Give food to starving children, don't waste it: Basavaraja Kori

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು.

ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಲಿನ ನಾಗರಕ್ಕೆ ಹಾಲೆರೆಯುವುದನ್ನು 12 ನೇ ಶತಮಾನದಲ್ಲಿ ಬಸವಾದಿ ಶರಣರು ಖಂಡಿಸಿ ಚಳುವಳಿ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದರು. ಅಮೂಲ್ಯವಾದ ಹಾಲು, ಸಮತೋಲನ ಆಹಾರವಾಗಿದೆ. ಪೌಷ್ಟಿಕಾಂಶ, ಖನಿಜಗಳನ್ನು ಹೊಂದಿರುವ ಹಾಲನ್ನು ಕಲ್ಲಿಗೆ ಹಾಕದೇ ನಾವು ಕುಡಿದರೆ ದೇಹ ಶಕ್ತಿ ಪಡೆಯುತ್ತದೆ ಎಂದರು. ಹಸಿರು ತೋರಣ ಬಳಗದ ಅಧ್ಯಕ್ಷರಾದ ಬಿ.ಎಚ್.ಬಳಬಟ್ಟಿ ಮಾತನಾಡಿ, ಪೌಷ್ಟಿಕಾಂಶಗಳ ಕೊರತೆಯಿಂದ ಮಕ್ಕಳು, ಬಾಣಂತಿಯರು ಸಾವನ್ನಪ್ಪಿದ ವರದಿ ಓದುತ್ತಿದ್ದೇವೆ. ಅಮೂಲ್ಯವಾದ ಹಾಲನ್ನು ಕಲ್ಲಿಗೆ ಎರೆಯದೇ ಅದನ್ನು ಎಲ್ಲರೂ ಕುಡಿದು ಆರೋಗ್ಯವಂತರಾಗಬೇಕೆಂದರು.

ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗವು ಪರಿಸರ ಸಂರಕ್ಷಣೆ ಜೊತೆ ಜೊತೆಯಲ್ಲಿಯೇ ಸಮಾಜದಲ್ಲಿ ಬೇರೂರಿರುವ ಮೌಢ್ಯಗಳನ್ನು ಕಡಿಮೆ ಮಾಡಲು ಮತ್ತು ಆಹಾರದ ಮಹತ್ವ ಸಾರುವ ಕೆಲಸ ಮಾಡುತ್ತಿದೆ ಎಂದರು. ಬಳಗದ ಮಾಜಿ ಅಧ್ಯಕ್ಷರಾದ ರವಿ ಗೂಳಿ ಮಾತನಾಡಿ, ಸಮಾಜದಲ್ಲಿ ಮನೆ ಮಾಡಿರುವ ಅನಿಷ್ಟಗಳು, ಮೂಢ ನಂಬಿಕೆಗಳು ಕ್ರಮೇಣ ಕಡಿಮೆ ಆಗುತ್ತ ನಡೆದಿವೆ ಎಂದರು.

ಡಾ.ವೀರೇಶ ಇಟಗಿ ಮಾತನಾಡಿ, ಹಾಲು ಹಲವು ಪೌಷ್ಟಿಕಾಂಶಗಳಿಂದ ಕೂಡಿದ್ದು, ಅದನ್ನು ವ್ಯರ್ಥ ಮಾಡಬಾರದು ಎಂದರು. ವೇದಿಕೆಯಲ್ಲಿ ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಗಣ್ಯರಾದ ರಾಮು ಪೂಜಾರಿ, ಮಾಜಿ ಅಧ್ಯಕ್ಷರಾದ ಕೆ. ಆರ್. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ಗೌರವಾಧ್ಯಕ್ಷ ಜಿ.ಎಂ.ಹುಲಗಣ್ಣಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಮುಖ್ಯ ಗುರುಗಳಾದ ಚಿನ್ನಪ್ಪ ಬಿ. ಚಿತ್ತರಗಿ, ಬಿ. ಎಂ. ಪಲ್ಲೇದ, ಸುರೇಶ ಕಲಾಲ, ರವಿ ತಡಸದ, ಡಾ.ವಿಜಯಕುಮಾರ ಗೂಳಿ, ವೀರೇಶ ಹಂಪನಗೌಡ್ರ, ಡಾ. ಚಂದ್ರಶೇಖರ ಶಿವಯೋಗಿಮಠ, ವಿರುಪಾಕ್ಷಿ ಪತ್ತಾರ, ವಿಶ್ವನಾಥ ಪಾಟೀಲ, ಶಿಕ್ಷಕರಾದ ಸರೋಜಾ ಕಿತ್ತೂರು, ಶಾರದಾ ಮಹಾಂತನವರ, ರಾಜೇಶ್ವರಿ ಜಂಗೀನ, ಅಕ್ಕಮಹಾದೇವಿ ಕುರಜೋಗಿ, ಗೀತಾ ಕೋಳೂರ ಸೇರಿದಂತೆ ಹಸಿರು ತೋರಣ ಬಳಗದ ಸದಸ್ಯರಿದ್ದರು.

ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸರೋಜಾ ಕಿತ್ತೂರು ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲು ವಿತರಿಸಲಾಯಿತು.

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ