Genius Student Award Exam in Nagarabetta : Educational institutions should not be institutions that sell education- Gennur

ನಾಗರಬೆಟ್ಟದಲ್ಲಿ ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ : ವಿದ್ಯಾಸಂಸ್ಥೆಗಳು ವಿದ್ಯೆಯನ್ನು ಮಾರುವ ಸಂಸ್ಥೆಗಳಾಗದಿರಲಿ- ಗೆಣ್ಣೂರ

ನಾಗರಬೆಟ್ಟದಲ್ಲಿ ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ : ವಿದ್ಯಾಸಂಸ್ಥೆಗಳು ವಿದ್ಯೆಯನ್ನು ಮಾರುವ ಸಂಸ್ಥೆಗಳಾಗದಿರಲಿ- ಗೆಣ್ಣೂರ

ಮುದ್ದೇಬಿಹಾಳ : ವಿದ್ಯಾಸಂಸ್ಥೆಗಳು ವಿದ್ಯೆಯನ್ನು ಮಾರುವ ಸಂಸ್ಥೆಗಳಾರಬಾರದು. ಅದನ್ನು ನೀಡುವ ಸಂಸ್ಥೆಗಳಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

ತಾಲ್ಲೂಕು ನಾಗರಬೆಟ್ಟದಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಜೀನಿಯಸ್ ಸ್ಟೂಡೆಂಟ್ ಆವಾರ್ಡ್ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ
ಯಾವುದೇ ತಂದೆ ತಾಯಿಗಳು ತಮ್ಮ ಮಕ್ಕಳು ದಡ್ಡರಿರುವುದಿಲ್ಲವೆಂಬ ಭಾವನೆ ಇರುತ್ತದೆ. ಮನಸ್ಸು ಸದೃಢವಾಗಿದ್ದವರು ಏನೂ ಬೇಕಾದರೂ ಆಗಬಹುದು. ಅನವಶ್ಯಕ ವಿಚಾರಗಳಿಗೆ ತಲೆಕೆಡಿಸಿಕೊಳ್ಳುತ್ತಾ ಕಾಲಹರಣ ಮಾಡಬಾರದು. ಒಳ್ಳೆಯವರಾಗಲು ಬಹಳ ಸಮಯ ಬೇಕು. ಆದರೆ ಕೆಟ್ಟವರಾಗಲು ಒಂದು ಕ್ಷಣ ಸಾಕು. ಕೆಎಎಸ್, ಐಎಎಸ್ ಅಧಿಕಾರಿಗಳಾಗಿ ಸಮಾಜದ ಸೇವೆ ಸಲ್ಲಿಸಿ. ಸಿನೇಮಾ ನಟ, ನಟಿಯರೆಲ್ಲಾ ನಿಮ್ಮ ಹಿರೋಗಳಲ್ಲ. ತಂದೆ ತಾಯಿ, ಶಿಕ್ಷಕರು ನಿಮ್ಮ ಹಿರೋಗಳು ಎಂದು ಹೇಳಿದರು.

ಮಾದರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಸ್. ಎಲ್. ಪಾಟೀಲ್ ಮಾತನಾಡಿ, ಉನ್ನತ ವಿದ್ಯೆಯನ್ನು ಪಡೆದುಕೊಂಡು ವಿದೇಶದಲ್ಲಿ ಉದ್ಯೋಗದಲ್ಲಿರುವ ಮಕ್ಕಳು ತಮ್ಮ ತಂದೆ ತಾಯಿ ನಿಧನರಾದರೆ ಅವರ ಶವಸಂಸ್ಕಾರಕ್ಕೂ ಬಾರದಷ್ಟು ಸಂವೇದನೆ ಕಳೆದುಕೊಳ್ಳುತ್ತಿದ್ದಾರೆ. ಮಕ್ಕಳಲ್ಲಿ ಕುಟುಂಬದಲ್ಲಿನ ಭಾವನಾತ್ಮಕ ಸಂಸ್ಕೃತಿಯನ್ನು ಮರುಸ್ಥಾಪಿಸಬೇಕಾದ ಅಗತ್ಯತೆ ಇದೆ ಎಂದರು.

ವಿಜ್ಞಾನಿ ಚಂದ್ರಶೇಖರ ಬಿರಾದಾರ, ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ, ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ, ಬಿಇಒ ಬಿ. ಎಸ್. ಸಾವಳಗಿ, ಫೌಂಡೇಶನ್ ಫಾರ್ ಎಕ್ಸಲೆನ್ಸ್ ಪ್ರತಿನಿಧಿ ಸಂಗಮೇಶ ಹೂಗಾರ ಮಾತನಾಡಿದರು. ಡಾ. ನಿಸರ್ಗ ಎನ್. ಕೆ, ಸಂಸ್ಥೆಯ ನಿರ್ದೇಶಕ ದರ್ಶನಗೌಡ ಪಾಟೀಲ, ನಾಲತವಾಡ ವೀರೇಶ್ವರ ಪಪೂ ಕಾಲೇಜಿನ ಪ್ರಾಚಾರ್ಯ ಡಿ. ಆರ್. ಮಳಖೇಡ, ಇಸ್ಮಾಯಿಲ್ ಮನಿಯಾರ, ರೇವಣಸಿದ್ದ ಚಲವಾದಿ,ರಾಜಶೇಖರ ಹಿರೇಮಠ ಇದ್ದರು.

ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿಂದ ಆಯೋಜಿಸಿದ್ದ ಪರೀಕ್ಷೆಯಲ್ಲಿ ಹುಕ್ಕೇರಿ ಎಸ್. ಕೆ. ಪಬ್ಲಿಕ್ ಸ್ಕೂಲ್‌ನ ಅಶ್ವಿನಿ ಬಡಮಲ್ಲಣ್ಣವರ ಜೀನಿಯಸ್ ಸ್ಟೂಡೆಂಟ್ ಆಗಿ ಹೊರ ಹೊಮ್ಮಿದಳು. ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಯಿತು. ಅಲ್ಲದೇ 2024ರಲ್ಲಿ 172 ಮೆಡಿಕಲ್ ಸೀಟು ಪಡೆದುಕೊಂಡ ವಿದ್ಯಾರ್ಥಿಗಳು, ಪಾಲಕರನ್ನು ಸನ್ಮಾನಿಸಲಾಯಿತು.

ಸ್ಪೂರ್ತಿತುಂಬಿದ ಅಪರ ಜಿಲ್ಲಾಧಿಕಾರಿ ಮಾತು :
ಮೂಲತಃ ದೇವರಗೆಣ್ಣೂರು ಗ್ರಾಮದವರಾದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ತಾವು ತಹಸೀಲ್ದಾರ್ ಹುದ್ದೆಗೆ ಏರುವುದಕ್ಕೆ ಕಾರಣವಾದ ಘಟನೆಯನ್ನು ನೆನೆಸಿಕೊಂಡು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. ನನ್ನ ತಂದೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಸ ಹೊಡೆಯುವ ಪ್ಯೂನ್ ಆಗಿ ಕೆಲಸ ಮಾಡುತ್ತಿದ್ದರು. ಆರು ತಿಂಗಳಿಂದ ಅವರಿಗೆ ಸಂಬಳ ಬಂದಿರಲಿಲ್ಲ. ಆಗ ಸಂಬಂಧಿಸಿದ ತಹಸೀಲ್ದಾರ್ ಸೇವೆಯಲ್ಲಿದ್ದವರನ್ನು ಭೇಟಿಯಾಗಿ ಅವರ ಕಾಲಿಗೆ ಅಡ್ಡಲಾಗಿ ಎರಗಿ ಪಗಾರ ಮಾಡುವಂತೆ ಗೋಗರೆದರು. ಆಗ ನನ್ನ ತಂದೆಯ ವೇಷಭೂಷಣ ನೋಡಿದ ತಹಸೀಲ್ದಾರ್ ಭಿಕ್ಷುಕನ್ಯಾರೋ ಬಂದಿದ್ದಾನೆ ಎಂದು ಕಚೇರಿಯಿಂದ ಹೊರಗೆ ಹಾಕಲು ತಿಳಿಸಿದರು. ಆ ಸನ್ನಿವೇಶವೇ ನನ್ನನ್ನು ತಹಸೀಲ್ದಾರ್ ಆಗಬೇಕು ಎಂಬ ಆಸೆಯನ್ನು ಮೂಡಿಸಿತು. ಅಂದೇ ನಿರ್ಧಾರ ಮಾಡಿ ತಹಸೀಲ್ದಾರ್ ಆಗಬೇಕಾದರೆ ಏನು ಓದಬೇಕು ಎಂದು ಕಷ್ಟಪಟ್ಟು ಓದಿ ತಹಸೀಲ್ದಾರನಾದೆ. ಆದರೆ ತಹಸೀಲ್ದಾರ್ ಖುರ್ಚಿಯಲ್ಲಿ ನಾನು ಕೂಡುವ ಹೊತ್ತಿಗೆ ನನ್ನ ತಂದೆ ಬದುಕಿರಲಿಲ್ಲ ಎಂದು ನೆನೆಸಿಕೊಂಡರು.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು