Genius Student Award Exam in Nagarabetta : Educational institutions should not be institutions that sell education- Gennur

ನಾಗರಬೆಟ್ಟದಲ್ಲಿ ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ : ವಿದ್ಯಾಸಂಸ್ಥೆಗಳು ವಿದ್ಯೆಯನ್ನು ಮಾರುವ ಸಂಸ್ಥೆಗಳಾಗದಿರಲಿ- ಗೆಣ್ಣೂರ

ನಾಗರಬೆಟ್ಟದಲ್ಲಿ ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ : ವಿದ್ಯಾಸಂಸ್ಥೆಗಳು ವಿದ್ಯೆಯನ್ನು ಮಾರುವ ಸಂಸ್ಥೆಗಳಾಗದಿರಲಿ- ಗೆಣ್ಣೂರ

Ad
Ad

ಮುದ್ದೇಬಿಹಾಳ : ವಿದ್ಯಾಸಂಸ್ಥೆಗಳು ವಿದ್ಯೆಯನ್ನು ಮಾರುವ ಸಂಸ್ಥೆಗಳಾರಬಾರದು. ಅದನ್ನು ನೀಡುವ ಸಂಸ್ಥೆಗಳಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

Ad
Ad

ತಾಲ್ಲೂಕು ನಾಗರಬೆಟ್ಟದಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಜೀನಿಯಸ್ ಸ್ಟೂಡೆಂಟ್ ಆವಾರ್ಡ್ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ
ಯಾವುದೇ ತಂದೆ ತಾಯಿಗಳು ತಮ್ಮ ಮಕ್ಕಳು ದಡ್ಡರಿರುವುದಿಲ್ಲವೆಂಬ ಭಾವನೆ ಇರುತ್ತದೆ. ಮನಸ್ಸು ಸದೃಢವಾಗಿದ್ದವರು ಏನೂ ಬೇಕಾದರೂ ಆಗಬಹುದು. ಅನವಶ್ಯಕ ವಿಚಾರಗಳಿಗೆ ತಲೆಕೆಡಿಸಿಕೊಳ್ಳುತ್ತಾ ಕಾಲಹರಣ ಮಾಡಬಾರದು. ಒಳ್ಳೆಯವರಾಗಲು ಬಹಳ ಸಮಯ ಬೇಕು. ಆದರೆ ಕೆಟ್ಟವರಾಗಲು ಒಂದು ಕ್ಷಣ ಸಾಕು. ಕೆಎಎಸ್, ಐಎಎಸ್ ಅಧಿಕಾರಿಗಳಾಗಿ ಸಮಾಜದ ಸೇವೆ ಸಲ್ಲಿಸಿ. ಸಿನೇಮಾ ನಟ, ನಟಿಯರೆಲ್ಲಾ ನಿಮ್ಮ ಹಿರೋಗಳಲ್ಲ. ತಂದೆ ತಾಯಿ, ಶಿಕ್ಷಕರು ನಿಮ್ಮ ಹಿರೋಗಳು ಎಂದು ಹೇಳಿದರು.

ಮಾದರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಸ್. ಎಲ್. ಪಾಟೀಲ್ ಮಾತನಾಡಿ, ಉನ್ನತ ವಿದ್ಯೆಯನ್ನು ಪಡೆದುಕೊಂಡು ವಿದೇಶದಲ್ಲಿ ಉದ್ಯೋಗದಲ್ಲಿರುವ ಮಕ್ಕಳು ತಮ್ಮ ತಂದೆ ತಾಯಿ ನಿಧನರಾದರೆ ಅವರ ಶವಸಂಸ್ಕಾರಕ್ಕೂ ಬಾರದಷ್ಟು ಸಂವೇದನೆ ಕಳೆದುಕೊಳ್ಳುತ್ತಿದ್ದಾರೆ. ಮಕ್ಕಳಲ್ಲಿ ಕುಟುಂಬದಲ್ಲಿನ ಭಾವನಾತ್ಮಕ ಸಂಸ್ಕೃತಿಯನ್ನು ಮರುಸ್ಥಾಪಿಸಬೇಕಾದ ಅಗತ್ಯತೆ ಇದೆ ಎಂದರು.

ವಿಜ್ಞಾನಿ ಚಂದ್ರಶೇಖರ ಬಿರಾದಾರ, ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ, ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ, ಬಿಇಒ ಬಿ. ಎಸ್. ಸಾವಳಗಿ, ಫೌಂಡೇಶನ್ ಫಾರ್ ಎಕ್ಸಲೆನ್ಸ್ ಪ್ರತಿನಿಧಿ ಸಂಗಮೇಶ ಹೂಗಾರ ಮಾತನಾಡಿದರು. ಡಾ. ನಿಸರ್ಗ ಎನ್. ಕೆ, ಸಂಸ್ಥೆಯ ನಿರ್ದೇಶಕ ದರ್ಶನಗೌಡ ಪಾಟೀಲ, ನಾಲತವಾಡ ವೀರೇಶ್ವರ ಪಪೂ ಕಾಲೇಜಿನ ಪ್ರಾಚಾರ್ಯ ಡಿ. ಆರ್. ಮಳಖೇಡ, ಇಸ್ಮಾಯಿಲ್ ಮನಿಯಾರ, ರೇವಣಸಿದ್ದ ಚಲವಾದಿ,ರಾಜಶೇಖರ ಹಿರೇಮಠ ಇದ್ದರು.

ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿಂದ ಆಯೋಜಿಸಿದ್ದ ಪರೀಕ್ಷೆಯಲ್ಲಿ ಹುಕ್ಕೇರಿ ಎಸ್. ಕೆ. ಪಬ್ಲಿಕ್ ಸ್ಕೂಲ್‌ನ ಅಶ್ವಿನಿ ಬಡಮಲ್ಲಣ್ಣವರ ಜೀನಿಯಸ್ ಸ್ಟೂಡೆಂಟ್ ಆಗಿ ಹೊರ ಹೊಮ್ಮಿದಳು. ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಯಿತು. ಅಲ್ಲದೇ 2024ರಲ್ಲಿ 172 ಮೆಡಿಕಲ್ ಸೀಟು ಪಡೆದುಕೊಂಡ ವಿದ್ಯಾರ್ಥಿಗಳು, ಪಾಲಕರನ್ನು ಸನ್ಮಾನಿಸಲಾಯಿತು.

ಸ್ಪೂರ್ತಿತುಂಬಿದ ಅಪರ ಜಿಲ್ಲಾಧಿಕಾರಿ ಮಾತು :
ಮೂಲತಃ ದೇವರಗೆಣ್ಣೂರು ಗ್ರಾಮದವರಾದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ತಾವು ತಹಸೀಲ್ದಾರ್ ಹುದ್ದೆಗೆ ಏರುವುದಕ್ಕೆ ಕಾರಣವಾದ ಘಟನೆಯನ್ನು ನೆನೆಸಿಕೊಂಡು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. ನನ್ನ ತಂದೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಸ ಹೊಡೆಯುವ ಪ್ಯೂನ್ ಆಗಿ ಕೆಲಸ ಮಾಡುತ್ತಿದ್ದರು. ಆರು ತಿಂಗಳಿಂದ ಅವರಿಗೆ ಸಂಬಳ ಬಂದಿರಲಿಲ್ಲ. ಆಗ ಸಂಬಂಧಿಸಿದ ತಹಸೀಲ್ದಾರ್ ಸೇವೆಯಲ್ಲಿದ್ದವರನ್ನು ಭೇಟಿಯಾಗಿ ಅವರ ಕಾಲಿಗೆ ಅಡ್ಡಲಾಗಿ ಎರಗಿ ಪಗಾರ ಮಾಡುವಂತೆ ಗೋಗರೆದರು. ಆಗ ನನ್ನ ತಂದೆಯ ವೇಷಭೂಷಣ ನೋಡಿದ ತಹಸೀಲ್ದಾರ್ ಭಿಕ್ಷುಕನ್ಯಾರೋ ಬಂದಿದ್ದಾನೆ ಎಂದು ಕಚೇರಿಯಿಂದ ಹೊರಗೆ ಹಾಕಲು ತಿಳಿಸಿದರು. ಆ ಸನ್ನಿವೇಶವೇ ನನ್ನನ್ನು ತಹಸೀಲ್ದಾರ್ ಆಗಬೇಕು ಎಂಬ ಆಸೆಯನ್ನು ಮೂಡಿಸಿತು. ಅಂದೇ ನಿರ್ಧಾರ ಮಾಡಿ ತಹಸೀಲ್ದಾರ್ ಆಗಬೇಕಾದರೆ ಏನು ಓದಬೇಕು ಎಂದು ಕಷ್ಟಪಟ್ಟು ಓದಿ ತಹಸೀಲ್ದಾರನಾದೆ. ಆದರೆ ತಹಸೀಲ್ದಾರ್ ಖುರ್ಚಿಯಲ್ಲಿ ನಾನು ಕೂಡುವ ಹೊತ್ತಿಗೆ ನನ್ನ ತಂದೆ ಬದುಕಿರಲಿಲ್ಲ ಎಂದು ನೆನೆಸಿಕೊಂಡರು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ