ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಯುಗಾದಿ ಹಬ್ಬದ ನಿಮಿತ್ಯ ತಾಲೂಕಿನ ಖಿಲಾರಹಟ್ಟಿ ಗ್ರಾಮದ ಕಾಡಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.21 ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಸೇವಕ ಎಂ.ಎನ್.ಮದರಿ(ಪೂಜಾರಿ) ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ನಮ್ಮ ಮನೆಯ ದೇವರು ಸುರಪೂರ ತಾಲ್ಲೂಕಿನ ಮಾರನಾಳ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವರಾಗಿದ್ದು ಖಿಲಾರಹಟ್ಟಿಯಲ್ಲಿಯೇ ಬೀರಲಿಂಗೇಶ್ವರನಿಗೆ ದೇವಸ್ಥಾನ ಕಟ್ಟಿಸಿದ್ದೇವೆ.ಕಾಡಸಿದ್ಧೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರೆ ಮಾ.20 ರಂದು ಜರುಗಲಿದ್ದು ಅಂದು ಮಾರನಾಳ, ಕಣಕಾಲ, ಇವಣಗಿ, ವಡವಡಗಿ, ನಾಗರಾಳ, ಖಿಲಾರಹಟ್ಟಿ, ನಾಗರಬೆಟ್ಟ, ಅಡವಿ ಸೋಮನಾಳ, ಗೋನಾಳ, ಎಣ್ಣಿವಡಗೇರಿ, ಅಮರಗೋಳ ಗ್ರಾಮಗಳಿಂದ ದೇವರ ಪಲ್ಲಕ್ಕಿಗಳು ಖಿಲಾರಹಟ್ಟಿಗೆ ಆಗಮಿಸಿ ಪೂಜಿಸಲಾಗುತ್ತದೆ ಎಂದು ಹೇಳಿದರು.

ಮಾ.21 ರಂದು ಮದ್ಯಾಹ್ನ 12ಕ್ಕೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಗತೀರ್ಥದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ, ಅಂಕಲಿಮಠದ ವೀರಭದ್ರ ಸ್ವಾಮೀಜಿ,ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ,ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ವಹಿಸುವರು. ಸಾನಿಧ್ಯವನ್ನು ಯರಝರಿಯ ಮಲ್ಲಾರಲಿಂಗ ಪ್ರಭುಗಳು, ಸರೂರಿನ ಶಿವಯ್ಯ ಗುರುವಿನ,ಖಿಲಾರಹಟ್ಟಿಯ ರಮಾನಂದ ಸ್ವಾಮೀಜಿ,ಸಿದ್ದಾಪೂರದ ಅರವಿಂದ ಒಡೆಯರ,ಸಾಲವಾಡಗಿಯ ದೊಡ್ಡ ಸಣ್ಣೆಕಪ್ಪ ಮುತ್ಯಾ,ತಿಂತಣಿ ಬ್ರಿಜ್‌ನ ಸಿದ್ದಬೀರ ದೇವರು, ಮಾಳಳ್ಳಿ ಕೆಂಚರಾಯ ಪೂಜಾರಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ,ಜಿಪಂ ಮಾಜಿ ಅಧ್ಯಕ್ಷ ಗಂಗಾಧರ ನಾಡಗೌಡ,ಕಾಂಗ್ರೆಸ್ ಧುರೀಣ ಶಾಂತಗೌಡ ಪಾಟೀಲ ನಡಹಳ್ಳಿ ಜ್ಯೋತಿ ಬೆಳಗಿಸುವರು.ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಅಧ್ಯಕ್ಷರು ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾದ ಎನ್.ಎಸ್.ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಅತಿಥಿಗಳಾಗಿ ವಕೀಲರಾದ ಬಿ.ಜಿ.ಜಗ್ಗಲ, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಆರ್.ಬಿರಾದಾರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಜಿಪಂ ಮಾಜಿ ಸದಸ್ಯ ಎನ್.ಎಸ್.ಬಪ್ಪರಗಿ,ಬಿ.ಎಸ್.ಶಿರೋಳ,ವಕೀಲರಾದ ಎಂ.ಎಚ್.ಹಾಲಣ್ಣವರ,ಸAತ ಕನಕದಾಸ ಶಾಲೆಯ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ,ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ,ತಾಪಂ ಮಾಜಿ ಅಧ್ಯಕ್ಷ ವಾಯ್.ಎಚ್.ವಿಜಯಕರ್, ಪುರಸಭೆ ಮಾಜಿ ಸದಸ್ಯೆ ಸಂಗಮ್ಮ ದೇವರಳ್ಳಿ, ಮಿಣಜಗಿ ಗುತ್ತಿಗೆದಾರ ಎಚ್.ಎಮ್.ನಾಯಕ,ಹರನಾಳದ ಎಂ.ಎಸ್.ಬೊಮ್ಮನಹಳ್ಳಿ,ಪುರಸಭೆ ಸ್ಥಾಯಿ ಸಮೀತಿ ಮಾಜಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ,ಯರಝರಿ ಕಾಂಗ್ರೆಸ್ ಮುಖಂಡ ಮಲ್ಲಣ್ಣ ಅಪರಾಧಿ,ನಿಡಗುಂದಿ ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಮುತ್ತಣ್ಣ ಮುತ್ತಣ್ಣವರ, ನಾಗರಬೆಟ್ಟ ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದರಾಮಪ್ಪಗೌಡ ಪ್ಯಾಟಿ,ಮೂಕಿಹಾಳದ ಕಾಂಗ್ರೆಸ್ ಧುರೀಣ ಕಾಸೀಂ ಪಟೇಲ್,ತಾಳಿಕೋಟಿ ಕುರುಬರ ಸಂಘದ ಅಧ್ಯಕ್ಷ ಸಾಯಬಣ್ಣ ಆಲ್ಯಾಳ,ಹುಲ್ಲೂರ ಕಾಂಗ್ರೆಸ್ ಧುರೀಣ ಸುರೇಶ ಹಳೇಮನಿ,ಪಂಜುರ್ಲಿ ಹೊಟೇಲ್ ಮಾಲೀಕ ವಿಜಯ ಪೂಜಾರಿ ಆಗಮಿಸುವರು ಎಂದು ತಿಳಿಸಿದರು.

ಮಾ.22 ರಂದು ಬೆಳಗ್ಗೆ 10ಕ್ಕೆ ರಂಗೋಲಿ ಸ್ಪರ್ಧೆ,ಸಂಜೆ 7ಕ್ಕೆ ಖೋಖೋ ಸ್ಪರ್ಧೆ ನಡೆಯಲಿದೆ.ಮದ್ಯಾಹ್ನ 12ಕ್ಕೆ ತೆರಬಂಡಿ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.ಕಾಂಗ್ರೆಸ್ ಧುರೀಣ ವಾಯ್.ಎಚ್.ವಿಜಯಕರ್ ಮಾತನಾಡಿ, ಬಡವರು,ಕಾರ್ಮಿಕರು,ಅಸಹಾಯಕರ ನೆರವಿಗೆ ಸಮಾಜ ಸೇವಕ ಎಂ.ಎನ್.ಮದರಿ ಅವರು ಕೈಗೊಳ್ಳುತ್ತಿರುವ ಕಾರ್ಯಗಳು ಜನರಿಗೆ ಅನುಕೂಲ ಒದಗಿಸುತ್ತಿವೆ.ಮುಂದಿನ ದಿನಗಳಲ್ಲಿ ಹೆಚ್ಚಿನ ಜನಸೇವೆ ಮಾಡುವ ಅವಕಾಶ ಅವರಿಗೆ ಒದಗಿ ಬರಲಿ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ಮುಖಂಡ ಎಂ.ಬಿ.ಕೆಸರಟ್ಟಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ, ಬಸವರಾಜ ಗೂಡಲಮನಿ, ಚಂದ್ರು ಹಿರೇಮಠ, ಚಂದ್ರು ಜೋಗಿ ಮೊದಲಾದವರು ಇದ್ದರು.


ಟಗರಿನ ಕಾಳಗ ಸ್ಪರ್ಧೆಗೆ ಪ್ರವೇಶ ಉಚಿತ :
ಮಾ.21 ರಂದು ಸಂಜೆ 6ಕ್ಕೆ ಟಗರಿನ ಕಾಳಗ ಸ್ಪರ್ಧೆ ನಡೆಯಲಿದ್ದು ಪ್ರವೇಶ ಉಚಿತವಾಗಿದೆ ಎಂದು ತಿಳಿಸಿದರು.ಆರು,ನಾಲ್ಕು,ಎರಡು ಹಲ್ಲಿನ ಟಗರುಗಳ ಕಾಳಗ ಸ್ಪರ್ಧೆ ನಡೆಯಲಿದ್ದು ಆಕರ್ಷಕ ನಗದು ಬಹುಮಾನ ಇರಲಿದೆ ಎಂದು ತಿಳಿಸಿದರು.ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವರು ಮೊ.9980394710,9972392774,9980529772,9972296782 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

Latest News

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದ ಫಲಿತಾಂಶ : ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಂಸ್ಥೆಯ ಶೃತಿ ರಾಜ್ಯಕ್ಕೆ 2ನೇ ರ‍್ಯಾಂಕ್

ಮುದ್ದೇಬಿಹಾಳ : ಸನ್ 2026 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮರು ಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ ಮಠ್ಸ್ ಸಮೂಹ ಸಂಸ್ಥೆಯ ಎಸ್.ಡಿ.ಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಶೃತಿ ಶಿವನಗೌಡ ಪೀರಾಪೂರ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಈ ಮೊದಲು ಫಲಿತಾಂಶ ಪ್ರಕಟಗೊಂಡಾಗ ಶೃತಿಗೆ 617 ಅಂಕ ಪಡೆದುಕೊಂಡಿದ್ದಳು.ಶಾಲೆಯ ಆಡಳಿತ ಮಂಡಳಿ ಹಾಗೂ ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಏಳು ಅಂಕಗಳು ಶೃತಿಗೆ ಲಭಿಸಿವೆ.ಆ ಮೂಲಕ ಶೃತಿ ಕನ್ನಡ ಮಾಧ್ಯಮದಲ್ಲಿ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ನಾಗರಬೆಟ್ಟದ ಆಕ್ಸಫರ್ಡ್