Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

ಬೆಂಗಳೂರು: ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು (Gold Theft) ಮಾಡಿದ್ದ ಅಕ್ಕನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ದೊಡ್ಡತೋಗೂರು ನಿವಾಸಿ ಶಶಿಕಲಾ(30) ಬಂಧಿತೆ ಎಂದು ತಿಳಿದು ಬಂದಿದೆ. (Gold Theft)

ಆರೋಪಿಯಿಂದ 5.50 ಲಕ್ಷ ರೂಪಾಯಿ ಮೌಲ್ಯದ 74 ಗ್ರಾಂ ಚಿನ್ನ ಹಾಗೂ 354 ಗ್ರಾಂ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿ ಚಂದ್ರಿಕಾ ಮನೆಯಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ:

ದೂರುದಾರೆ ಚಂದ್ರಿಕಾ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿಯಾಗಿದ್ದಾರೆ. ಪೇಯಿಂಗ್ ಗೆಸ್‌ವೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಾರೆ. ಇವರ ಪತಿ ಶರವಣ ಸರಕು ಸಾಗಣೆ ವಾಹನದ ಚಾಲಕನಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯಲು ಆ.15ರಂದು ಅತ್ತಿಗೆ ಶಶಿಕಲಾ ಅವರ ದೊಡ್ಡತೋಗೂರು ನಿವಾಸಕ್ಕೆ ತೆರಳಿದ್ದರು. ಈ ವೇಳೆ ಚಂದ್ರಿಕಾ ಸಹ ಅಕ್ಕ ಶಶಿಕಲಾ ಮನೆಗೆ ಬಂದಿದ್ದು, ಪತಿಗೆ ಫಾರ್ಮಾ ಸಿಯಲ್ಲಿ ಔಷಧಿ ತರುವಂತೆ ತನ್ನ ಬೈಕ್ ಕೀ ನೀಡಿದರು.

ಔಷಧಿ ತರಲು ಹೋಗಿ ತಂಗಿ ಮನೆಯಲ್ಲೇ ಕಳ್ಳತನ:

ಈ ವೇಳೆ ಶಶಿಕಲಾ, ಬೈಕ್‌ನಲ್ಲಿ ಬೊಮ್ಮನ ಹಳ್ಳಿಯ ಹೊಸೂರು ರಸ್ತೆಯಲ್ಲಿ ವಾಸವಿರುವ ದೊಡ್ಡಮ್ಮನ ಮನೆಗೆ ಬಂದಿದ್ದಾಳೆ. ಈ ವೇಳೆ ದ್ವಿಚಕ್ರ ವಾಹನದ ಕೀ ಬಂಚ್‌ನಲ್ಲಿ ಶಶಿಕಲಾ ತಂಗಿ ಚಂದ್ರಿಕಾಳ ಮನೆಯ ಕೀ ಇರುವುದನ್ನು ಗಮನಿಸಿದ್ದಾಳೆ. ಬಳಿಕ ಜತೆಯಲ್ಲಿ ದೊಡ್ಡ ಮೃನ ಕರೆದುಕೊಂಡು ಆಡುಗೋಡಿಯ ವಿಎಸ್‌ಆರ್ ಲೇಔಟ್‌ಗೆ ಬಂದಿದ್ದು, ತಂಗಿ ಮನೆಯ ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿದ್ದಾಳೆ. ನೀನು ಇಲ್ಲೇ ಇರು. ನಾನು ಔಷಧಿ ತರುತ್ತೇನೆ ಎಂದು ಹೇಳಿ ಚಂದ್ರಿಕಾಳ ಮನೆಯತ್ತ ತೆರಳಿದ್ದಾಳೆ. ಬಳಿಕ ಕೀನಿಂದ ಮನೆ ಬಾಗಿಲು ತೆರೆದು ಮನೆ ಪ್ರವೇಶಿಸಿ ಬೀರುವಿನಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಮಾಡಿದ್ದಾಳೆ. ಬಳಿಕ ದೊಡ್ಡಮ್ಮನ ಜತೆಗೆ ಔಷಧಿ ತೆಗೆದುಕೊಂಡು ಮನೆಗೆ ಬಂದು ಚಂದ್ರಿಕಾಗೆ ಬೈಕ್ ಕೀ ನೀಡಿದ್ದಾಳೆ.

ಸಿಸಿಟಿವಿ ಸುಳಿವು ಆಧರಿಸಿ ಬಂಧನ:

ಪತಿ ಶರವಣನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಆ.20ರಂದು ಮನೆಗೆ ತೆರಳಿ ರುವ ಚಂದ್ರಿಕಾ, ಬೀರು ನೋಡಿದಾಗ ಚಿನ್ನ ಹಾಗೂಬೆಳ್ಳಿ ಆಭರಣಗಳು ಕಳುವಾಗಿರುವುದು ಗೊತ್ತಾಗಿದೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ದೂರಿನಮೇರೆಗೆ ತನಿಖೆಗೆ ಇಳಿದಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಮಾಡಿದಾಗ, ಘಟನಾ ಸ್ಥಳದ ಸುತ್ತಮುತ್ತಲ ಕಟ್ಟಡಗಳ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ದಾಗ, ಶಶಿಕಲಾಳ ಚಲನವಲನ ಸೆರೆಯಾಗಿರು ವುದು ಕಂಡು ಬಂದಿದೆ. ಬಳಿಕ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ತಂಗಿಯ ಮನೆಯಲ್ಲಿ ತಾನೇ ಕಳವು ಮಾಡಿದ್ದಾಗಿ ಹೇಳಿದ್ದಾಳೆ.

ಇದನ್ನೂ ಓದಿ: ನಮಾಜ್ ವಿರಾಮ ರದ್ದು!

ಕದ್ದ ಚಿನ್ನಾಭ ರಣಗಳ ಪೈಕಿ ಕೆಲವನ್ನು ಮನೆಯಲ್ಲೇ ಇರಿಸಿ ದ್ದಳು. ಕೆಲವು ಆಭರಣಗಳನ್ನು ಶಿಕಾರಪಾಳ್ಯ ದೆ ಜ್ಯುವೆಲರಿ ಅಂಗಡಿಯಲ್ಲಿ ಅಡಮಾನ ಇರಿಸಿದಳು. ಆರೋಪಿ ಮಾಹಿತಿ ಮೇರೆಗೆ ಆರಭರಣಗಳನ್ನು ಜಪ್ತಿ ಮಾಡಲಾಗಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ