ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಯುಗಾದಿ ಹಬ್ಬದ ನಿಮಿತ್ಯ ತಾಲೂಕಿನ ಖಿಲಾರಹಟ್ಟಿ ಗ್ರಾಮದ ಕಾಡಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.21 ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಸೇವಕ ಎಂ.ಎನ್.ಮದರಿ(ಪೂಜಾರಿ) ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ನಮ್ಮ ಮನೆಯ ದೇವರು ಸುರಪೂರ ತಾಲ್ಲೂಕಿನ ಮಾರನಾಳ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವರಾಗಿದ್ದು ಖಿಲಾರಹಟ್ಟಿಯಲ್ಲಿಯೇ ಬೀರಲಿಂಗೇಶ್ವರನಿಗೆ ದೇವಸ್ಥಾನ ಕಟ್ಟಿಸಿದ್ದೇವೆ.ಕಾಡಸಿದ್ಧೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರೆ ಮಾ.20 ರಂದು ಜರುಗಲಿದ್ದು ಅಂದು ಮಾರನಾಳ, ಕಣಕಾಲ, ಇವಣಗಿ, ವಡವಡಗಿ, ನಾಗರಾಳ, ಖಿಲಾರಹಟ್ಟಿ, ನಾಗರಬೆಟ್ಟ, ಅಡವಿ ಸೋಮನಾಳ, ಗೋನಾಳ, ಎಣ್ಣಿವಡಗೇರಿ, ಅಮರಗೋಳ ಗ್ರಾಮಗಳಿಂದ ದೇವರ ಪಲ್ಲಕ್ಕಿಗಳು ಖಿಲಾರಹಟ್ಟಿಗೆ ಆಗಮಿಸಿ ಪೂಜಿಸಲಾಗುತ್ತದೆ ಎಂದು ಹೇಳಿದರು.

ಮಾ.21 ರಂದು ಮದ್ಯಾಹ್ನ 12ಕ್ಕೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಗತೀರ್ಥದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ, ಅಂಕಲಿಮಠದ ವೀರಭದ್ರ ಸ್ವಾಮೀಜಿ,ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ,ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ವಹಿಸುವರು. ಸಾನಿಧ್ಯವನ್ನು ಯರಝರಿಯ ಮಲ್ಲಾರಲಿಂಗ ಪ್ರಭುಗಳು, ಸರೂರಿನ ಶಿವಯ್ಯ ಗುರುವಿನ,ಖಿಲಾರಹಟ್ಟಿಯ ರಮಾನಂದ ಸ್ವಾಮೀಜಿ,ಸಿದ್ದಾಪೂರದ ಅರವಿಂದ ಒಡೆಯರ,ಸಾಲವಾಡಗಿಯ ದೊಡ್ಡ ಸಣ್ಣೆಕಪ್ಪ ಮುತ್ಯಾ,ತಿಂತಣಿ ಬ್ರಿಜ್‌ನ ಸಿದ್ದಬೀರ ದೇವರು, ಮಾಳಳ್ಳಿ ಕೆಂಚರಾಯ ಪೂಜಾರಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ,ಜಿಪಂ ಮಾಜಿ ಅಧ್ಯಕ್ಷ ಗಂಗಾಧರ ನಾಡಗೌಡ,ಕಾಂಗ್ರೆಸ್ ಧುರೀಣ ಶಾಂತಗೌಡ ಪಾಟೀಲ ನಡಹಳ್ಳಿ ಜ್ಯೋತಿ ಬೆಳಗಿಸುವರು.ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಅಧ್ಯಕ್ಷರು ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾದ ಎನ್.ಎಸ್.ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಅತಿಥಿಗಳಾಗಿ ವಕೀಲರಾದ ಬಿ.ಜಿ.ಜಗ್ಗಲ, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಆರ್.ಬಿರಾದಾರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಜಿಪಂ ಮಾಜಿ ಸದಸ್ಯ ಎನ್.ಎಸ್.ಬಪ್ಪರಗಿ,ಬಿ.ಎಸ್.ಶಿರೋಳ,ವಕೀಲರಾದ ಎಂ.ಎಚ್.ಹಾಲಣ್ಣವರ,ಸAತ ಕನಕದಾಸ ಶಾಲೆಯ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ,ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ,ತಾಪಂ ಮಾಜಿ ಅಧ್ಯಕ್ಷ ವಾಯ್.ಎಚ್.ವಿಜಯಕರ್, ಪುರಸಭೆ ಮಾಜಿ ಸದಸ್ಯೆ ಸಂಗಮ್ಮ ದೇವರಳ್ಳಿ, ಮಿಣಜಗಿ ಗುತ್ತಿಗೆದಾರ ಎಚ್.ಎಮ್.ನಾಯಕ,ಹರನಾಳದ ಎಂ.ಎಸ್.ಬೊಮ್ಮನಹಳ್ಳಿ,ಪುರಸಭೆ ಸ್ಥಾಯಿ ಸಮೀತಿ ಮಾಜಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ,ಯರಝರಿ ಕಾಂಗ್ರೆಸ್ ಮುಖಂಡ ಮಲ್ಲಣ್ಣ ಅಪರಾಧಿ,ನಿಡಗುಂದಿ ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಮುತ್ತಣ್ಣ ಮುತ್ತಣ್ಣವರ, ನಾಗರಬೆಟ್ಟ ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದರಾಮಪ್ಪಗೌಡ ಪ್ಯಾಟಿ,ಮೂಕಿಹಾಳದ ಕಾಂಗ್ರೆಸ್ ಧುರೀಣ ಕಾಸೀಂ ಪಟೇಲ್,ತಾಳಿಕೋಟಿ ಕುರುಬರ ಸಂಘದ ಅಧ್ಯಕ್ಷ ಸಾಯಬಣ್ಣ ಆಲ್ಯಾಳ,ಹುಲ್ಲೂರ ಕಾಂಗ್ರೆಸ್ ಧುರೀಣ ಸುರೇಶ ಹಳೇಮನಿ,ಪಂಜುರ್ಲಿ ಹೊಟೇಲ್ ಮಾಲೀಕ ವಿಜಯ ಪೂಜಾರಿ ಆಗಮಿಸುವರು ಎಂದು ತಿಳಿಸಿದರು.

ಮಾ.22 ರಂದು ಬೆಳಗ್ಗೆ 10ಕ್ಕೆ ರಂಗೋಲಿ ಸ್ಪರ್ಧೆ,ಸಂಜೆ 7ಕ್ಕೆ ಖೋಖೋ ಸ್ಪರ್ಧೆ ನಡೆಯಲಿದೆ.ಮದ್ಯಾಹ್ನ 12ಕ್ಕೆ ತೆರಬಂಡಿ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.ಕಾಂಗ್ರೆಸ್ ಧುರೀಣ ವಾಯ್.ಎಚ್.ವಿಜಯಕರ್ ಮಾತನಾಡಿ, ಬಡವರು,ಕಾರ್ಮಿಕರು,ಅಸಹಾಯಕರ ನೆರವಿಗೆ ಸಮಾಜ ಸೇವಕ ಎಂ.ಎನ್.ಮದರಿ ಅವರು ಕೈಗೊಳ್ಳುತ್ತಿರುವ ಕಾರ್ಯಗಳು ಜನರಿಗೆ ಅನುಕೂಲ ಒದಗಿಸುತ್ತಿವೆ.ಮುಂದಿನ ದಿನಗಳಲ್ಲಿ ಹೆಚ್ಚಿನ ಜನಸೇವೆ ಮಾಡುವ ಅವಕಾಶ ಅವರಿಗೆ ಒದಗಿ ಬರಲಿ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ಮುಖಂಡ ಎಂ.ಬಿ.ಕೆಸರಟ್ಟಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ, ಬಸವರಾಜ ಗೂಡಲಮನಿ, ಚಂದ್ರು ಹಿರೇಮಠ, ಚಂದ್ರು ಜೋಗಿ ಮೊದಲಾದವರು ಇದ್ದರು.


ಟಗರಿನ ಕಾಳಗ ಸ್ಪರ್ಧೆಗೆ ಪ್ರವೇಶ ಉಚಿತ :
ಮಾ.21 ರಂದು ಸಂಜೆ 6ಕ್ಕೆ ಟಗರಿನ ಕಾಳಗ ಸ್ಪರ್ಧೆ ನಡೆಯಲಿದ್ದು ಪ್ರವೇಶ ಉಚಿತವಾಗಿದೆ ಎಂದು ತಿಳಿಸಿದರು.ಆರು,ನಾಲ್ಕು,ಎರಡು ಹಲ್ಲಿನ ಟಗರುಗಳ ಕಾಳಗ ಸ್ಪರ್ಧೆ ನಡೆಯಲಿದ್ದು ಆಕರ್ಷಕ ನಗದು ಬಹುಮಾನ ಇರಲಿದೆ ಎಂದು ತಿಳಿಸಿದರು.ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವರು ಮೊ.9980394710,9972392774,9980529772,9972296782 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ