ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಮತಕ್ಷೇತ್ರದಿಂದ ನಾಲ್ಕು ಸಾವಿರ ಜನ ಕಾರ್ಯಕರ್ತರು,ಅಭಿಮಾನಿಗಳು ತೆರಳಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ದಾಸೋಹ ನಿಲಯದಲ್ಲಿರುವ ಮಂಡಲ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಾಮಾಜಿಕ ಕ್ಷೇತ್ರದಲ್ಲಿ 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಈ ಸಮಯದಲ್ಲಿ ಅವರನ್ನು ಅಭಿನಂದಿಸುವುದು ನಮ್ಮೆಲ್ಲ ಕಾರ್ಯಕರ್ತರು,ಅಭಿಮಾನಿಗಳ ಕರ್ತವ್ಯವಾಗಿದೆ.ಐವತ್ತು ವರ್ಷದ ರಾಜಕೀಯ ಜೀವನದಲ್ಲಿ 45 ವರ್ಷ ಸಂಘರ್ಷದ ಬದುಕು ಅವರದ್ದಾಗಿದೆ.ಅವರು ಸಿಎಂ ಆಗಿದ್ದ ವೇಳೆ ಜಾರಿಗೊಳಿಸಿದ ಭಾಗ್ಯಲಕ್ಷಿö್ಮÃ ಯೋಜನೆ ಇಂದು ಲಕ್ಷಾಂತರ ಹೆಣ್ಣುಮಕ್ಕಳಿಗೆ ಆಸರೆಯಾಗಿದೆ.ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ,ನೇಕಾರರಿಗೆ ಸಾಲ ಮನ್ನಾ ,ವಿದ್ಯುತ್ ಸಬ್ಸಿಡಿ,ಕಿಸಾನ್ ಸಮ್ಮಾನ ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದು ಹೇಳಿದರು.

ವಿಜಯಪುರ ಜಿಲ್ಲೆಯ ಚಿಮ್ಮಲಗಿ ಏತನೀರಾವರಿ,ಮುಳವಾಡ ಏತನೀರಾವರಿಗೆ 1800 ಕೋಟಿ ರೂ.ಅನುದಾನ ನೀಡಿದ್ದರು.ಪ್ರವಾಹದ ಸಮಯದಲ್ಲಿ 169 ಗ್ರಾಮಗಳಿಗೆ ಪುನರ್ವಸತಿ ಕಲ್ಪಿಸಿದ್ದರು.124 ಕೆರೆಗಳನ್ನು ತುಂಬಿಸುವ ಕಾರ್ಯ ಮಾಡಿದ್ದರು.ಮುಸ್ಲಿಂ ಸಮಾಜಕ್ಕೆ ಹಜ್ ಭವನ ನಿರ್ಮಾಣ,ಹಜ್ ಯಾತ್ರೆಗೆ ಅನುದಾನ ಕೊಟ್ಟವರು ಯಡಿಯೂರಪ್ಪ ಎಂದು ತಿಳಿಸಿದರು.
ವಿಜಯಪುರ ಜಿಲ್ಲೆಯಿಂದ 20 ಸಾವಿರ ಜನ ಚಿತ್ರದುರ್ಗದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಲಿದ್ದು ಕಾರ್ಯಕರ್ತರು,ಅಭಿಮಾನಿಗಳು ಸ್ವಯಂಪ್ರೇರಣೆಯಿAದ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಚಿತ್ರದುರ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯದೆಲ್ಲೆಡೆ ಅವರ ಅಭಿಮಾನಿಗಳು,ಕಾರ್ಯಕರ್ತರು ಅಂದಾಜು 15 ಲಕ್ಷ ಜನ ಸಮಾವೇಶಗೊಳ್ಳಲಿದ್ದಾರೆ.ಯಡಿಯೂರಪ್ಪ ಎಂದರೆ ಬಿಜೆಪಿ,ಯಡಿಯೂರಪ್ಪ ಇಲ್ಲದೇ ಬಿಜೆಪಿ ಇಲ್ಲ ಎನ್ನುವಷ್ಟರ ಮಟ್ಟಿಗೆ ಅವರ ಸೇವೆ ಪಕ್ಷಕ್ಕೆ ಇದೆ ಎಂದು ಹೇಳಿದರು.

ಪಕ್ಷದ ಮುಖಂಡರಾದ ಎಂ.ಎಸ್.ಪಾಟೀಲ, ಪ್ರಭು ಕಡಿ,ಮಲಕೇಂದ್ರಗೌಡ ಪಾಟೀಲ,ಚೆನ್ನಬಸ್ಸು ಚೆನ್ನಿಗಾವಿ,ಗಿರೀಶಗೌಡ ಪಾಟೀಲ,ಮದನಸ್ವಾಮಿ ಹಿರೇಮಠ,ಡಾ.ವೀರೇಶ ಪಾಟೀಲ,ಡಾ.ಸಿ.ಕೆ.ಶಿವಯೋಗಿಮಠ,ಕೆಂಚಪ್ಪ ಬಿರಾದಾರ,ಎಂ.ಆರ್.ಪಾಟೀಲ ವಕೀಲರು,ಮುತ್ತಣ್ಣ ಹುಗ್ಗಿ, ಮಲ್ಲಯ್ಯ ಬಿರಾದಾರ,ಪ್ರೇಮಸಿಂಗ ಚವ್ಹಾಣ,ಸೋಮನಗೌಡ ಬಿರಾದಾರ,ಮಹಾಂತಗೌಡ ಗಂಗನಗೌಡರ ಮೊದಲಾದವರು ಇದ್ದರು.


2008,2013ರಲ್ಲಿ ಟಿಕೇಟ್ ಕೊಡುವುದಾಗಿ ಯಡಿಯೂರಪ್ಪನವರು ನನಗೆ ಕರೆದಿದ್ದರು.ಆದರೆ ಅಂದಿನ ರಾಜಕೀಯ ಸ್ಥಿತ್ಯಂತರಗಳ ಮಧ್ಯೆ ನಾನು ಹೋಗಿರಲಿಲ್ಲ.2018ರಲ್ಲಿ ಮತ್ತೆ ಕರೆದು ಟಿಕೇಟ್ ಕೊಟ್ಟರು.ಆಗ ಗೆಲುವು ಸಾಧಿಸಿದಾಗ ನನಗೆ ನಿಗಮ ಮಂಡಳಿ ಸ್ಥಾನ ನೀಡಿ ಪ್ರೋತ್ಸಾಹಿಸಿದ್ದರು.2023ರ ಚುನಾವಣೆಯಲ್ಲಿ ಸೋತಿದ್ದರೂ ನನಗೆ ಪಕ್ಷದ ರೈತ ಮೋರ್ಚಾ ಸ್ಥಾನಮಾನ ಕೊಟ್ಟು ಬೆಳೆಸಿದ್ದಾರೆ.ನಾನು ಅವರ ಶಿಷ್ಯ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ.
–ಎ.ಎಸ್.ಪಾಟೀಲ ನಡಹಳ್ಳಿ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ