Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ