Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!

ಬೆಂಗಳೂರು: ತಂಗಿಯ ಮನೆಯಲ್ಲೇ ಚಿನ್ನಾಭರಣ ಕಳವು (Gold Theft) ಮಾಡಿದ್ದ ಅಕ್ಕನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ದೊಡ್ಡತೋಗೂರು ನಿವಾಸಿ ಶಶಿಕಲಾ(30) ಬಂಧಿತೆ ಎಂದು ತಿಳಿದು ಬಂದಿದೆ. (Gold Theft)

ಆರೋಪಿಯಿಂದ 5.50 ಲಕ್ಷ ರೂಪಾಯಿ ಮೌಲ್ಯದ 74 ಗ್ರಾಂ ಚಿನ್ನ ಹಾಗೂ 354 ಗ್ರಾಂ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿ ಚಂದ್ರಿಕಾ ಮನೆಯಲ್ಲಿ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ:

ದೂರುದಾರೆ ಚಂದ್ರಿಕಾ ಆಡುಗೋಡಿಯ ವಿಎಸ್‌ಆರ್ ಲೇಔಟ್ ನಿವಾಸಿಯಾಗಿದ್ದಾರೆ. ಪೇಯಿಂಗ್ ಗೆಸ್‌ವೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಾರೆ. ಇವರ ಪತಿ ಶರವಣ ಸರಕು ಸಾಗಣೆ ವಾಹನದ ಚಾಲಕನಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯಲು ಆ.15ರಂದು ಅತ್ತಿಗೆ ಶಶಿಕಲಾ ಅವರ ದೊಡ್ಡತೋಗೂರು ನಿವಾಸಕ್ಕೆ ತೆರಳಿದ್ದರು. ಈ ವೇಳೆ ಚಂದ್ರಿಕಾ ಸಹ ಅಕ್ಕ ಶಶಿಕಲಾ ಮನೆಗೆ ಬಂದಿದ್ದು, ಪತಿಗೆ ಫಾರ್ಮಾ ಸಿಯಲ್ಲಿ ಔಷಧಿ ತರುವಂತೆ ತನ್ನ ಬೈಕ್ ಕೀ ನೀಡಿದರು.

ಔಷಧಿ ತರಲು ಹೋಗಿ ತಂಗಿ ಮನೆಯಲ್ಲೇ ಕಳ್ಳತನ:

ಈ ವೇಳೆ ಶಶಿಕಲಾ, ಬೈಕ್‌ನಲ್ಲಿ ಬೊಮ್ಮನ ಹಳ್ಳಿಯ ಹೊಸೂರು ರಸ್ತೆಯಲ್ಲಿ ವಾಸವಿರುವ ದೊಡ್ಡಮ್ಮನ ಮನೆಗೆ ಬಂದಿದ್ದಾಳೆ. ಈ ವೇಳೆ ದ್ವಿಚಕ್ರ ವಾಹನದ ಕೀ ಬಂಚ್‌ನಲ್ಲಿ ಶಶಿಕಲಾ ತಂಗಿ ಚಂದ್ರಿಕಾಳ ಮನೆಯ ಕೀ ಇರುವುದನ್ನು ಗಮನಿಸಿದ್ದಾಳೆ. ಬಳಿಕ ಜತೆಯಲ್ಲಿ ದೊಡ್ಡ ಮೃನ ಕರೆದುಕೊಂಡು ಆಡುಗೋಡಿಯ ವಿಎಸ್‌ಆರ್ ಲೇಔಟ್‌ಗೆ ಬಂದಿದ್ದು, ತಂಗಿ ಮನೆಯ ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿದ್ದಾಳೆ. ನೀನು ಇಲ್ಲೇ ಇರು. ನಾನು ಔಷಧಿ ತರುತ್ತೇನೆ ಎಂದು ಹೇಳಿ ಚಂದ್ರಿಕಾಳ ಮನೆಯತ್ತ ತೆರಳಿದ್ದಾಳೆ. ಬಳಿಕ ಕೀನಿಂದ ಮನೆ ಬಾಗಿಲು ತೆರೆದು ಮನೆ ಪ್ರವೇಶಿಸಿ ಬೀರುವಿನಲ್ಲಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳವು ಮಾಡಿದ್ದಾಳೆ. ಬಳಿಕ ದೊಡ್ಡಮ್ಮನ ಜತೆಗೆ ಔಷಧಿ ತೆಗೆದುಕೊಂಡು ಮನೆಗೆ ಬಂದು ಚಂದ್ರಿಕಾಗೆ ಬೈಕ್ ಕೀ ನೀಡಿದ್ದಾಳೆ.

ಸಿಸಿಟಿವಿ ಸುಳಿವು ಆಧರಿಸಿ ಬಂಧನ:

ಪತಿ ಶರವಣನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಆ.20ರಂದು ಮನೆಗೆ ತೆರಳಿ ರುವ ಚಂದ್ರಿಕಾ, ಬೀರು ನೋಡಿದಾಗ ಚಿನ್ನ ಹಾಗೂಬೆಳ್ಳಿ ಆಭರಣಗಳು ಕಳುವಾಗಿರುವುದು ಗೊತ್ತಾಗಿದೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ದೂರಿನಮೇರೆಗೆ ತನಿಖೆಗೆ ಇಳಿದಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಮಾಡಿದಾಗ, ಘಟನಾ ಸ್ಥಳದ ಸುತ್ತಮುತ್ತಲ ಕಟ್ಟಡಗಳ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ದಾಗ, ಶಶಿಕಲಾಳ ಚಲನವಲನ ಸೆರೆಯಾಗಿರು ವುದು ಕಂಡು ಬಂದಿದೆ. ಬಳಿಕ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ತಂಗಿಯ ಮನೆಯಲ್ಲಿ ತಾನೇ ಕಳವು ಮಾಡಿದ್ದಾಗಿ ಹೇಳಿದ್ದಾಳೆ.

ಇದನ್ನೂ ಓದಿ: ನಮಾಜ್ ವಿರಾಮ ರದ್ದು!

ಕದ್ದ ಚಿನ್ನಾಭ ರಣಗಳ ಪೈಕಿ ಕೆಲವನ್ನು ಮನೆಯಲ್ಲೇ ಇರಿಸಿ ದ್ದಳು. ಕೆಲವು ಆಭರಣಗಳನ್ನು ಶಿಕಾರಪಾಳ್ಯ ದೆ ಜ್ಯುವೆಲರಿ ಅಂಗಡಿಯಲ್ಲಿ ಅಡಮಾನ ಇರಿಸಿದಳು. ಆರೋಪಿ ಮಾಹಿತಿ ಮೇರೆಗೆ ಆರಭರಣಗಳನ್ನು ಜಪ್ತಿ ಮಾಡಲಾಗಿದೆ.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್