Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ