ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ.
ಎರಡು ದಿನಗಳ ಹಿಂದೆ ಸಾಗರ ತಾಲೂಕಿನ ಮೂರಕೈ ಗ್ರಾಮದ ಶ್ವೇತಾ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಜರುಗಿತ್ತು. ನಿಶ್ಚಿತಾರ್ಥ ಮುಗಿಸಿಕೊಂಡು ಕುಳಗೇರಿ ಕ್ರಾಸ್ ಗೆ ಕಾರಿನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದೆ. ಧಾರವಾಡ ಜಿಲ್ಲೆಯ ಕುಸಗಲ್ ಬಳಿಯ ಇಂಗಳಹಳ್ಳಿ ಕ್ರಾಸ್ ನಲ್ಲಿ ಅಫಘಾತ ಸಂಭವಿಸಿದೆ. ಟ್ರಕ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿ, ಕಾರ್ ನಲ್ಲಿದ್ದ ಐವರು ಮೃತಪಟ್ಟಿದ್ದಾರೆ.
ನಿಶ್ಚಿತಾರ್ಥ ಮುಗಿಸಿಕೊಂಡು ಹಸೆಮಣೆ ಏರಬೇಕಾಗಿದ್ದ ಯುವತಿ ಶ್ವೇತಾ (29), ಅಂಜಲಿ (26), ವಿಠ್ಠಲ (55), ಶಶಿಕಲಾ (40) ಮತ್ತು ಸುದೀಪ್ (26) ಎಂದು ಗುರುತಿಸಲಾಗಿದೆ. ಈ ಕುಟುಂಬ ಕಳೆದ 40 ವರ್ಷಗಳಿಂದ ಕುಳಗೇರಿ ಕ್ರಾಸ್ ನಲ್ಲಿ ಹೊಟೇಲ್ ಉಧ್ಯಮ ನಡೆಸುತ್ತಿದ್ದರು.
ನಿಶ್ಚಿತಾರ್ಥ ಮುಗಿಸಿಕೊಂಡು ಕುಳಗೇರಿ ಕ್ರಾಸ್ ಗೆ ಮರಳುವಾಗ ಜವರಾಯ ಅಟ್ಟಹಾಸ ಮೆರೆದಿದ್ದು, ಐವರು ಸಾವನಪ್ಪಿದ್ದಾರೆ.