SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ ಆಡಳಿತ ಮಂಡಳಿಯವರು,ಪಾಲಕರು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ಮತ್ತೆ ಎರಡು ಅಂಕಗಳು ದೊರೆತಿದ್ದು 625ಕ್ಕೆ ಪೂರ್ಣ ಅಂಕದೊOದಿಗೆ ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾಳೆ.
ಕನ್ನಡ 125,ಗಣಿತ 100,ಹಿಂದಿ 100, ಸಮಾಜ ವಿಜ್ಞಾನ 100,ಇಂಗ್ಲಿಷ್ ಹಾಗೂ ವಿಜ್ಞಾನಕ್ಕೆ ತಲಾ 99 ಅಂಕಗಳನ್ನು ಪಡೆದುಕೊಂಡಿದ್ದಳು.
ಮರು ಮೌಲ್ಯಮಾಪನದಲ್ಲಿ ಇಂಗ್ಲಿಷ್ ಹಾಗೂ ವಿಜ್ಞಾನಕ್ಕೆ ತಲಾ ಒಂದು ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾಳೆ.
ಮರುಮೌಲ್ಯಮಾಪನದಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿದ್ದಂತೆ ಶಾಲೆಯ ಅಧ್ಯಕ್ಷ ನಾನಾಗೌಡ ನಡುವಿನಮನಿ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಾಗ ನಮ್ಮ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಳ್ಳುತ್ತಾಳೆ ಎಂಬ ನಿರೀಕ್ಷೆ ಇತ್ತು.ಆದರೆ 623 ಅಂಕ ಪಡೆದುಕೊಂಡಿದ್ದು ಗಮನಕ್ಕೆ ಬಂದಾಗ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದೇವು.ಈಗ 625 ಅಂಕಗಳೊOದಿಗೆ ಗಂಗಮ್ಮ ಕೋಳೂರು ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದು ನಮ್ಮ ಶಾಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಬೆಳಗಿಸಿದ್ದಾಳೆ ಎಂದು ಸಂತಸ ವ್ಯಕ್ತಪಡಿಸಿದರು.
ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು,ಶಾಲೆಯ ಮುಖ್ಯಗುರುಗಳು ಅಭಿನಂದಿಸಿದ್ದಾರೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ