Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಇರುವ ಕಾರಣದಿಂದ ಗುತ್ತಿಗೆದಾರರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ ಎಂದು ಗುತ್ತಿಗೆದಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಸಭಾಭವನದಲ್ಲಿ ಭಾನುವಾರ ತಾಲ್ಲೂಕು ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿ 30 ಸಾವಿರ ಕೋಟಿಗೂ ಅಧಿಕ ಬಿಲ್ ಪಾವತಿಸುವುದು ಬಾಕಿ ಉಳಿಸಿಕೊಂಡಿರುವುದರಿAದ ಎಲ್ಲ ಹಂತದ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಂ.ಎಸ್.ಕೊಪ್ಪ ಅವರು ಆರಂಭಿಸಿರುವ ಶಾಲೆ ಬಡವರ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮುದ್ದೇಬಿಹಾಳ ತಾಲ್ಲೂಕು ಇಂದು ಶಿಕ್ಷಣಕ್ಕೆ ಒಳ್ಳೆಯ ಹೆಸರು ಮಾಡಿದೆ.ಬಿಎಎಸ್ ಶಾಲೆ, ಅಂಜುಮನ್ ಸಂಸ್ಥೆ,ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆ,ನಾಗರಬೆಟ್ಟ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ