Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್