ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.

ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ ‘ಚಿನ್ನದ ಪದಕ’ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.

ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪತ್ರಿಕೋದ್ಯಮ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ ‘ಗೋಲ್ಡ್ ಮೆಡಲ್’ ನ ಸಾಧನೆ ತಂದಿದ್ದಾರೆ.

ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.

ಸದ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ.

”ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ ‘ಚಿನ್ನದ ಪದಕ’ ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ ಎಂದಿದ್ದಾರೆ ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

“ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ‌ ಎಂದಿದ್ದಾರೆ‌ ಡಾ. ಬಿ.ಟಿ ಮುದ್ದೇಶ. (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

Latest News

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ