Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

ಬೆಂಗಳೂರು: ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು (Gold Theft) ಮಾಡಿದ್ದ ಅಕ್ಕನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ದೊಡ್ಡತೋಗೂರು ನಿವಾಸಿ ಶಶಿಕಲಾ(30) ಬಂಧಿತೆ ಎಂದು ತಿಳಿದು ಬಂದಿದೆ. (Gold Theft)

ಆರೋಪಿಯಿಂದ 5.50 ಲಕ್ಷ ರೂಪಾಯಿ ಮೌಲ್ಯದ 74 ಗ್ರಾಂ ಚಿನ್ನ ಹಾಗೂ 354 ಗ್ರಾಂ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿ ಚಂದ್ರಿಕಾ ಮನೆಯಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ:

ದೂರುದಾರೆ ಚಂದ್ರಿಕಾ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿಯಾಗಿದ್ದಾರೆ. ಪೇಯಿಂಗ್ ಗೆಸ್‌ವೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಾರೆ. ಇವರ ಪತಿ ಶರವಣ ಸರಕು ಸಾಗಣೆ ವಾಹನದ ಚಾಲಕನಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯಲು ಆ.15ರಂದು ಅತ್ತಿಗೆ ಶಶಿಕಲಾ ಅವರ ದೊಡ್ಡತೋಗೂರು ನಿವಾಸಕ್ಕೆ ತೆರಳಿದ್ದರು. ಈ ವೇಳೆ ಚಂದ್ರಿಕಾ ಸಹ ಅಕ್ಕ ಶಶಿಕಲಾ ಮನೆಗೆ ಬಂದಿದ್ದು, ಪತಿಗೆ ಫಾರ್ಮಾ ಸಿಯಲ್ಲಿ ಔಷಧಿ ತರುವಂತೆ ತನ್ನ ಬೈಕ್ ಕೀ ನೀಡಿದರು.

ಔಷಧಿ ತರಲು ಹೋಗಿ ತಂಗಿ ಮನೆಯಲ್ಲೇ ಕಳ್ಳತನ:

ಈ ವೇಳೆ ಶಶಿಕಲಾ, ಬೈಕ್‌ನಲ್ಲಿ ಬೊಮ್ಮನ ಹಳ್ಳಿಯ ಹೊಸೂರು ರಸ್ತೆಯಲ್ಲಿ ವಾಸವಿರುವ ದೊಡ್ಡಮ್ಮನ ಮನೆಗೆ ಬಂದಿದ್ದಾಳೆ. ಈ ವೇಳೆ ದ್ವಿಚಕ್ರ ವಾಹನದ ಕೀ ಬಂಚ್‌ನಲ್ಲಿ ಶಶಿಕಲಾ ತಂಗಿ ಚಂದ್ರಿಕಾಳ ಮನೆಯ ಕೀ ಇರುವುದನ್ನು ಗಮನಿಸಿದ್ದಾಳೆ. ಬಳಿಕ ಜತೆಯಲ್ಲಿ ದೊಡ್ಡ ಮೃನ ಕರೆದುಕೊಂಡು ಆಡುಗೋಡಿಯ ವಿಎಸ್‌ಆರ್ ಲೇಔಟ್‌ಗೆ ಬಂದಿದ್ದು, ತಂಗಿ ಮನೆಯ ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿದ್ದಾಳೆ. ನೀನು ಇಲ್ಲೇ ಇರು. ನಾನು ಔಷಧಿ ತರುತ್ತೇನೆ ಎಂದು ಹೇಳಿ ಚಂದ್ರಿಕಾಳ ಮನೆಯತ್ತ ತೆರಳಿದ್ದಾಳೆ. ಬಳಿಕ ಕೀನಿಂದ ಮನೆ ಬಾಗಿಲು ತೆರೆದು ಮನೆ ಪ್ರವೇಶಿಸಿ ಬೀರುವಿನಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಮಾಡಿದ್ದಾಳೆ. ಬಳಿಕ ದೊಡ್ಡಮ್ಮನ ಜತೆಗೆ ಔಷಧಿ ತೆಗೆದುಕೊಂಡು ಮನೆಗೆ ಬಂದು ಚಂದ್ರಿಕಾಗೆ ಬೈಕ್ ಕೀ ನೀಡಿದ್ದಾಳೆ.

ಸಿಸಿಟಿವಿ ಸುಳಿವು ಆಧರಿಸಿ ಬಂಧನ:

ಪತಿ ಶರವಣನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಆ.20ರಂದು ಮನೆಗೆ ತೆರಳಿ ರುವ ಚಂದ್ರಿಕಾ, ಬೀರು ನೋಡಿದಾಗ ಚಿನ್ನ ಹಾಗೂಬೆಳ್ಳಿ ಆಭರಣಗಳು ಕಳುವಾಗಿರುವುದು ಗೊತ್ತಾಗಿದೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ದೂರಿನಮೇರೆಗೆ ತನಿಖೆಗೆ ಇಳಿದಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಮಾಡಿದಾಗ, ಘಟನಾ ಸ್ಥಳದ ಸುತ್ತಮುತ್ತಲ ಕಟ್ಟಡಗಳ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ದಾಗ, ಶಶಿಕಲಾಳ ಚಲನವಲನ ಸೆರೆಯಾಗಿರು ವುದು ಕಂಡು ಬಂದಿದೆ. ಬಳಿಕ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ತಂಗಿಯ ಮನೆಯಲ್ಲಿ ತಾನೇ ಕಳವು ಮಾಡಿದ್ದಾಗಿ ಹೇಳಿದ್ದಾಳೆ.

ಇದನ್ನೂ ಓದಿ: ನಮಾಜ್ ವಿರಾಮ ರದ್ದು!

ಕದ್ದ ಚಿನ್ನಾಭ ರಣಗಳ ಪೈಕಿ ಕೆಲವನ್ನು ಮನೆಯಲ್ಲೇ ಇರಿಸಿ ದ್ದಳು. ಕೆಲವು ಆಭರಣಗಳನ್ನು ಶಿಕಾರಪಾಳ್ಯ ದೆ ಜ್ಯುವೆಲರಿ ಅಂಗಡಿಯಲ್ಲಿ ಅಡಮಾನ ಇರಿಸಿದಳು. ಆರೋಪಿ ಮಾಹಿತಿ ಮೇರೆಗೆ ಆರಭರಣಗಳನ್ನು ಜಪ್ತಿ ಮಾಡಲಾಗಿದೆ.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ