B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)

B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)


ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ
ಸೋಮನಾಳ ಗ್ರಾಮದಲ್ಲಿನ ಮೃತ ಪಿಎಸ್ಐ ಪರಶುರಾಮ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ B.Y ವಿಜಯೇಂದ್ರ (B.Y Vijayendra) ತರಾಟೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಈ ವೇಳೆ ಮಾತನಾಡಿದ ಅವರು, ಘಟನೆ ನಡೆದು 11 ದಿನವಾಗಿದೆ. ಆದ್ರೆ ಅಪರಾಧಿಗಳ ಬಂಧನವಾಗಿಲ್ಲ. ಅಪರಾಧಿ ಯಾರು ಅಂತ ಎಲ್ಲರಿಗೂ ಗೊತ್ತಿದೆ ಎಂದು ಪರೋಕ್ಷವಾಗಿ ಶಾಸಕ ಚೆನ್ನರೆಡ್ಡಿ‌ಗೆ ಟಾಂಗ್ ಕೊಟ್ಟರು.

Join Our telegram: https://t.me/dcgkannada

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಪೊಲೀಸ್ ಅಧಿಕಾರಿಗಳು ಕೂಡಾ ಒತ್ತಡಕ್ಕೊಳಗಾಗಿದ್ದಾರೆ. ಕೂಡಲೇ ಆರೋಪಿಗಳ ಬಂಧನವಾಗಬೇಕು. ಪರಶುರಾಮ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು. ಪರಶುರಾಮ್ ಪತ್ನಿಗೆ ಸರ್ಕಾರಿ ನೌಕರಿಯನ್ನು ಕೂಡಲೇ ನೀಡಬೇಕು ಎಂದು ವಿಜಯೇಂದ್ರ (B.Y. Vijayendra) ಆಗ್ರಹಿಸಿದರು.

ರಾಜ್ಯ ಸರ್ಕಾರ ಯಾವ ಪ್ರಕರಣವನ್ನೂ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ನಾವು ರಾಜಕೀಯ ತೀಟೆ ತೀರಿಸಿಕೊಳ್ಳಲು ಬಂದಿಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹಾಕೋ ಸಾಧ್ಯತೆ ಇದೆ ಎಂದು ಗುಡುಗಿದರು.

ಇದನ್ನೂ ಓದಿ: KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

ತುಂಗಭದ್ರಾ ಜಲಾಶಯ ಮೂರು ರಾಜ್ಯಗಳ ರೈತರಿಗೆ ಅನುಕೂಲವಾಗುವ ಜಲಾಶಯವಾಗಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ರೈತರಿಗೆ ಅನುಕೂಲವಾಗಿದೆ. ಈ ಬಾರಿ ಸಾಕಷ್ಟು ಮಳೆಯಾಗಿ ಜಲಾಶಯ ಭರ್ತಿಯಾಗಿತ್ತು ಎಂದರು.

ಎರಡು ಬೆಳೆ ಬೆಳೆಯಬಹುದು ಎಂದು ರೈತರಿಗೆ ಖುಷಿಯಾಗಿತ್ತು. ನಾನು ಡಿಸಿಎಂ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳದ್ದಕ್ಕೆ ಈ ಘಟನೆಯಾಗಿದೆ. ಆದರೆ ಈ ಘಟನೆಗೆ ಯಾರೂ ಹೊಣೆಗಾರರಲ್ಲ ಎಂದು ಡಿಸಿಎಂ ಹೇಳಿದ್ದಾರೆ. ಜಲಸಂಪನ್ಮೂಲ ಸಚಿವರಿಗೆ ಜಲ, ಮತ್ತು ರೈತರ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ಸಂಪನ್ಮೂಲದ ಬಗ್ಗೆ ಮಾತ್ರ ಆಸಕ್ತಿ. ಗೇಟ್ ಕಿತ್ತು ಹೋಗಿರೋದಕ್ಕೆ ರಾಜ್ಯ ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಪ್ರತಿ ಹೆಕ್ಟೇರ್ ಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಚೀಫ್ ಇಂಜಿನಿಯರ್ ನೇಮಕಾತಿ ಮಾಡಿಲ್ಲ. ನಾವು ರಾಜಕೀಯ ಮಾಡೋದಕ್ಕೆ ಅಲ್ಲ. ರಾಜ್ಯ ಸರಕಾರ ರೈತರ ನೆರವಿಗೆ ಬರಬೇಕು ಎಂಬುದು ಒತ್ತಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ಹೇಳಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ