B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)

B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)


ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ
ಸೋಮನಾಳ ಗ್ರಾಮದಲ್ಲಿನ ಮೃತ ಪಿಎಸ್ಐ ಪರಶುರಾಮ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ B.Y ವಿಜಯೇಂದ್ರ (B.Y Vijayendra) ತರಾಟೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಈ ವೇಳೆ ಮಾತನಾಡಿದ ಅವರು, ಘಟನೆ ನಡೆದು 11 ದಿನವಾಗಿದೆ. ಆದ್ರೆ ಅಪರಾಧಿಗಳ ಬಂಧನವಾಗಿಲ್ಲ. ಅಪರಾಧಿ ಯಾರು ಅಂತ ಎಲ್ಲರಿಗೂ ಗೊತ್ತಿದೆ ಎಂದು ಪರೋಕ್ಷವಾಗಿ ಶಾಸಕ ಚೆನ್ನರೆಡ್ಡಿ‌ಗೆ ಟಾಂಗ್ ಕೊಟ್ಟರು.

Join Our telegram: https://t.me/dcgkannada

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಪೊಲೀಸ್ ಅಧಿಕಾರಿಗಳು ಕೂಡಾ ಒತ್ತಡಕ್ಕೊಳಗಾಗಿದ್ದಾರೆ. ಕೂಡಲೇ ಆರೋಪಿಗಳ ಬಂಧನವಾಗಬೇಕು. ಪರಶುರಾಮ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು. ಪರಶುರಾಮ್ ಪತ್ನಿಗೆ ಸರ್ಕಾರಿ ನೌಕರಿಯನ್ನು ಕೂಡಲೇ ನೀಡಬೇಕು ಎಂದು ವಿಜಯೇಂದ್ರ (B.Y. Vijayendra) ಆಗ್ರಹಿಸಿದರು.

ರಾಜ್ಯ ಸರ್ಕಾರ ಯಾವ ಪ್ರಕರಣವನ್ನೂ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ನಾವು ರಾಜಕೀಯ ತೀಟೆ ತೀರಿಸಿಕೊಳ್ಳಲು ಬಂದಿಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹಾಕೋ ಸಾಧ್ಯತೆ ಇದೆ ಎಂದು ಗುಡುಗಿದರು.

ಇದನ್ನೂ ಓದಿ: KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

ತುಂಗಭದ್ರಾ ಜಲಾಶಯ ಮೂರು ರಾಜ್ಯಗಳ ರೈತರಿಗೆ ಅನುಕೂಲವಾಗುವ ಜಲಾಶಯವಾಗಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ರೈತರಿಗೆ ಅನುಕೂಲವಾಗಿದೆ. ಈ ಬಾರಿ ಸಾಕಷ್ಟು ಮಳೆಯಾಗಿ ಜಲಾಶಯ ಭರ್ತಿಯಾಗಿತ್ತು ಎಂದರು.

ಎರಡು ಬೆಳೆ ಬೆಳೆಯಬಹುದು ಎಂದು ರೈತರಿಗೆ ಖುಷಿಯಾಗಿತ್ತು. ನಾನು ಡಿಸಿಎಂ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳದ್ದಕ್ಕೆ ಈ ಘಟನೆಯಾಗಿದೆ. ಆದರೆ ಈ ಘಟನೆಗೆ ಯಾರೂ ಹೊಣೆಗಾರರಲ್ಲ ಎಂದು ಡಿಸಿಎಂ ಹೇಳಿದ್ದಾರೆ. ಜಲಸಂಪನ್ಮೂಲ ಸಚಿವರಿಗೆ ಜಲ, ಮತ್ತು ರೈತರ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ಸಂಪನ್ಮೂಲದ ಬಗ್ಗೆ ಮಾತ್ರ ಆಸಕ್ತಿ. ಗೇಟ್ ಕಿತ್ತು ಹೋಗಿರೋದಕ್ಕೆ ರಾಜ್ಯ ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಪ್ರತಿ ಹೆಕ್ಟೇರ್ ಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಚೀಫ್ ಇಂಜಿನಿಯರ್ ನೇಮಕಾತಿ ಮಾಡಿಲ್ಲ. ನಾವು ರಾಜಕೀಯ ಮಾಡೋದಕ್ಕೆ ಅಲ್ಲ. ರಾಜ್ಯ ಸರಕಾರ ರೈತರ ನೆರವಿಗೆ ಬರಬೇಕು ಎಂಬುದು ಒತ್ತಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ಹೇಳಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು