584 ಚಾಲಕನು ಮುದ್ದೇಬಿಹಾಳ ಕಡೆಯಿಂದ ಹುನಗುಂದ ಕಡೆಗೆ ಅತೀ ವೇಗವಾಗಿ

ಗ್ಯಾರಂಟಿ ಯೋಜನೆ:                                                     ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಗ್ಯಾರಂಟಿ ಯೋಜನೆ: ಮನೆಗಳ ಎದುರಿಗೆ ರಂಗೋಲಿ ಬಿಡಿಸಿ ಜಾಗೃತಿ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ ಗ್ಯಾರಂಟಿ ಸಮೀತಿ ಪದಾಧಿಕಾರಿಗಳು ನಿವಾಸಿಗಳ ಮನೆ ಎದುರಿಗೆ ರಂಗೋಲಿ ಬಿಡಿಸಿ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸಿದರು. ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ,ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸಮೀತಿ ಪದಾಧಿಕಾರಿಗಳು ಇದ್ದರು.