Give food to starving children, don't waste it: Basavaraja Kori

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು.

ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಲಿನ ನಾಗರಕ್ಕೆ ಹಾಲೆರೆಯುವುದನ್ನು 12 ನೇ ಶತಮಾನದಲ್ಲಿ ಬಸವಾದಿ ಶರಣರು ಖಂಡಿಸಿ ಚಳುವಳಿ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದರು. ಅಮೂಲ್ಯವಾದ ಹಾಲು, ಸಮತೋಲನ ಆಹಾರವಾಗಿದೆ. ಪೌಷ್ಟಿಕಾಂಶ, ಖನಿಜಗಳನ್ನು ಹೊಂದಿರುವ ಹಾಲನ್ನು ಕಲ್ಲಿಗೆ ಹಾಕದೇ ನಾವು ಕುಡಿದರೆ ದೇಹ ಶಕ್ತಿ ಪಡೆಯುತ್ತದೆ ಎಂದರು. ಹಸಿರು ತೋರಣ ಬಳಗದ ಅಧ್ಯಕ್ಷರಾದ ಬಿ.ಎಚ್.ಬಳಬಟ್ಟಿ ಮಾತನಾಡಿ, ಪೌಷ್ಟಿಕಾಂಶಗಳ ಕೊರತೆಯಿಂದ ಮಕ್ಕಳು, ಬಾಣಂತಿಯರು ಸಾವನ್ನಪ್ಪಿದ ವರದಿ ಓದುತ್ತಿದ್ದೇವೆ. ಅಮೂಲ್ಯವಾದ ಹಾಲನ್ನು ಕಲ್ಲಿಗೆ ಎರೆಯದೇ ಅದನ್ನು ಎಲ್ಲರೂ ಕುಡಿದು ಆರೋಗ್ಯವಂತರಾಗಬೇಕೆಂದರು.

ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗವು ಪರಿಸರ ಸಂರಕ್ಷಣೆ ಜೊತೆ ಜೊತೆಯಲ್ಲಿಯೇ ಸಮಾಜದಲ್ಲಿ ಬೇರೂರಿರುವ ಮೌಢ್ಯಗಳನ್ನು ಕಡಿಮೆ ಮಾಡಲು ಮತ್ತು ಆಹಾರದ ಮಹತ್ವ ಸಾರುವ ಕೆಲಸ ಮಾಡುತ್ತಿದೆ ಎಂದರು. ಬಳಗದ ಮಾಜಿ ಅಧ್ಯಕ್ಷರಾದ ರವಿ ಗೂಳಿ ಮಾತನಾಡಿ, ಸಮಾಜದಲ್ಲಿ ಮನೆ ಮಾಡಿರುವ ಅನಿಷ್ಟಗಳು, ಮೂಢ ನಂಬಿಕೆಗಳು ಕ್ರಮೇಣ ಕಡಿಮೆ ಆಗುತ್ತ ನಡೆದಿವೆ ಎಂದರು.

ಡಾ.ವೀರೇಶ ಇಟಗಿ ಮಾತನಾಡಿ, ಹಾಲು ಹಲವು ಪೌಷ್ಟಿಕಾಂಶಗಳಿಂದ ಕೂಡಿದ್ದು, ಅದನ್ನು ವ್ಯರ್ಥ ಮಾಡಬಾರದು ಎಂದರು. ವೇದಿಕೆಯಲ್ಲಿ ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಗಣ್ಯರಾದ ರಾಮು ಪೂಜಾರಿ, ಮಾಜಿ ಅಧ್ಯಕ್ಷರಾದ ಕೆ. ಆರ್. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ಗೌರವಾಧ್ಯಕ್ಷ ಜಿ.ಎಂ.ಹುಲಗಣ್ಣಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಮುಖ್ಯ ಗುರುಗಳಾದ ಚಿನ್ನಪ್ಪ ಬಿ. ಚಿತ್ತರಗಿ, ಬಿ. ಎಂ. ಪಲ್ಲೇದ, ಸುರೇಶ ಕಲಾಲ, ರವಿ ತಡಸದ, ಡಾ.ವಿಜಯಕುಮಾರ ಗೂಳಿ, ವೀರೇಶ ಹಂಪನಗೌಡ್ರ, ಡಾ. ಚಂದ್ರಶೇಖರ ಶಿವಯೋಗಿಮಠ, ವಿರುಪಾಕ್ಷಿ ಪತ್ತಾರ, ವಿಶ್ವನಾಥ ಪಾಟೀಲ, ಶಿಕ್ಷಕರಾದ ಸರೋಜಾ ಕಿತ್ತೂರು, ಶಾರದಾ ಮಹಾಂತನವರ, ರಾಜೇಶ್ವರಿ ಜಂಗೀನ, ಅಕ್ಕಮಹಾದೇವಿ ಕುರಜೋಗಿ, ಗೀತಾ ಕೋಳೂರ ಸೇರಿದಂತೆ ಹಸಿರು ತೋರಣ ಬಳಗದ ಸದಸ್ಯರಿದ್ದರು.

ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸರೋಜಾ ಕಿತ್ತೂರು ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲು ವಿತರಿಸಲಾಯಿತು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ