Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಕೊಡಮಾಡುವ ಸಾಧಕಿ ಪ್ರಶಸ್ತಿಗೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾವಿತ್ರಿ ವಣಕ್ಯಾಳ ಅವರು ಸನ್ 2026 ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜಯಪುರ ಜಿಲ್ಲಾಡಳಿತ ವತಿಯಿಂದ ಪ್ರತಿ ವರ್ಷ ನೀಡುವ ಈ ಪ್ರಶಸ್ತಿಗೆ ಮುದ್ದೇಬಿಹಾಳ ತಾಲೂಕಿನಿಂದ ಸಾವಿತ್ರಿ ವಣಕ್ಯಾಳ ಅವರನ್ನು ಶಿಸ್ತುಬದ್ಧ ಕರ್ತವ್ಯ ನಿರ್ವಹಣೆಯಿಂದ ಆಯ್ಕೆ ಮಾಡಲಾಗಿದೆ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರೈತರಿಗೆ ರಿಯಾಯಿತಿ ದರದಲ್ಲಿ ಜೆಸಿಬಿ ಸೇವೆ, ರೈತರ ಆತ್ಮಹತ್ಯೆ,ಅಪಘಾತದ ಪ್ರಕರಣಗಳಲ್ಲಿ ನೊಂದವರಿಗೆ ಫೌಂಡೇಶನ್‌ದಿoದ ಕಾರ್ಯ ಮಾಡುತ್ತಾ ಬಂದಿದ್ದೇವೆ ಎಂದರು. ರಂಜಾನ್ ಮಾಸದ ನಿಮಿತ್ಯ ಮುಸ್ಲಿಂ ಬಾಂಧವರಿಗೆ ಇಫ್ತಾರಕೂಟಗಳನ್ನು ಆಯೋಜಿಸಿದ್ದು ಮಾ.9 ರಂದು ಮುದ್ದೇಬಿಹಾಳದ