Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ