Gali Janardhan Reddy's MLA canceled

ಗಾಲಿ ಜನಾರ್ಧನ್ ರೆಡ್ಡಿ ಶಾಸಕತ್ವ ರದ್ದು

ಗಾಲಿ ಜನಾರ್ಧನ್ ರೆಡ್ಡಿ ಶಾಸಕತ್ವ ರದ್ದು

ಬೆಂಗಳೂರು: ಗಂಗಾವತಿ ಶಾಸಕರಾದ ಗಾಲಿ ಜನಾರ್ಧನ್ ರೆಡ್ಡಿ ಅವರ ಶಾಸಕತ್ವವನ್ನು ರದ್ದುಗೊಳಿಸಲಾಗಿದೆ. ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್​​ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ.

ಏಳು ವರ್ಷ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹರಗೊಂಡಿದ್ದಾರೆ. ಈ ಮೂಲಕ ಸಿಬಿಐ ಸ್ಪೆಷಲ್ ಕೋರ್ಟ್ ನಿಂದ ಶಿಕ್ಷೆಗೆ ಒಳಗಾಗಿರುವಂತ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಶಾಸಕ ಸ್ಥಾನದಿಂದ ಜನಾರ್ಧನ ರೆಡ್ಡಿ ಮುಂದಿನ 6 ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಹಾಗೂ ಸಂಸದ 2 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Latest News

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿರುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ ಎಂದು ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಗ್ರಹಿಸಿದ್ದಾರೆ. ಪಟ್ಟಣದ ಮಾರುತಿ ನಗರದಲ್ಲಿರುವ ಫಾರ್ಮ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಸನ್ಮಾನಿಸಿದರು. ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯ ಉಪಾದ್ಯಕ್ಷ ಗೋಪಾಲ ಹೂಗಾರ, ಸಿಆರ್‌ಪಿ ಜಿ.ಎಚ್.ಚವ್ಹಾಣ,ಸಂತ ಕನಕದಾಸ ಶಾಲೆಯ ಮುಖ್ಯಗುರು ಎಮ್.ಎನ್.ಯರಝರಿ, ಆರ್.ಎಸ್.ವಾಲೀಕಾರ,ಆರ್.ವಾಯ್.ಪಾಟೀಲ, ,ಎಮ್.ಸಿ.ಕಬಾಡೆ, ಶಂಕರ ಭಾರತಿ ಶಾಲೆಯ ಎಮ್.ಎಮ್.ಮಸ್ಕಿ, ಜ್ಞಾನ ಗಂಗೋತ್ರಿ ಶಾಲೆಯ ಎಂ.ಬಿ.ನದಾಫ, ತಂಗಡಗಿಯ ಚರಲಿಂಗೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಎಲ್.ಮಾದರ , ಸಂಜೀವ ಜಾಲವಾದಿ ಉಪಸ್ಥಿತರಿದ್ದರು.