Give food to starving children, don't waste it: Basavaraja Kori

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು.

ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ “ಹಾಲು ಕುಡಿಯುವ ಹಬ್ಬ”ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಲ್ಲಿನ ನಾಗರಕ್ಕೆ ಹಾಲೆರೆಯುವುದನ್ನು 12 ನೇ ಶತಮಾನದಲ್ಲಿ ಬಸವಾದಿ ಶರಣರು ಖಂಡಿಸಿ ಚಳುವಳಿ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಿದರು. ಅಮೂಲ್ಯವಾದ ಹಾಲು, ಸಮತೋಲನ ಆಹಾರವಾಗಿದೆ. ಪೌಷ್ಟಿಕಾಂಶ, ಖನಿಜಗಳನ್ನು ಹೊಂದಿರುವ ಹಾಲನ್ನು ಕಲ್ಲಿಗೆ ಹಾಕದೇ ನಾವು ಕುಡಿದರೆ ದೇಹ ಶಕ್ತಿ ಪಡೆಯುತ್ತದೆ ಎಂದರು. ಹಸಿರು ತೋರಣ ಬಳಗದ ಅಧ್ಯಕ್ಷರಾದ ಬಿ.ಎಚ್.ಬಳಬಟ್ಟಿ ಮಾತನಾಡಿ, ಪೌಷ್ಟಿಕಾಂಶಗಳ ಕೊರತೆಯಿಂದ ಮಕ್ಕಳು, ಬಾಣಂತಿಯರು ಸಾವನ್ನಪ್ಪಿದ ವರದಿ ಓದುತ್ತಿದ್ದೇವೆ. ಅಮೂಲ್ಯವಾದ ಹಾಲನ್ನು ಕಲ್ಲಿಗೆ ಎರೆಯದೇ ಅದನ್ನು ಎಲ್ಲರೂ ಕುಡಿದು ಆರೋಗ್ಯವಂತರಾಗಬೇಕೆಂದರು.

ಹತೋಗೆಬ ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗವು ಪರಿಸರ ಸಂರಕ್ಷಣೆ ಜೊತೆ ಜೊತೆಯಲ್ಲಿಯೇ ಸಮಾಜದಲ್ಲಿ ಬೇರೂರಿರುವ ಮೌಢ್ಯಗಳನ್ನು ಕಡಿಮೆ ಮಾಡಲು ಮತ್ತು ಆಹಾರದ ಮಹತ್ವ ಸಾರುವ ಕೆಲಸ ಮಾಡುತ್ತಿದೆ ಎಂದರು. ಬಳಗದ ಮಾಜಿ ಅಧ್ಯಕ್ಷರಾದ ರವಿ ಗೂಳಿ ಮಾತನಾಡಿ, ಸಮಾಜದಲ್ಲಿ ಮನೆ ಮಾಡಿರುವ ಅನಿಷ್ಟಗಳು, ಮೂಢ ನಂಬಿಕೆಗಳು ಕ್ರಮೇಣ ಕಡಿಮೆ ಆಗುತ್ತ ನಡೆದಿವೆ ಎಂದರು.

ಡಾ.ವೀರೇಶ ಇಟಗಿ ಮಾತನಾಡಿ, ಹಾಲು ಹಲವು ಪೌಷ್ಟಿಕಾಂಶಗಳಿಂದ ಕೂಡಿದ್ದು, ಅದನ್ನು ವ್ಯರ್ಥ ಮಾಡಬಾರದು ಎಂದರು. ವೇದಿಕೆಯಲ್ಲಿ ಹತೋಗೆಬ ಕಾರ್ಯದರ್ಶಿ ಅಮರೇಶ ಗೂಳಿ, ಗಣ್ಯರಾದ ರಾಮು ಪೂಜಾರಿ, ಮಾಜಿ ಅಧ್ಯಕ್ಷರಾದ ಕೆ. ಆರ್. ಕಾಮಟೆ, ನಾಗಭೂಷಣ ನಾವದಗಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ಗೌರವಾಧ್ಯಕ್ಷ ಜಿ.ಎಂ.ಹುಲಗಣ್ಣಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಮುಖ್ಯ ಗುರುಗಳಾದ ಚಿನ್ನಪ್ಪ ಬಿ. ಚಿತ್ತರಗಿ, ಬಿ. ಎಂ. ಪಲ್ಲೇದ, ಸುರೇಶ ಕಲಾಲ, ರವಿ ತಡಸದ, ಡಾ.ವಿಜಯಕುಮಾರ ಗೂಳಿ, ವೀರೇಶ ಹಂಪನಗೌಡ್ರ, ಡಾ. ಚಂದ್ರಶೇಖರ ಶಿವಯೋಗಿಮಠ, ವಿರುಪಾಕ್ಷಿ ಪತ್ತಾರ, ವಿಶ್ವನಾಥ ಪಾಟೀಲ, ಶಿಕ್ಷಕರಾದ ಸರೋಜಾ ಕಿತ್ತೂರು, ಶಾರದಾ ಮಹಾಂತನವರ, ರಾಜೇಶ್ವರಿ ಜಂಗೀನ, ಅಕ್ಕಮಹಾದೇವಿ ಕುರಜೋಗಿ, ಗೀತಾ ಕೋಳೂರ ಸೇರಿದಂತೆ ಹಸಿರು ತೋರಣ ಬಳಗದ ಸದಸ್ಯರಿದ್ದರು.

ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ ಸ್ವಾಗತಿಸಿ, ನಿರೂಪಿಸಿದರು. ಸರೋಜಾ ಕಿತ್ತೂರು ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲು ವಿತರಿಸಲಾಯಿತು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು