B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)

B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)


ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ
ಸೋಮನಾಳ ಗ್ರಾಮದಲ್ಲಿನ ಮೃತ ಪಿಎಸ್ಐ ಪರಶುರಾಮ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ B.Y ವಿಜಯೇಂದ್ರ (B.Y Vijayendra) ತರಾಟೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಈ ವೇಳೆ ಮಾತನಾಡಿದ ಅವರು, ಘಟನೆ ನಡೆದು 11 ದಿನವಾಗಿದೆ. ಆದ್ರೆ ಅಪರಾಧಿಗಳ ಬಂಧನವಾಗಿಲ್ಲ. ಅಪರಾಧಿ ಯಾರು ಅಂತ ಎಲ್ಲರಿಗೂ ಗೊತ್ತಿದೆ ಎಂದು ಪರೋಕ್ಷವಾಗಿ ಶಾಸಕ ಚೆನ್ನರೆಡ್ಡಿ‌ಗೆ ಟಾಂಗ್ ಕೊಟ್ಟರು.

Join Our telegram: https://t.me/dcgkannada

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಪೊಲೀಸ್ ಅಧಿಕಾರಿಗಳು ಕೂಡಾ ಒತ್ತಡಕ್ಕೊಳಗಾಗಿದ್ದಾರೆ. ಕೂಡಲೇ ಆರೋಪಿಗಳ ಬಂಧನವಾಗಬೇಕು. ಪರಶುರಾಮ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು. ಪರಶುರಾಮ್ ಪತ್ನಿಗೆ ಸರ್ಕಾರಿ ನೌಕರಿಯನ್ನು ಕೂಡಲೇ ನೀಡಬೇಕು ಎಂದು ವಿಜಯೇಂದ್ರ (B.Y. Vijayendra) ಆಗ್ರಹಿಸಿದರು.

ರಾಜ್ಯ ಸರ್ಕಾರ ಯಾವ ಪ್ರಕರಣವನ್ನೂ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ನಾವು ರಾಜಕೀಯ ತೀಟೆ ತೀರಿಸಿಕೊಳ್ಳಲು ಬಂದಿಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹಾಕೋ ಸಾಧ್ಯತೆ ಇದೆ ಎಂದು ಗುಡುಗಿದರು.

ಇದನ್ನೂ ಓದಿ: KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

ತುಂಗಭದ್ರಾ ಜಲಾಶಯ ಮೂರು ರಾಜ್ಯಗಳ ರೈತರಿಗೆ ಅನುಕೂಲವಾಗುವ ಜಲಾಶಯವಾಗಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ರೈತರಿಗೆ ಅನುಕೂಲವಾಗಿದೆ. ಈ ಬಾರಿ ಸಾಕಷ್ಟು ಮಳೆಯಾಗಿ ಜಲಾಶಯ ಭರ್ತಿಯಾಗಿತ್ತು ಎಂದರು.

ಎರಡು ಬೆಳೆ ಬೆಳೆಯಬಹುದು ಎಂದು ರೈತರಿಗೆ ಖುಷಿಯಾಗಿತ್ತು. ನಾನು ಡಿಸಿಎಂ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳದ್ದಕ್ಕೆ ಈ ಘಟನೆಯಾಗಿದೆ. ಆದರೆ ಈ ಘಟನೆಗೆ ಯಾರೂ ಹೊಣೆಗಾರರಲ್ಲ ಎಂದು ಡಿಸಿಎಂ ಹೇಳಿದ್ದಾರೆ. ಜಲಸಂಪನ್ಮೂಲ ಸಚಿವರಿಗೆ ಜಲ, ಮತ್ತು ರೈತರ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ಸಂಪನ್ಮೂಲದ ಬಗ್ಗೆ ಮಾತ್ರ ಆಸಕ್ತಿ. ಗೇಟ್ ಕಿತ್ತು ಹೋಗಿರೋದಕ್ಕೆ ರಾಜ್ಯ ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಪ್ರತಿ ಹೆಕ್ಟೇರ್ ಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಚೀಫ್ ಇಂಜಿನಿಯರ್ ನೇಮಕಾತಿ ಮಾಡಿಲ್ಲ. ನಾವು ರಾಜಕೀಯ ಮಾಡೋದಕ್ಕೆ ಅಲ್ಲ. ರಾಜ್ಯ ಸರಕಾರ ರೈತರ ನೆರವಿಗೆ ಬರಬೇಕು ಎಂಬುದು ಒತ್ತಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ಹೇಳಿದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ