ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮಾ.21 ರಂದು ಖಿಲಾರಹಟ್ಟಿಯಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಯುಗಾದಿ ಹಬ್ಬದ ನಿಮಿತ್ಯ ತಾಲೂಕಿನ ಖಿಲಾರಹಟ್ಟಿ ಗ್ರಾಮದ ಕಾಡಸಿದ್ದೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.21 ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಸೇವಕ ಎಂ.ಎನ್.ಮದರಿ(ಪೂಜಾರಿ) ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ನಮ್ಮ ಮನೆಯ ದೇವರು ಸುರಪೂರ ತಾಲ್ಲೂಕಿನ ಮಾರನಾಳ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವರಾಗಿದ್ದು ಖಿಲಾರಹಟ್ಟಿಯಲ್ಲಿಯೇ ಬೀರಲಿಂಗೇಶ್ವರನಿಗೆ ದೇವಸ್ಥಾನ ಕಟ್ಟಿಸಿದ್ದೇವೆ.ಕಾಡಸಿದ್ಧೇಶ್ವರ ಹಾಗೂ ಬೀರಲಿಂಗೇಶ್ವರ ಜಾತ್ರೆ ಮಾ.20 ರಂದು ಜರುಗಲಿದ್ದು ಅಂದು ಮಾರನಾಳ, ಕಣಕಾಲ, ಇವಣಗಿ, ವಡವಡಗಿ, ನಾಗರಾಳ, ಖಿಲಾರಹಟ್ಟಿ, ನಾಗರಬೆಟ್ಟ, ಅಡವಿ ಸೋಮನಾಳ, ಗೋನಾಳ, ಎಣ್ಣಿವಡಗೇರಿ, ಅಮರಗೋಳ ಗ್ರಾಮಗಳಿಂದ ದೇವರ ಪಲ್ಲಕ್ಕಿಗಳು ಖಿಲಾರಹಟ್ಟಿಗೆ ಆಗಮಿಸಿ ಪೂಜಿಸಲಾಗುತ್ತದೆ ಎಂದು ಹೇಳಿದರು.

ಮಾ.21 ರಂದು ಮದ್ಯಾಹ್ನ 12ಕ್ಕೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮ ಆಯೋಜಿಸಲಾಗಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಗತೀರ್ಥದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ, ಅಂಕಲಿಮಠದ ವೀರಭದ್ರ ಸ್ವಾಮೀಜಿ,ಸಿದ್ಧನಕೊಳ್ಳದ ಶಿವಕುಮಾರ ಸ್ವಾಮೀಜಿ,ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ವಹಿಸುವರು. ಸಾನಿಧ್ಯವನ್ನು ಯರಝರಿಯ ಮಲ್ಲಾರಲಿಂಗ ಪ್ರಭುಗಳು, ಸರೂರಿನ ಶಿವಯ್ಯ ಗುರುವಿನ,ಖಿಲಾರಹಟ್ಟಿಯ ರಮಾನಂದ ಸ್ವಾಮೀಜಿ,ಸಿದ್ದಾಪೂರದ ಅರವಿಂದ ಒಡೆಯರ,ಸಾಲವಾಡಗಿಯ ದೊಡ್ಡ ಸಣ್ಣೆಕಪ್ಪ ಮುತ್ಯಾ,ತಿಂತಣಿ ಬ್ರಿಜ್‌ನ ಸಿದ್ದಬೀರ ದೇವರು, ಮಾಳಳ್ಳಿ ಕೆಂಚರಾಯ ಪೂಜಾರಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ,ಜಿಪಂ ಮಾಜಿ ಅಧ್ಯಕ್ಷ ಗಂಗಾಧರ ನಾಡಗೌಡ,ಕಾಂಗ್ರೆಸ್ ಧುರೀಣ ಶಾಂತಗೌಡ ಪಾಟೀಲ ನಡಹಳ್ಳಿ ಜ್ಯೋತಿ ಬೆಳಗಿಸುವರು.ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಅಧ್ಯಕ್ಷರು ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾದ ಎನ್.ಎಸ್.ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಅತಿಥಿಗಳಾಗಿ ವಕೀಲರಾದ ಬಿ.ಜಿ.ಜಗ್ಗಲ, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಆರ್.ಬಿರಾದಾರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ,ಜಿಪಂ ಮಾಜಿ ಸದಸ್ಯ ಎನ್.ಎಸ್.ಬಪ್ಪರಗಿ,ಬಿ.ಎಸ್.ಶಿರೋಳ,ವಕೀಲರಾದ ಎಂ.ಎಚ್.ಹಾಲಣ್ಣವರ,ಸAತ ಕನಕದಾಸ ಶಾಲೆಯ ಅಧ್ಯಕ್ಷ ಮಲಕೇಂದ್ರಗೌಡ ಪಾಟೀಲ,ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ,ತಾಪಂ ಮಾಜಿ ಅಧ್ಯಕ್ಷ ವಾಯ್.ಎಚ್.ವಿಜಯಕರ್, ಪುರಸಭೆ ಮಾಜಿ ಸದಸ್ಯೆ ಸಂಗಮ್ಮ ದೇವರಳ್ಳಿ, ಮಿಣಜಗಿ ಗುತ್ತಿಗೆದಾರ ಎಚ್.ಎಮ್.ನಾಯಕ,ಹರನಾಳದ ಎಂ.ಎಸ್.ಬೊಮ್ಮನಹಳ್ಳಿ,ಪುರಸಭೆ ಸ್ಥಾಯಿ ಸಮೀತಿ ಮಾಜಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ,ಯರಝರಿ ಕಾಂಗ್ರೆಸ್ ಮುಖಂಡ ಮಲ್ಲಣ್ಣ ಅಪರಾಧಿ,ನಿಡಗುಂದಿ ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಮುತ್ತಣ್ಣ ಮುತ್ತಣ್ಣವರ, ನಾಗರಬೆಟ್ಟ ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದರಾಮಪ್ಪಗೌಡ ಪ್ಯಾಟಿ,ಮೂಕಿಹಾಳದ ಕಾಂಗ್ರೆಸ್ ಧುರೀಣ ಕಾಸೀಂ ಪಟೇಲ್,ತಾಳಿಕೋಟಿ ಕುರುಬರ ಸಂಘದ ಅಧ್ಯಕ್ಷ ಸಾಯಬಣ್ಣ ಆಲ್ಯಾಳ,ಹುಲ್ಲೂರ ಕಾಂಗ್ರೆಸ್ ಧುರೀಣ ಸುರೇಶ ಹಳೇಮನಿ,ಪಂಜುರ್ಲಿ ಹೊಟೇಲ್ ಮಾಲೀಕ ವಿಜಯ ಪೂಜಾರಿ ಆಗಮಿಸುವರು ಎಂದು ತಿಳಿಸಿದರು.

ಮಾ.22 ರಂದು ಬೆಳಗ್ಗೆ 10ಕ್ಕೆ ರಂಗೋಲಿ ಸ್ಪರ್ಧೆ,ಸಂಜೆ 7ಕ್ಕೆ ಖೋಖೋ ಸ್ಪರ್ಧೆ ನಡೆಯಲಿದೆ.ಮದ್ಯಾಹ್ನ 12ಕ್ಕೆ ತೆರಬಂಡಿ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.ಕಾಂಗ್ರೆಸ್ ಧುರೀಣ ವಾಯ್.ಎಚ್.ವಿಜಯಕರ್ ಮಾತನಾಡಿ, ಬಡವರು,ಕಾರ್ಮಿಕರು,ಅಸಹಾಯಕರ ನೆರವಿಗೆ ಸಮಾಜ ಸೇವಕ ಎಂ.ಎನ್.ಮದರಿ ಅವರು ಕೈಗೊಳ್ಳುತ್ತಿರುವ ಕಾರ್ಯಗಳು ಜನರಿಗೆ ಅನುಕೂಲ ಒದಗಿಸುತ್ತಿವೆ.ಮುಂದಿನ ದಿನಗಳಲ್ಲಿ ಹೆಚ್ಚಿನ ಜನಸೇವೆ ಮಾಡುವ ಅವಕಾಶ ಅವರಿಗೆ ಒದಗಿ ಬರಲಿ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ಮುಖಂಡ ಎಂ.ಬಿ.ಕೆಸರಟ್ಟಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ, ಬಸವರಾಜ ಗೂಡಲಮನಿ, ಚಂದ್ರು ಹಿರೇಮಠ, ಚಂದ್ರು ಜೋಗಿ ಮೊದಲಾದವರು ಇದ್ದರು.


ಟಗರಿನ ಕಾಳಗ ಸ್ಪರ್ಧೆಗೆ ಪ್ರವೇಶ ಉಚಿತ :
ಮಾ.21 ರಂದು ಸಂಜೆ 6ಕ್ಕೆ ಟಗರಿನ ಕಾಳಗ ಸ್ಪರ್ಧೆ ನಡೆಯಲಿದ್ದು ಪ್ರವೇಶ ಉಚಿತವಾಗಿದೆ ಎಂದು ತಿಳಿಸಿದರು.ಆರು,ನಾಲ್ಕು,ಎರಡು ಹಲ್ಲಿನ ಟಗರುಗಳ ಕಾಳಗ ಸ್ಪರ್ಧೆ ನಡೆಯಲಿದ್ದು ಆಕರ್ಷಕ ನಗದು ಬಹುಮಾನ ಇರಲಿದೆ ಎಂದು ತಿಳಿಸಿದರು.ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವರು ಮೊ.9980394710,9972392774,9980529772,9972296782 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,