Ganesha installation at midnight in Vijayapur Corporation, police rushed to the place

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ, ಸ್ಥಳಕ್ಕೆ ಪೊಲೀಸರು ದೌಡು

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಮಧ್ಯರಾತ್ರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಹೌದು, ಪಾಲಿಕೆ ಸದಸ್ಯರಾದ ರಾಹುಲ್ ಜಾಧವ್, ಕಿರಣ್ ಪಾಟೀಲ್, ಶಿವರುದ್ರ ಬಾಗಲಕೋಟೆ, ಮಲ್ಲಿಕಾರ್ಜುನ ಗಡಗಿ, ರಾಜಶೇಖರ್ ಮಗೀಮಠ, ಬಂದೇನವಾಜ್ ಬೀಳಗಿ, ಜಮೀರ್ ಬಾಂಗಿ, ಜವಾಹರ ಗೋಸಾವಿ, ಮಾಜಿ ಸದಸ್ಯ ರಾಜೇಶ್​ರಿಂದ ವಿಜಯಪುರ ಪಾಲಿಕೆಯಲ್ಲಿ ಗಣೇಶ ಮೂರ್ತಿಯನ್ನು ‌ಸ್ಥಾಪಿಸಿದ್ದಾರೆ‌.

ಪ್ರತಿ ವರ್ಷ ಪಾಲಿಕೆಯಲ್ಲಿ‌ ಗಣೇಶ ಚತುರ್ಥಿಯಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗುತ್ತಿತ್ತು. ಹಿಂದಿನ ಎಲ್ಲಾ ವರ್ಷಗಳಲ್ಲಿಯೂ ಪಾಲಿಕೆಯ ಎಲ್ಲ ಸಿಬ್ಬಂದಿ ಒಂದು ದಿನದ ವೇತನ ಗಣೇಶ ಚತುರ್ಥಿಯ ಹಬ್ಬಕ್ಕೆ ನೀಡಿ, ಹಬ್ಬದ ವೇಳೆ ಗಣಪನ‌ ಮೂರ್ತಿ ಪ್ರತಿಷ್ಠಾಪಿಸಿ, ಸತ್ಯ ನಾರಾಯಣ ಪೂಜೆ ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡುತ್ತಿದ್ದರು.

ಆದರೆ, ಈ ಬಾರಿ ಗಣಪತಿ ಹಬ್ಬದ ಆಚರಣೆಗೆ ಪಾಲಿಕೆ ಮುಂದಾಗಿಲ್ಲ. ಆದ್ದರಿಂದ ರಾತ್ರೋರಾತ್ರಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇನ್ನು, ಈ‌ ಹಿಂದೆ ಪಾಲಿಕೆಯ ನೆಲ‌‌ ಮಹಡಿಯ ಪ್ರವೇಶ ದ್ವಾರದ ಎದುರು ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ನಂತರ, ಕಳೆದ ಜುಲೈನಲ್ಲಿ ವಿವಿಧ ದಲಿತ ಪರ ಸಂಘಟನೆಗಳು ಅಂಬೇಡ್ಕರ್ ಮೂರ್ತಿಯನ್ನು ಇಟ್ಟಿದ್ದರು. ಈ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆ ವೇಳೆ ಅಂಬೇಡ್ಕರ್ ಹಾಗೂ ಇತರೆ ಮಹಾನ್ ನಾಯಕರ ಮೂರ್ತಿ ಪಾಲಿಕೆಯ ಆವರಣದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ ಎಂದು ಆಯುಕ್ತರು ಭರವಸೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ BIG SHOCK!

ಈಗ ಅಂಬೇಡ್ಕರ್ ಮೂರ್ತಿ ಸ್ಥಾಪಿಸಿದ ವಿಚಾರಕ್ಕೂ ಗಣಪನ ಹಬ್ಬದ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲಾ. ಚೌತಿಯ ದಿನ ಗಣೇಶನ ಮೂರ್ತಿ ಪ್ರತಿಷ್ಟಾಪಿಸಿದ ಕಾರಣ ಗಣಪನ ಮೂರ್ತಿಯನ್ನು ಇಟ್ಟಿದ್ದೇವೆಂದು ಪಾಲಿಕೆಯ ಹಾಲಿ‌ ಮಾಜಿ ಸದಸ್ಯರು ತಿಳಿಸಿದ್ದಾರೆ.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು