Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ ಮೇರೆಗೆ ಗಾಂಧಿನಗರದ ಹೀರಾ ಅಸೋಸಿ ಯೇಟ್ ಮಾಲೀಕ ರಾಜೀವ್ ಗುಪ್ತಾ ಹಾಗೂ ಇತರರ ವಿರುದ್ಧ ವಂಚನೆ (Gold Fraud), ನಂಬಿಕೆ ದ್ರೋಹ, ಜೀವ ಬೆದರಿಕೆ ಆರೋ ಪದಡಿ ಎಫ್‌ಐಆ‌ರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಏನಿದು ಪ್ರಕರಣ?

ದೂರುದಾರ ರತ್ನಚಾರಿ ಚಿನ್ನದ ವ್ಯಾಪಾರಿಯಾಗಿದ್ದು, ಚಳ್ಳಕೆರೆ ಟೌನ್‌ನಲ್ಲಿ ಚಿನ್ನದ ಅಂಗಡಿ ಹೊಂದಿದ್ದಾರೆ. ಇವರು ನೀಡಿದ ದೂರಿನ ಅನ್ವಯ, ಕೆಲ ವರ್ಷಗಳಿಂದ ಫೈನಾನ್ಸ್ ವ್ಯವಹಾರಗಳ ಸಂಬಂಧ ಹೀರಾ ಅಸೋಸಿಯೇಟ್ ಮಾಲೀಕ ರಾಜೀವ್ ಗುಪ್ತಾ ಪರಿಚಯವಾಗಿದ್ದರು. ಕಳೆದ ಆಗಸ್ಟ್‌ನಲ್ಲಿ ಹೋಲ್‌ಸೇಲ್

ದರದಲ್ಲಿ ಚಿನ್ನ (Gold Fraud) ಕೊಡಿಸುತ್ತೇನೆಂದು ನಂಬಿಸಿದ್ದರು. ಅದರಂತೆ ಅವರು ನನ್ನಿಂದ 40 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ.

ಬಳಿಕಚಿನ್ನ ಕೊಡುವುದಾಗಿ ಗಾಂಧಿನಗರದ ಹೀರಾ ಅಸೋಸಿಯೇಟ್ ಕಚೇರಿಗೆ ನನ್ನನ್ನು ಕರೆಸಿಕೊಂಡಿದ್ದರು. ನಂತರ ಕೆಲವು ದಾಖ ಲೆಗಳಿಗೆ ಸಹಿ ಮಾಡಿದರೆ ಚಿನ್ನ ಕೊಡುವುದಾಗಿ ಬಲವಂತವಾಗಿ ಸಹಿ ಮಾಡಿಸಿಕೊಂಡಿದ್ದಾರೆ. ಬಳಿಕ ಚಿನ್ನ ಕೇಳಿದಕ್ಕೆ ಜೀವ ತೆಗೆಯುವುದಾಗಿ ರಾಜೀವ್ ಗುಪ್ತಾ ಹಾಗೂ ಅವರ ಸಹಚರರು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೀವ ಬೆದರಿಕೆ ಆರೋಪ:

ಬಳಿಕ ರಾಜೀವ್ ಗುಪ್ತಾ ಅವರು ಚಿನ್ನ ಕೊಡುವುದಾಗಿ ನನ್ನ ಮೊಬೈಲ್‌ಗೆ ಕರೆ ಮಾಡಿ ಹಾಗೂ ಸಂದೇಶ ಕಳುಹಿಸಿದ್ದರು. ಆದರೆ, ಯಾವುದೇ ಚಿನ್ನ ಅಥವಾ ಹಣ ನೀಡದೆ ಸುಮಾರು 1 ತಿಂಗಳು ಕಾಲಾಹರಣ ಮಾಡಿದ್ದಾರೆ. ಅ.21 ಮತ್ತೆ ನನ್ನನ್ನು ಭೇಟಿಯಾಗಿದ್ದ ರಾಜೀವ್ ಗುಪ್ತಾ, ಈ ಬಗ್ಗೆ ದೂರು ನೀಡಿದರೆ ನಿನ್ನ ಕಥೆ ಮುಗಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ