ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಮತಕ್ಷೇತ್ರದಿಂದ ನಾಲ್ಕು ಸಾವಿರ ಜನ ಕಾರ್ಯಕರ್ತರು,ಅಭಿಮಾನಿಗಳು ತೆರಳಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ದಾಸೋಹ ನಿಲಯದಲ್ಲಿರುವ ಮಂಡಲ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಾಮಾಜಿಕ ಕ್ಷೇತ್ರದಲ್ಲಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಈ ಸಮಯದಲ್ಲಿ ಅವರನ್ನು ಅಭಿನಂದಿಸುವುದು ನಮ್ಮೆಲ್ಲ ಕಾರ್ಯಕರ್ತರು,ಅಭಿಮಾನಿಗಳ ಕರ್ತವ್ಯವಾಗಿದೆ.ಐವತ್ತು ವರ್ಷದ ರಾಜಕೀಯ ಜೀವನದಲ್ಲಿ 45 ವರ್ಷ ಸಂಘರ್ಷದ ಬದುಕು ಅವರದ್ದಾಗಿದೆ.ಅವರು ಸಿಎಂ ಆಗಿದ್ದ ವೇಳೆ ಜಾರಿಗೊಳಿಸಿದ ಭಾಗ್ಯಲಕ್ಷಿö್ಮÃ ಯೋಜನೆ ಇಂದು ಲಕ್ಷಾಂತರ ಹೆಣ್ಣುಮಕ್ಕಳಿಗೆ ಆಸರೆಯಾಗಿದೆ.ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ,ನೇಕಾರರಿಗೆ ಸಾಲ ಮನ್ನಾ ,ವಿದ್ಯುತ್ ಸಬ್ಸಿಡಿ,ಕಿಸಾನ್ ಸಮ್ಮಾನ ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದು ಹೇಳಿದರು.

ವಿಜಯಪುರ ಜಿಲ್ಲೆಯ ಚಿಮ್ಮಲಗಿ ಏತನೀರಾವರಿ,ಮುಳವಾಡ ಏತನೀರಾವರಿಗೆ 1800 ಕೋಟಿ ರೂ.ಅನುದಾನ ನೀಡಿದ್ದರು.ಪ್ರವಾಹದ ಸಮಯದಲ್ಲಿ 169 ಗ್ರಾಮಗಳಿಗೆ ಪುನರ್ವಸತಿ ಕಲ್ಪಿಸಿದ್ದರು.124 ಕೆರೆಗಳನ್ನು ತುಂಬಿಸುವ ಕಾರ್ಯ ಮಾಡಿದ್ದರು.ಮುಸ್ಲಿಂ ಸಮಾಜಕ್ಕೆ ಹಜ್ ಭವನ ನಿರ್ಮಾಣ,ಹಜ್ ಯಾತ್ರೆಗೆ ಅನುದಾನ ಕೊಟ್ಟವರು ಯಡಿಯೂರಪ್ಪ ಎಂದು ತಿಳಿಸಿದರು.
ವಿಜಯಪುರ ಜಿಲ್ಲೆಯಿಂದ 20 ಸಾವಿರ ಜನ ಚಿತ್ರದುರ್ಗದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಲಿದ್ದು ಕಾರ್ಯಕರ್ತರು,ಅಭಿಮಾನಿಗಳು ಸ್ವಯಂಪ್ರೇರಣೆಯಿAದ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಚಿತ್ರದುರ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯದೆಲ್ಲೆಡೆ ಅವರ ಅಭಿಮಾನಿಗಳು,ಕಾರ್ಯಕರ್ತರು ಅಂದಾಜು 15 ಲಕ್ಷ ಜನ ಸಮಾವೇಶಗೊಳ್ಳಲಿದ್ದಾರೆ.ಯಡಿಯೂರಪ್ಪ ಎಂದರೆ ಬಿಜೆಪಿ,ಯಡಿಯೂರಪ್ಪ ಇಲ್ಲದೇ ಬಿಜೆಪಿ ಇಲ್ಲ ಎನ್ನುವಷ್ಟರ ಮಟ್ಟಿಗೆ ಅವರ ಸೇವೆ ಪಕ್ಷಕ್ಕೆ ಇದೆ ಎಂದು ಹೇಳಿದರು.

ಪಕ್ಷದ ಮುಖಂಡರಾದ ಎಂ.ಎಸ್.ಪಾಟೀಲ, ಪ್ರಭು ಕಡಿ,ಮಲಕೇಂದ್ರಗೌಡ ಪಾಟೀಲ,ಚೆನ್ನಬಸ್ಸು ಚೆನ್ನಿಗಾವಿ,ಗಿರೀಶಗೌಡ ಪಾಟೀಲ,ಮದನಸ್ವಾಮಿ ಹಿರೇಮಠ,ಡಾ.ವೀರೇಶ ಪಾಟೀಲ,ಡಾ.ಸಿ.ಕೆ.ಶಿವಯೋಗಿಮಠ,ಕೆಂಚಪ್ಪ ಬಿರಾದಾರ,ಎಂ.ಆರ್.ಪಾಟೀಲ ವಕೀಲರು,ಮುತ್ತಣ್ಣ ಹುಗ್ಗಿ, ಮಲ್ಲಯ್ಯ ಬಿರಾದಾರ,ಪ್ರೇಮಸಿಂಗ ಚವ್ಹಾಣ,ಸೋಮನಗೌಡ ಬಿರಾದಾರ,ಮಹಾಂತಗೌಡ ಗಂಗನಗೌಡರ ಮೊದಲಾದವರು ಇದ್ದರು.


2008,2013ರಲ್ಲಿ ಟಿಕೇಟ್ ಕೊಡುವುದಾಗಿ ಯಡಿಯೂರಪ್ಪನವರು ನನಗೆ ಕರೆದಿದ್ದರು.ಆದರೆ ಅಂದಿನ ರಾಜಕೀಯ ಸ್ಥಿತ್ಯಂತರಗಳ ಮಧ್ಯೆ ನಾನು ಹೋಗಿರಲಿಲ್ಲ.2018ರಲ್ಲಿ ಮತ್ತೆ ಕರೆದು ಟಿಕೇಟ್ ಕೊಟ್ಟರು.ಆಗ ಗೆಲುವು ಸಾಧಿಸಿದಾಗ ನನಗೆ ನಿಗಮ ಮಂಡಳಿ ಸ್ಥಾನ ನೀಡಿ ಪ್ರೋತ್ಸಾಹಿಸಿದ್ದರು.2023ರ ಚುನಾವಣೆಯಲ್ಲಿ ಸೋತಿದ್ದರೂ ನನಗೆ ಪಕ್ಷದ ರೈತ ಮೋರ್ಚಾ ಸ್ಥಾನಮಾನ ಕೊಟ್ಟು ಬೆಳೆಸಿದ್ದಾರೆ.ನಾನು ಅವರ ಶಿಷ್ಯ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ.
–ಎ.ಎಸ್.ಪಾಟೀಲ ನಡಹಳ್ಳಿ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್‌ಬಾಲ್ ಕ್ರಿಕೇಟ್ ಟೂರ್ನಾಮೆಂಟ್‌ನಲ್ಲಿ ಪಾಲ್ಗೊಳ್ಳುವ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಗೆ ಸನ್ 2025-26 ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಆಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಆರ್.ನಾರಾಯಣಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ