Give food to starving children, don't waste it: Basavaraja Kori

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು.

ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಲಿನ ನಾಗರಕ್ಕೆ ಹಾಲೆರೆಯುವುದನ್ನು 12 ನೇ ಶತಮಾನದಲ್ಲಿ ಬಸವಾದಿ ಶರಣರು ಖಂಡಿಸಿ ಚಳುವಳಿ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದರು. ಅಮೂಲ್ಯವಾದ ಹಾಲು, ಸಮತೋಲನ ಆಹಾರವಾಗಿದೆ. ಪೌಷ್ಟಿಕಾಂಶ, ಖನಿಜಗಳನ್ನು ಹೊಂದಿರುವ ಹಾಲನ್ನು ಕಲ್ಲಿಗೆ ಹಾಕದೇ ನಾವು ಕುಡಿದರೆ ದೇಹ ಶಕ್ತಿ ಪಡೆಯುತ್ತದೆ ಎಂದರು. ಹಸಿರು ತೋರಣ ಬಳಗದ ಅಧ್ಯಕ್ಷರಾದ ಬಿ.ಎಚ್.ಬಳಬಟ್ಟಿ ಮಾತನಾಡಿ, ಪೌಷ್ಟಿಕಾಂಶಗಳ ಕೊರತೆಯಿಂದ ಮಕ್ಕಳು, ಬಾಣಂತಿಯರು ಸಾವನ್ನಪ್ಪಿದ ವರದಿ ಓದುತ್ತಿದ್ದೇವೆ. ಅಮೂಲ್ಯವಾದ ಹಾಲನ್ನು ಕಲ್ಲಿಗೆ ಎರೆಯದೇ ಅದನ್ನು ಎಲ್ಲರೂ ಕುಡಿದು ಆರೋಗ್ಯವಂತರಾಗಬೇಕೆಂದರು.

ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗವು ಪರಿಸರ ಸಂರಕ್ಷಣೆ ಜೊತೆ ಜೊತೆಯಲ್ಲಿಯೇ ಸಮಾಜದಲ್ಲಿ ಬೇರೂರಿರುವ ಮೌಢ್ಯಗಳನ್ನು ಕಡಿಮೆ ಮಾಡಲು ಮತ್ತು ಆಹಾರದ ಮಹತ್ವ ಸಾರುವ ಕೆಲಸ ಮಾಡುತ್ತಿದೆ ಎಂದರು. ಬಳಗದ ಮಾಜಿ ಅಧ್ಯಕ್ಷರಾದ ರವಿ ಗೂಳಿ ಮಾತನಾಡಿ, ಸಮಾಜದಲ್ಲಿ ಮನೆ ಮಾಡಿರುವ ಅನಿಷ್ಟಗಳು, ಮೂಢ ನಂಬಿಕೆಗಳು ಕ್ರಮೇಣ ಕಡಿಮೆ ಆಗುತ್ತ ನಡೆದಿವೆ ಎಂದರು.

ಡಾ.ವೀರೇಶ ಇಟಗಿ ಮಾತನಾಡಿ, ಹಾಲು ಹಲವು ಪೌಷ್ಟಿಕಾಂಶಗಳಿಂದ ಕೂಡಿದ್ದು, ಅದನ್ನು ವ್ಯರ್ಥ ಮಾಡಬಾರದು ಎಂದರು. ವೇದಿಕೆಯಲ್ಲಿ ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಗಣ್ಯರಾದ ರಾಮು ಪೂಜಾರಿ, ಮಾಜಿ ಅಧ್ಯಕ್ಷರಾದ ಕೆ. ಆರ್. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ಗೌರವಾಧ್ಯಕ್ಷ ಜಿ.ಎಂ.ಹುಲಗಣ್ಣಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಮುಖ್ಯ ಗುರುಗಳಾದ ಚಿನ್ನಪ್ಪ ಬಿ. ಚಿತ್ತರಗಿ, ಬಿ. ಎಂ. ಪಲ್ಲೇದ, ಸುರೇಶ ಕಲಾಲ, ರವಿ ತಡಸದ, ಡಾ.ವಿಜಯಕುಮಾರ ಗೂಳಿ, ವೀರೇಶ ಹಂಪನಗೌಡ್ರ, ಡಾ. ಚಂದ್ರಶೇಖರ ಶಿವಯೋಗಿಮಠ, ವಿರುಪಾಕ್ಷಿ ಪತ್ತಾರ, ವಿಶ್ವನಾಥ ಪಾಟೀಲ, ಶಿಕ್ಷಕರಾದ ಸರೋಜಾ ಕಿತ್ತೂರು, ಶಾರದಾ ಮಹಾಂತನವರ, ರಾಜೇಶ್ವರಿ ಜಂಗೀನ, ಅಕ್ಕಮಹಾದೇವಿ ಕುರಜೋಗಿ, ಗೀತಾ ಕೋಳೂರ ಸೇರಿದಂತೆ ಹಸಿರು ತೋರಣ ಬಳಗದ ಸದಸ್ಯರಿದ್ದರು.

ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸರೋಜಾ ಕಿತ್ತೂರು ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲು ವಿತರಿಸಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ