Give food to starving children, don't waste it: Basavaraja Kori

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು.

ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಲಿನ ನಾಗರಕ್ಕೆ ಹಾಲೆರೆಯುವುದನ್ನು 12 ನೇ ಶತಮಾನದಲ್ಲಿ ಬಸವಾದಿ ಶರಣರು ಖಂಡಿಸಿ ಚಳುವಳಿ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದರು. ಅಮೂಲ್ಯವಾದ ಹಾಲು, ಸಮತೋಲನ ಆಹಾರವಾಗಿದೆ. ಪೌಷ್ಟಿಕಾಂಶ, ಖನಿಜಗಳನ್ನು ಹೊಂದಿರುವ ಹಾಲನ್ನು ಕಲ್ಲಿಗೆ ಹಾಕದೇ ನಾವು ಕುಡಿದರೆ ದೇಹ ಶಕ್ತಿ ಪಡೆಯುತ್ತದೆ ಎಂದರು. ಹಸಿರು ತೋರಣ ಬಳಗದ ಅಧ್ಯಕ್ಷರಾದ ಬಿ.ಎಚ್.ಬಳಬಟ್ಟಿ ಮಾತನಾಡಿ, ಪೌಷ್ಟಿಕಾಂಶಗಳ ಕೊರತೆಯಿಂದ ಮಕ್ಕಳು, ಬಾಣಂತಿಯರು ಸಾವನ್ನಪ್ಪಿದ ವರದಿ ಓದುತ್ತಿದ್ದೇವೆ. ಅಮೂಲ್ಯವಾದ ಹಾಲನ್ನು ಕಲ್ಲಿಗೆ ಎರೆಯದೇ ಅದನ್ನು ಎಲ್ಲರೂ ಕುಡಿದು ಆರೋಗ್ಯವಂತರಾಗಬೇಕೆಂದರು.

ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗವು ಪರಿಸರ ಸಂರಕ್ಷಣೆ ಜೊತೆ ಜೊತೆಯಲ್ಲಿಯೇ ಸಮಾಜದಲ್ಲಿ ಬೇರೂರಿರುವ ಮೌಢ್ಯಗಳನ್ನು ಕಡಿಮೆ ಮಾಡಲು ಮತ್ತು ಆಹಾರದ ಮಹತ್ವ ಸಾರುವ ಕೆಲಸ ಮಾಡುತ್ತಿದೆ ಎಂದರು. ಬಳಗದ ಮಾಜಿ ಅಧ್ಯಕ್ಷರಾದ ರವಿ ಗೂಳಿ ಮಾತನಾಡಿ, ಸಮಾಜದಲ್ಲಿ ಮನೆ ಮಾಡಿರುವ ಅನಿಷ್ಟಗಳು, ಮೂಢ ನಂಬಿಕೆಗಳು ಕ್ರಮೇಣ ಕಡಿಮೆ ಆಗುತ್ತ ನಡೆದಿವೆ ಎಂದರು.

ಡಾ.ವೀರೇಶ ಇಟಗಿ ಮಾತನಾಡಿ, ಹಾಲು ಹಲವು ಪೌಷ್ಟಿಕಾಂಶಗಳಿಂದ ಕೂಡಿದ್ದು, ಅದನ್ನು ವ್ಯರ್ಥ ಮಾಡಬಾರದು ಎಂದರು. ವೇದಿಕೆಯಲ್ಲಿ ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಗಣ್ಯರಾದ ರಾಮು ಪೂಜಾರಿ, ಮಾಜಿ ಅಧ್ಯಕ್ಷರಾದ ಕೆ. ಆರ್. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ಗೌರವಾಧ್ಯಕ್ಷ ಜಿ.ಎಂ.ಹುಲಗಣ್ಣಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಮುಖ್ಯ ಗುರುಗಳಾದ ಚಿನ್ನಪ್ಪ ಬಿ. ಚಿತ್ತರಗಿ, ಬಿ. ಎಂ. ಪಲ್ಲೇದ, ಸುರೇಶ ಕಲಾಲ, ರವಿ ತಡಸದ, ಡಾ.ವಿಜಯಕುಮಾರ ಗೂಳಿ, ವೀರೇಶ ಹಂಪನಗೌಡ್ರ, ಡಾ. ಚಂದ್ರಶೇಖರ ಶಿವಯೋಗಿಮಠ, ವಿರುಪಾಕ್ಷಿ ಪತ್ತಾರ, ವಿಶ್ವನಾಥ ಪಾಟೀಲ, ಶಿಕ್ಷಕರಾದ ಸರೋಜಾ ಕಿತ್ತೂರು, ಶಾರದಾ ಮಹಾಂತನವರ, ರಾಜೇಶ್ವರಿ ಜಂಗೀನ, ಅಕ್ಕಮಹಾದೇವಿ ಕುರಜೋಗಿ, ಗೀತಾ ಕೋಳೂರ ಸೇರಿದಂತೆ ಹಸಿರು ತೋರಣ ಬಳಗದ ಸದಸ್ಯರಿದ್ದರು.

ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸರೋಜಾ ಕಿತ್ತೂರು ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲು ವಿತರಿಸಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ