ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.

ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ ‘ಚಿನ್ನದ ಪದಕ’ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.

ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪತ್ರಿಕೋದ್ಯಮ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ ‘ಗೋಲ್ಡ್ ಮೆಡಲ್’ ನ ಸಾಧನೆ ತಂದಿದ್ದಾರೆ.

ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್ ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.

ಸದ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ.

”ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ ‘ಚಿನ್ನದ ಪದಕ’ ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ ಎಂದಿದ್ದಾರೆ ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

“ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ‌ ಎಂದಿದ್ದಾರೆ‌ ಡಾ. ಬಿ.ಟಿ ಮುದ್ದೇಶ. (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ