ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ ಆಡಳಿತ ಮಂಡಳಿಯವರು,ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಎರಡು ಅಂಕಗಳು ದೊರೆತಿದ್ದು 625ಕ್ಕೆ ಪೂರ್ಣ ಅಂಕದೊOದಿಗೆ ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾಳೆ.
ಕನ್ನಡ 125,ಗಣಿತ 100,ಹಿಂದಿ 100, ಸಮಾಜ ವಿಜ್ಞಾನ 100,ಇಂಗ್ಲಿಷ್ ಹಾಗೂ ವಿಜ್ಞಾನಕ್ಕೆ ತಲಾ 99 ಅಂಕಗಳನ್ನು ಪಡೆದುಕೊಂಡಿದ್ದಳು.
ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ಹಾಗೂ ವಿಜ್ಞಾನಕ್ಕೆ ತಲಾ ಒಂದು ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾಳೆ.
ಮರುಮೌಲ್ಯಮಾಪನದಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿದ್ದಂತೆ ಶಾಲೆಯ ಅಧ್ಯಕ್ಷ ನಾನಾಗೌಡ ನಡುವಿನಮನಿ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಾಗ ನಮ್ಮ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಳ್ಳುತ್ತಾಳೆ ಎಂಬ ನಿರೀಕ್ಷೆ ಇತ್ತು.ಆದರೆ 623 ಅಂಕ ಪಡೆದುಕೊಂಡಿದ್ದು ಗಮನಕ್ಕೆ ಬಂದಾಗ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದೇವು.ಈಗ 625 ಅಂಕಗಳೊOದಿಗೆ ಗಂಗಮ್ಮ ಕೋಳೂರು ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದು ನಮ್ಮ ಶಾಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಬೆಳಗಿಸಿದ್ದಾಳೆ ಎಂದು ಸಂತಸ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು,ಶಾಲೆಯ ಮುಖ್ಯಗುರುಗಳು ಅಭಿನಂದಿಸಿದ್ದಾರೆ.
SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ್ಯಾಂಕ್
SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ್ಯಾಂಕ್
Latest News
S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ
ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್ಓಗಳು,ಮೇಲ್ವಿಚಾರಕರು,ಬಿಎಲ್ಎಗಳ ಹಾಗೂ ಮತದಾರರ
ಎನ್ರೋಲ್ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ
32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು
ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ
ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ
ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ
ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ
ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ
ಮುದ್ದೇಬಿಹಾಳ : ರೆಗ್ಯೂಲೆಟರ್ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ







