B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)

B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)


ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕಿನ
ಸೋಮನಾಳ ಗ್ರಾಮದಲ್ಲಿನ ಮೃತ ಪಿಎಸ್ಐ ಪರಶುರಾಮ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ B.Y ವಿಜಯೇಂದ್ರ (B.Y Vijayendra) ತರಾಟೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಈ ವೇಳೆ ಮಾತನಾಡಿದ ಅವರು, ಘಟನೆ ನಡೆದು 11 ದಿನವಾಗಿದೆ. ಆದ್ರೆ ಅಪರಾಧಿಗಳ ಬಂಧನವಾಗಿಲ್ಲ. ಅಪರಾಧಿ ಯಾರು ಅಂತ ಎಲ್ಲರಿಗೂ ಗೊತ್ತಿದೆ ಎಂದು ಪರೋಕ್ಷವಾಗಿ ಶಾಸಕ ಚೆನ್ನರೆಡ್ಡಿ‌ಗೆ ಟಾಂಗ್ ಕೊಟ್ಟರು.

Join Our telegram: https://t.me/dcgkannada

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಪೊಲೀಸ್ ಅಧಿಕಾರಿಗಳು ಕೂಡಾ ಒತ್ತಡಕ್ಕೊಳಗಾಗಿದ್ದಾರೆ. ಕೂಡಲೇ ಆರೋಪಿಗಳ ಬಂಧನವಾಗಬೇಕು. ಪರಶುರಾಮ್ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಬೇಕು. ಪರಶುರಾಮ್ ಪತ್ನಿಗೆ ಸರ್ಕಾರಿ ನೌಕರಿಯನ್ನು ಕೂಡಲೇ ನೀಡಬೇಕು ಎಂದು ವಿಜಯೇಂದ್ರ (B.Y. Vijayendra) ಆಗ್ರಹಿಸಿದರು.

ರಾಜ್ಯ ಸರ್ಕಾರ ಯಾವ ಪ್ರಕರಣವನ್ನೂ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ನಾವು ರಾಜಕೀಯ ತೀಟೆ ತೀರಿಸಿಕೊಳ್ಳಲು ಬಂದಿಲ್ಲ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು. ಇಲ್ಲದಿದ್ದರೆ ಪ್ರಕರಣ ಮುಚ್ಚಿ ಹಾಕೋ ಸಾಧ್ಯತೆ ಇದೆ ಎಂದು ಗುಡುಗಿದರು.

ಇದನ್ನೂ ಓದಿ: KRS Dam: ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ (ವಿಡಿಯೋ ನೋಡಿ)

ತುಂಗಭದ್ರಾ ಜಲಾಶಯ ಮೂರು ರಾಜ್ಯಗಳ ರೈತರಿಗೆ ಅನುಕೂಲವಾಗುವ ಜಲಾಶಯವಾಗಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ರೈತರಿಗೆ ಅನುಕೂಲವಾಗಿದೆ. ಈ ಬಾರಿ ಸಾಕಷ್ಟು ಮಳೆಯಾಗಿ ಜಲಾಶಯ ಭರ್ತಿಯಾಗಿತ್ತು ಎಂದರು.

ಎರಡು ಬೆಳೆ ಬೆಳೆಯಬಹುದು ಎಂದು ರೈತರಿಗೆ ಖುಷಿಯಾಗಿತ್ತು. ನಾನು ಡಿಸಿಎಂ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳದ್ದಕ್ಕೆ ಈ ಘಟನೆಯಾಗಿದೆ. ಆದರೆ ಈ ಘಟನೆಗೆ ಯಾರೂ ಹೊಣೆಗಾರರಲ್ಲ ಎಂದು ಡಿಸಿಎಂ ಹೇಳಿದ್ದಾರೆ. ಜಲಸಂಪನ್ಮೂಲ ಸಚಿವರಿಗೆ ಜಲ, ಮತ್ತು ರೈತರ ಬಗ್ಗೆ ಆಸಕ್ತಿ ಇಲ್ಲ. ಅವರಿಗೆ ಸಂಪನ್ಮೂಲದ ಬಗ್ಗೆ ಮಾತ್ರ ಆಸಕ್ತಿ. ಗೇಟ್ ಕಿತ್ತು ಹೋಗಿರೋದಕ್ಕೆ ರಾಜ್ಯ ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಪ್ರತಿ ಹೆಕ್ಟೇರ್ ಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಚೀಫ್ ಇಂಜಿನಿಯರ್ ನೇಮಕಾತಿ ಮಾಡಿಲ್ಲ. ನಾವು ರಾಜಕೀಯ ಮಾಡೋದಕ್ಕೆ ಅಲ್ಲ. ರಾಜ್ಯ ಸರಕಾರ ರೈತರ ನೆರವಿಗೆ ಬರಬೇಕು ಎಂಬುದು ಒತ್ತಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y Vijayendra) ಹೇಳಿದರು.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ