ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ

ನ.17 ರಂದು ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್ ಮತ್ತು ಅರ್ಜುನ ಆಸ್ಪತ್ರೆ ಇವರ ಸಹಯೋಗದಲ್ಲಿ ಆಶಾ ಕಾರ್ಯಕರ್ತೆಯರಿಗೆ ನವಜಾತ ಶಿಶುಗಳ ಆರೈಕೆ ಉಚಿತ ತರಬೇತಿ ಶಿಬಿರವನ್ನು ನ.17 ರಂದು ಬೆಳಗ್ಗೆ 11.30ಕ್ಕೆ ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನಿರ್ದೇಶಕ ಕುಮಾರ ವಡ್ಡರ ಹೇಳಿದರು.

ಪಟ್ಟಣದ ಅರ್ಜುನ್ ಆಸ್ಪತ್ರೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ತಾಲ್ಲೂಕಿನ ಎಲ್ಲ ಪಿಎಚ್‌ಸಿ ಆಶಾಗಳಿಗೆ ತರಬೇತಿ ಏರ್ಪಡಿಸಲಾಗಿದ್ದು ಮೊದಲ ಹಂತದಲ್ಲಿ ಗರಸಂಗಿ ಹಾಗೂ ತಂಗಡಗಿ ಪಿ.ಎಚ್.ಸಿ ವ್ಯಾಪ್ತಿಯಲ್ಲಿ ಬರುವ ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುತ್ತದೆ. ಚಿಕ್ಕಮಕ್ಕಳ ತಜ್ಞ ವೈದ್ಯರಾದ ಡಾ.ಪರಶುರಾಮ ವಡ್ಡರ ಅವರು ಮಾರ್ಗದರ್ಶನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂ.ಜಿ.ಎA.ಕೆ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ, ಟ್ರಸ್ಟ್ ಅಧ್ಯಕ್ಷ ಯಮನಪ್ಪ ವಡ್ಡರ ಆಗಮಿಸುವರು ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ಅರ್ಜುನ ಆಸ್ಪತ್ರೆ ಸಿಬ್ಬಂದಿ ಇದ್ದರು.

Latest News

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಘತ್ತರಗಿ ಭಾಗ್ಯವಂತಿಯ 23ನೇ ವರ್ಷದ ಪಾದಯಾತ್ರೆ ಆರಂಭ

ಮಾರನಾಳ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮಾರನಾಳದಿಂದ ಶ್ರೀ ಘತ್ತರಗಿ ಭಾಗ್ಯವಂತಿಯವರೆಗೆ ಪಾದಯಾತ್ರೆಯನ್ನು

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ ಕಿಟ್ (ಗೌಂಡಿ, ಎಲೆಕ್ಟ್ರಿಷಿಯನ್, ಕಾರಪೇಂಟರ್ ವೆಲ್ಡಿಂಗ್, ಪ್ಲಂಬರ್, ಪೇಂಟರ್) ವಿತರಿಸಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಯಿಂದ ನೋಂದಣಿಯಾದ ಫಲಾನುಭವಿಗಳಿಗೆ ಸುರಕ್ಷಾ ಕಿಟ್ ವಿತರಿಸಲಾಗುವುದು. ಫಲಾನುಭವಿಗಳು ಚಾಲ್ತಿಯಲ್ಲಿರುವ ಕಾರ್ಮಿಕ ಗುರುತಿನ ಚೀಟಿ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಪುಸ್ತಕ, ಫಲಾನುಭವಿಯ ಎರಡು ಭಾವಚಿತ್ರ ಹಾಗೂ ದ್ವಿಪ್ರತಿಗಳಲ್ಲಿ ಅ.24ರೊಳಗೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ

ಬೆಂಗಳೂರು: ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾದ ಅಶೋಕ್‌ ಬಿ ಹಿಂಚಿಗೇರಿ ಅವರೊಂದಿಗೆ, ಚರ್ಚೆ ನಡೆಸಿದರು. ಸಚಿವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಈ ಭೇಟಿ ಮಾಡಲಾಯಿತು. ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ನೀತಿಯನ್ವಯ ಖಾಸಗಿ ಮತ್ತು ಸರ್ಕಾರ ವಲಯಗಳಲ್ಲಿ ದುಡಿಯುವ ಉದ್ಯೋಗಸ್ಥ ಮಹಿಳೆಯರು ತಿಂಗಳಲ್ಲಿ ಒಂದು ದಿನ