ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ.

ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97 ಅಂಕ ಸೇರಿ ಒಟ್ಟು ಸೃಷ್ಟಿಗೆ 621 ಅಂಕ ಬಂದಿದ್ದವು.ಅಷ್ಟಕ್ಕೆ ಸಮಾಧಾನಗೊಳ್ಳದೇ ಪಾಲಕರು,ಶಾಲೆಯ ಶಿಕ್ಷಕರ ಮಾರ್ಗದರ್ಶನದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ವಿಜ್ಞಾನ ವಿಷಯದಲ್ಲಿ ಮೂರು, ಇಂಗ್ಲಿಷ್ ವಿಷಯದಲ್ಲಿ ಒಂದು ಅಂಕ ಸೇರಿ ಒಟ್ಟು 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾಳೆ.

ನಾಲತವಾಡದ ವೈದ್ಯ ದಂಪತಿ ಸಿದ್ದನಗೌಡ ಪಾಟೀಲರ ಪುತ್ರಿಯಾಗಿರುವ ಸೃಷ್ಟಿ ಸಾಧನೆ ಇಡೀ ಜಿಲ್ಲೆಯ ಹೆಸರನ್ನು ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಮಿಂಚುವAತೆ ಮಾಡಿದೆ.

ಮರುಮೌಲ್ಯಪಾಪನದಲ್ಲಿ ಪೂರ್ಣ ಅಂಕ ಬಂದ ಸುದ್ದಿ ತಿಳಿಯುತ್ತಲೇ ಸುದ್ದಿಗಾರರೊಂದಿಗೆ ಮಾತನಾಡಿದ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ, ನಮ್ಮ ಸಂಸ್ಥೆಯಿoದ ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ sಸೌಜನ್ಯ ಕಂದಕೂರ ನಂತರ ಎರಡನೇ ವಿದ್ಯಾರ್ಥಿನಿ ಸೃಷ್ಟಿ ಪಾಟೀಲ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿರುವುದು ಖುಷಿ ತಂದಿದೆ.ಮರುಮೌಲ್ಯಮಾಪನದಲ್ಲಿ ನಮಗೆ ಪೂರ್ಣ ಅಂಕ ಬರುವ ವಿಶ್ವಾಸ ಇತ್ತು.ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿಯಿAದ ಅಭಿನಂದಿಸುತ್ತೇವೆ ಎಂದು ತಿಳಿಸಿದರು.

ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ,ಕಾರ್ಯದರ್ಶಿ ವಿಜಯಕುಮಾರ ಪಾಟೀಲ,ಮಾರ್ಗದರ್ಶಕರಾದ ಎನ್.ಎ.ಬಿರಾಜದಾರ,ನಿರ್ದೇಶಕ ದರ್ಶನಗೌಡ ಪಾಟೀಲ,ಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ,ರೇವಣಸಿದ್ದ ಚಲವಾದಿ(ಮುರಾಳ) ಮತ್ತಿತರರು ಅಭಿನಂದಿಸಿದ್ದಾರೆ.

Latest News

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ:         ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ತಂಗಡಗಿ ಕೃಷ್ಣಾ ನದಿ ಸೇತುವೆ ಬಳಿಕ ಘಟನೆ ಬೆಳಕಿಗೆ: ತನ್ನ ಮದುವೆಗೆ ವಿರೋಧಿಸಿದ ಪ್ರಿಯತಮೆಯ ಕೊಲೆಗೈದ ಪ್ರಿಯಕರ

ಮುದ್ದೇಬಿಹಾಳ : ತನ್ನೊಂದಿಗೆ ಅನೈತಿಕ ಸಂಬoಧವಿಟ್ಟುಕೊoಡಿದ್ದ ಮಹಿಳೆ ತನ್ನ ಮದುವೆಗೆ ವಿರೋಧಿಸಿದೆಳೆನ್ನುವ ಕಾರಣಕ್ಕಾಗಿ ಆಕೆಯನ್ನು

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ಸಿ.ಜಿ.ನಾಗರಾಳ ಶರಣ ಸಾಹಿತ್ಯ ಪರಿಷತ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆ

ಮುದ್ದೇಬಿಹಾಳ : ತಾಲೂಕಿನ ಶರಣ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮಹಿಳೆ ಕಳೆದುಕೊಂಡ ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ತೋರಿದ ಯುವಕರು

ಮುದ್ದೇಬಿಹಾಳ : ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುದ್ದೇಬಿಹಾಳ ನಗರದಿಂದ ಹಿರೇಮುರಾಳ ಗ್ರಾಮಕ್ಕೆ ತೆರಳುತ್ತಿದ್ದ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ ಗುರುಸ್ಪಂದನ ಶಿಕ್ಷಕರ ಬಳಗದ ಬಿ.ಎಚ್.ಮುದ್ನೂರ(312),ಎನ್.ಎಸ್.ತುರಡಗಿ(282),ಬಿ.ಎಸ್.ಹೊಳಿ(222),ಶಾಂತು ಬಿರಾದಾರ(195),ಆಯ್.ಎ.ಹಿರೇಮಠ(181),ಬಿ.ಎಚ್.ಭಗವತಿ(180),ರೇಣುಕಾ ಹಿರೇಮಠ(237),ಶೈಲಾ ಗೊಂಗಡಿ(209) ಆಯ್ಕೆಯಾಗಿದ್ದು ಸ್ವಾಭಿಮಾನ ಶಿಕ್ಷಕರ ಬಳಗದಿಂದ ಬಿ.ಎಸ್.ಶೇಖಣ್ಣವರ(241),ಎಸ್.ಟಿ.ಪಾಟೀಲ(205),ಎಸ್.ಆರ್.ರಾಠೋಡ(206) ಆಯ್ಕೆಯಾದರು.ರಾಧಾಕೃಷ್ಣನ್ ಬಳಗದಿಂದ ಸಿದ್ದನಗೌಡ ಬಿಜ್ಜೂರ(179) ಆಯ್ಕೆಯಾಗಿದ್ದಾರೆ. ಒಟ್ಟು 563 ಮತದಾರರಲ್ಲಿ 521 ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ.9 ಪುರುಷ,3 ಮಹಿಳಾ ಸ್ಥಾನಗಳಿಗೆ 27 ಪುರುಷರ,8 ಮಹಿಳಾ ಶಿಕ್ಷಕರು ಸ್ಪರ್ಧೆಯಲ್ಲಿದ್ದರು ಎಂದು ಚುನಾವಣಾಧಿಕಾರಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್.ಕವಡಿಮಟ್ಟಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ ನಿರ್ಮಿಸಲು ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಸಂಬoಧಿಸಿದoತೆ ಎರಡು ದಶಕಗಳು ಕಳೆದರೂ ಈವರೆಗೂ ಬಾಧಿತ ರೈತರಿಗೆ ಯಾವುದೇ ರೀತಿಯಿಂದ ಪರಿಹಾರ ದೊರೆತಿಲ್ಲ.ಅಧಿಕಾರಿಗಳು ಪರಿಹಾರ ದೊರಕಿಸಿಕೊಡಬೇಕು ಎಂದು ತಾಲ್ಲೂಕಿನ ಮದರಿ ಮತ್ತು ಗರಸಂಗಿ ಗ್ರಾಮದ ರೈತರು ಕೆಬಿಜೆಎನ್‌ಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಕೆಬಿಜೆಎನ್‌ಎಲ್ ಎಎಲ್‌ಬಿಸಿ ವಿಭಾಗ-3 ಕಚೇರಿಗೆ ಆಗಮಿಸಿದ್ದ ರೈತರು,