Free training for Asha workers: Leave superstitions about diseases - Dr. Parasurama Vadara

ಆಶಾ ಕಾರ್ಯಕರ್ತೆಯರಿಗೆ ಉಚಿತ ತರಬೇತಿ :ಕಾಯಿಲೆಗಳ ಬಗ್ಗೆ ಹೊಂದಿರುವ ಮೂಢನಂಬಿಕೆ ತೊರೆಯಿರಿ – ಡಾ. ಪರಶುರಾಮ ವಡ್ಡರ

ಆಶಾ ಕಾರ್ಯಕರ್ತೆಯರಿಗೆ ಉಚಿತ ತರಬೇತಿ :ಕಾಯಿಲೆಗಳ ಬಗ್ಗೆ ಹೊಂದಿರುವ ಮೂಢನಂಬಿಕೆ ತೊರೆಯಿರಿ – ಡಾ. ಪರಶುರಾಮ ವಡ್ಡರ

ಮುದ್ದೇಬಿಹಾಳ : ಕಾಮಣಿ(ಕಾಮಾಲೆ) ರೋಗದ ಬಗ್ಗೆ ಗ್ರಾಮೀಣ ಪ್ರದೇಶದ ಜನರು ಹೊಂದಿರುವ ಮೂಢನಂಬಿಕೆಯನ್ನು ಬಿಟ್ಟು ವೈದ್ಯಕೀಯ ಉಪಚಾರವನ್ನು ಪಡೆದುಕೊಂಡರೆ ರೋಗಪೀಡಿತ ಮಕ್ಕಳನ್ನು ಬೇಗನೇ ಆರೋಗ್ಯವಂತರನ್ನಾಗಿಸಲು ಸಾಧ್ಯವಿದೆ ಎಂದು ಚಿಕ್ಕಮಕ್ಕಳ ವೈದ್ಯ ಡಾ.ಪರಶುರಾಮ ವಡ್ಡರ ಹೇಳಿದರು.

ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಮದರಿಯ ಚೈತ್ರಾ ಆರೋಗ್ಯ ಮತ್ತು ಶೈಕ್ಷಣಿಕ ಸೇವಾ ಟ್ರಸ್ಟ್ ನಿಂದ ಆಯೋಜಿಸಿದ್ದ ಆಶಾ ಕಾರ್ಯಕರ್ತೆಯರಿಗೆ ಉಚಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಹೈಪಟೈಸಟ್ ಕಾಯಿಲೆ ಬಂದಾಗ ತಕ್ಷಣ ವೈದ್ಯರಲ್ಲಿ ತೋರಿಸಬೇಕು. ಗಿಡಮೂಲಿಕೆಯಿಂದ ರೋಗ ವಾಸಿಯಾಗುತ್ತದೆ ಎಂಬ ನಂಬಿಕೆಯನ್ನು ನಾವು ಅಲ್ಲಗಳೆಯುವುದಿಲ್ಲ. ಆದರೆ, ತ್ವರಿತವಾಗಿ ಮಗುವಿನ ಜೀವಕ್ಕೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕಾದರೆ ವೈದ್ಯರಲ್ಲಿ ತೋರಿಸುವುದು ಉತ್ತಮ ಎಂದು ಸಲಹೆ ನೀಡಿದರು.

ತಾಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ ಮಾತನಾಡಿ, ನಮ್ಮ ಭಾಗದಲ್ಲಿ ಚಿಕ್ಕಮಕ್ಕಳು ಅನಾರೋಗ್ಯಕ್ಕೀಡಾದರೆ ವಿಜಯಪುರ ಇಲ್ಲವೇ ಬಾಗಲಕೋಟೆಗೆ ತೆರಳಬೇಕಿತ್ತು. ಆ ಸಮಸ್ಯೆಯನ್ನು ನೀಗಿಸಿದ ಕೆಲಸವನ್ನು ಯಮನಪ್ಪ ವಡ್ಡರ ಕುಟುಂಬದವರು ಮಾಡಿದ್ದಾರೆ. ಉತ್ಸಾಹಿ ವೈದ್ಯ ಡಾ. ಪರಶುರಾಮ ಅವರು ಈ ಭಾಗದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ, ಆಶಾ ಕಾರ್ಯಕರ್ತೆಯರ ಕಾರ್ಯ ಮಹತ್ವದ್ದಾಗಿದ್ದು ತಾಯಂದಿರ ಆರೈಕೆ, ಪೋಷಣೆ ಕುರಿತಾದ ಕಾರ್ಯಗಳಿಂದ ಮನೆ ಮಾತಾಗಿದ್ದಾರೆ. ಅವರಿಗೆ ಸರ್ಕಾರದಿಂದ ಇನ್ನಷ್ಟು ಸ್ಪಂದನೆ ಅಗತ್ಯವಾಗಿದೆ ಎಂದರು.

ವೈದ್ಯೆ ಡಾ. ನಿಸರ್ಗ ಕೊಟಮುಚಗಿ, ದಲಿತ ಮುಖಂಡ ಹರೀಶ ನಾಟೀಕಾರ, ಬಿಜೆಪಿ ಮುಖಂಡ ಪ್ರಭು ಕಡಿ, ಕುಮಾರ ವಡ್ಡರ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಯಮನಪ್ಪ ವಡ್ಡರ ಅಧ್ಯಕ್ಷತೆ ವಹಿಸಿದ್ದರು. ಭೋವಿ ವಡ್ಡರ ಸಮಾಜದ ಮುಖಂಡ ಪರಶುರಾಮ ನಾಲತವಾಡ ಆಸ್ಪತ್ರೆಯ ಸಿಬ್ಬಂದಿ ಇದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ